Homeಮುಖಪುಟಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

ಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

- Advertisement -
- Advertisement -

ಪ್ರಸ್ತುತ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳ’ ಕುರಿತು ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸದಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಿನ್ನೆ ಸುಪ್ರೀಂಕೋರ್ಟ್‌, ಪತ್ರಿಕೆಗಳಲ್ಲಿ ಮುದ್ರಿತ ಹಿಂದಿನ ಸಾರ್ವಜನಿಕ ಕ್ಷಮೆಯಾಚನೆಯು ಅವರ ಜಾಹೀರಾತುಗಳಷ್ಟು ದೊಡ್ಡದಾಗಿದೆಯೇ ಎಂದು ಕೇಳಿತ್ತು. ಇದರ ಬೆನ್ನಲ್ಲಿ ಮತ್ತೆ ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸ ಸಾರ್ವಜನಿಕ ಕ್ಷಮೆಯಾಚನೆಯನ್ನು ಪ್ರಕಟಿಸಿದ್ದಾರೆ.

ಮಂಗಳವಾರ ಜಾಹೀರಾತುಗಳ ಗಾತ್ರದ ಬಗ್ಗೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದಾಗ, ಪತಂಜಲಿಯ ಪರ ವಕೀಲ ಮುಕುಲ್ ರೋಹಟಗಿ, 67 ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗಿದೆ ಮತ್ತು ಅದಕ್ಕೆ “ಹತ್ತಾರು ಲಕ್ಷ” ವೆಚ್ಚವಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೊಹ್ಲಿ, ನೀವು ಪ್ರಕಟಿಸಿದ ಪೂರ್ಣ ಪುಟದ ಜಾಹೀರಾತುಗಳಿಗೆ ಸಮಾನವಾದ ವೆಚ್ಚ ಕ್ಷಮೆಯಾಚನೆಯ ಜಾಹೀರಾತಿಗೆ ವೆಚ್ಚವಾಗಿದೆಯಾ ಎಂದು ಪ್ರಶ್ನಿಸಿದ್ದು, ಪತಂಜಲಿಯ ವಕೀಲರು ಪ್ರಕಟಿಸಿದ ಕ್ಷಮಾಪಣೆಯ ಪ್ರತಿಯನ್ನು ನೀಡದಿದ್ದಕ್ಕಾಗಿ ಪೀಠವು ಛೀಮಾರಿ ಹಾಕಿದೆ.

ಭಾರತದ ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳು ಸೇರಿದಂತೆ ಆಧುನಿಕ ಔಷಧದ ಬಗ್ಗೆ ರಾಮ್‌ದೇವ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧದ ಭಾರತೀಯ ವೈದ್ಯಕೀಯ ಸಂಘ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೋರ್ಟ್‌ ಈ ಮಹತ್ವದ ಅಂಶವನ್ನು ಗಮನಿಸಿದೆ.

ನವೆಂಬರ್ 21ರಂದು, ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಮಾಹಿತಿ ಮತ್ತು ಜಾಹೀರಾತುಗಳನ್ನು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಪತಂಜಲಿಯನ್ನು ಸುಪ್ರೀಂ ಕೋರ್ಟ್ ಕೇಳಿದೆ, ಇಲ್ಲದಿದ್ದರೆ ಭಾರಿ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಇದಲ್ಲದೆ ನವೆಂಬರ್ 22ರಂದು ರಾಮ್‌ದೇವ್ ಅವರು ನಡೆಸಿದ ಪತ್ರಿಕಾಗೋಷ್ಠಿಯ ವೀಡಿಯೊ ಕ್ಲಿಪ್‌ನ್ನು IMA ಮತ್ತೆ ಪೀಠದ ಮುಂದಿಟ್ಟಿತ್ತು. ಇದಲ್ಲದೆ, ರಾಮ್‌ದೇವ್ ಅವರ ಸಂಸ್ಥೆಯು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಖಾಯಿಲೆಗಳನ್ನು ಶಾಶ್ವತವಾಗಿ ಗುಣಪಡಿಸುವುದಾಗಿ ಹೇಳಿಕೊಂಡು ಹಲವಾರು ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ಮುಂದುವರೆಸಿದೆ ಎಂದು ವೈದ್ಯಕೀಯ ಸಂಸ್ಥೆ ಕೊರ್ಟ್‌ ಗಮನಸೆಳೆದಿದೆ.

ಫೆಬ್ರವರಿ 27ರಂದು ಪತಂಜಲಿ ಆಯುರ್ವೇದ್ ಮತ್ತು ಬಾಲಕೃಷ್ಣ ಅವರಿಗೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಮುಂದುವರೆಸಿದ್ದಕ್ಕಾಗಿ ಸುಪ್ರೀಂಕೋರ್ಟ್ ನಿಂದನೆ ನೋಟಿಸ್ ಜಾರಿಗೊಳಿಸಿದೆ ಮತ್ತು ತಾತ್ಕಾಲಿಕವಾಗಿ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸದಂತೆ ನಿಷೇಧ ವಿಧಿಸಿತ್ತು. ಜಾಹೀರಾತುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿತ್ತು. ಮಾರ್ಚ್ 19, ಏಪ್ರಿಲ್ 2 ಮತ್ತು ಏಪ್ರಿಲ್ 10ರಂದು ವಿಚಾರಣೆಯ ಸಂದರ್ಭದಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರನ್ನು ಖುದ್ದಾಗಿ ಕರೆದು, ನ್ಯಾಯಾಲಯದ ನಿಂದನೆಗಾಗಿ ಏಕೆ ಶಿಕ್ಷಿಸಬಾರದು ಎಂದು ಕಾರಣವನ್ನು ನೀಡುವಂತೆ ಹೇಳಿತ್ತು. ನ್ಯಾಯಾಲಯವು ಇಲ್ಲಿಯವರೆಗೆ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ನೀಡಿದ ಎರಡು ಕ್ಷಮೆಯಾಚನೆಗಳನ್ನು ತಿರಸ್ಕರಿಸಿದೆ.

ಇದನ್ನು ಓದಿ: ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...