Homeಮುಖಪುಟಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

ಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

- Advertisement -
- Advertisement -

ಪ್ರಸ್ತುತ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳ’ ಕುರಿತು ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸದಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಿನ್ನೆ ಸುಪ್ರೀಂಕೋರ್ಟ್‌, ಪತ್ರಿಕೆಗಳಲ್ಲಿ ಮುದ್ರಿತ ಹಿಂದಿನ ಸಾರ್ವಜನಿಕ ಕ್ಷಮೆಯಾಚನೆಯು ಅವರ ಜಾಹೀರಾತುಗಳಷ್ಟು ದೊಡ್ಡದಾಗಿದೆಯೇ ಎಂದು ಕೇಳಿತ್ತು. ಇದರ ಬೆನ್ನಲ್ಲಿ ಮತ್ತೆ ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸ ಸಾರ್ವಜನಿಕ ಕ್ಷಮೆಯಾಚನೆಯನ್ನು ಪ್ರಕಟಿಸಿದ್ದಾರೆ.

ಮಂಗಳವಾರ ಜಾಹೀರಾತುಗಳ ಗಾತ್ರದ ಬಗ್ಗೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದಾಗ, ಪತಂಜಲಿಯ ಪರ ವಕೀಲ ಮುಕುಲ್ ರೋಹಟಗಿ, 67 ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗಿದೆ ಮತ್ತು ಅದಕ್ಕೆ “ಹತ್ತಾರು ಲಕ್ಷ” ವೆಚ್ಚವಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೊಹ್ಲಿ, ನೀವು ಪ್ರಕಟಿಸಿದ ಪೂರ್ಣ ಪುಟದ ಜಾಹೀರಾತುಗಳಿಗೆ ಸಮಾನವಾದ ವೆಚ್ಚ ಕ್ಷಮೆಯಾಚನೆಯ ಜಾಹೀರಾತಿಗೆ ವೆಚ್ಚವಾಗಿದೆಯಾ ಎಂದು ಪ್ರಶ್ನಿಸಿದ್ದು, ಪತಂಜಲಿಯ ವಕೀಲರು ಪ್ರಕಟಿಸಿದ ಕ್ಷಮಾಪಣೆಯ ಪ್ರತಿಯನ್ನು ನೀಡದಿದ್ದಕ್ಕಾಗಿ ಪೀಠವು ಛೀಮಾರಿ ಹಾಕಿದೆ.

ಭಾರತದ ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳು ಸೇರಿದಂತೆ ಆಧುನಿಕ ಔಷಧದ ಬಗ್ಗೆ ರಾಮ್‌ದೇವ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧದ ಭಾರತೀಯ ವೈದ್ಯಕೀಯ ಸಂಘ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೋರ್ಟ್‌ ಈ ಮಹತ್ವದ ಅಂಶವನ್ನು ಗಮನಿಸಿದೆ.

ನವೆಂಬರ್ 21ರಂದು, ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಮಾಹಿತಿ ಮತ್ತು ಜಾಹೀರಾತುಗಳನ್ನು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಪತಂಜಲಿಯನ್ನು ಸುಪ್ರೀಂ ಕೋರ್ಟ್ ಕೇಳಿದೆ, ಇಲ್ಲದಿದ್ದರೆ ಭಾರಿ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಇದಲ್ಲದೆ ನವೆಂಬರ್ 22ರಂದು ರಾಮ್‌ದೇವ್ ಅವರು ನಡೆಸಿದ ಪತ್ರಿಕಾಗೋಷ್ಠಿಯ ವೀಡಿಯೊ ಕ್ಲಿಪ್‌ನ್ನು IMA ಮತ್ತೆ ಪೀಠದ ಮುಂದಿಟ್ಟಿತ್ತು. ಇದಲ್ಲದೆ, ರಾಮ್‌ದೇವ್ ಅವರ ಸಂಸ್ಥೆಯು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಖಾಯಿಲೆಗಳನ್ನು ಶಾಶ್ವತವಾಗಿ ಗುಣಪಡಿಸುವುದಾಗಿ ಹೇಳಿಕೊಂಡು ಹಲವಾರು ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ಮುಂದುವರೆಸಿದೆ ಎಂದು ವೈದ್ಯಕೀಯ ಸಂಸ್ಥೆ ಕೊರ್ಟ್‌ ಗಮನಸೆಳೆದಿದೆ.

ಫೆಬ್ರವರಿ 27ರಂದು ಪತಂಜಲಿ ಆಯುರ್ವೇದ್ ಮತ್ತು ಬಾಲಕೃಷ್ಣ ಅವರಿಗೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಮುಂದುವರೆಸಿದ್ದಕ್ಕಾಗಿ ಸುಪ್ರೀಂಕೋರ್ಟ್ ನಿಂದನೆ ನೋಟಿಸ್ ಜಾರಿಗೊಳಿಸಿದೆ ಮತ್ತು ತಾತ್ಕಾಲಿಕವಾಗಿ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸದಂತೆ ನಿಷೇಧ ವಿಧಿಸಿತ್ತು. ಜಾಹೀರಾತುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿತ್ತು. ಮಾರ್ಚ್ 19, ಏಪ್ರಿಲ್ 2 ಮತ್ತು ಏಪ್ರಿಲ್ 10ರಂದು ವಿಚಾರಣೆಯ ಸಂದರ್ಭದಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರನ್ನು ಖುದ್ದಾಗಿ ಕರೆದು, ನ್ಯಾಯಾಲಯದ ನಿಂದನೆಗಾಗಿ ಏಕೆ ಶಿಕ್ಷಿಸಬಾರದು ಎಂದು ಕಾರಣವನ್ನು ನೀಡುವಂತೆ ಹೇಳಿತ್ತು. ನ್ಯಾಯಾಲಯವು ಇಲ್ಲಿಯವರೆಗೆ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ನೀಡಿದ ಎರಡು ಕ್ಷಮೆಯಾಚನೆಗಳನ್ನು ತಿರಸ್ಕರಿಸಿದೆ.

ಇದನ್ನು ಓದಿ: ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...