Homeಮುಖಪುಟಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

ಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

- Advertisement -
- Advertisement -

ಪ್ರಸ್ತುತ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳ’ ಕುರಿತು ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸದಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಿನ್ನೆ ಸುಪ್ರೀಂಕೋರ್ಟ್‌, ಪತ್ರಿಕೆಗಳಲ್ಲಿ ಮುದ್ರಿತ ಹಿಂದಿನ ಸಾರ್ವಜನಿಕ ಕ್ಷಮೆಯಾಚನೆಯು ಅವರ ಜಾಹೀರಾತುಗಳಷ್ಟು ದೊಡ್ಡದಾಗಿದೆಯೇ ಎಂದು ಕೇಳಿತ್ತು. ಇದರ ಬೆನ್ನಲ್ಲಿ ಮತ್ತೆ ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸ ಸಾರ್ವಜನಿಕ ಕ್ಷಮೆಯಾಚನೆಯನ್ನು ಪ್ರಕಟಿಸಿದ್ದಾರೆ.

ಮಂಗಳವಾರ ಜಾಹೀರಾತುಗಳ ಗಾತ್ರದ ಬಗ್ಗೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದಾಗ, ಪತಂಜಲಿಯ ಪರ ವಕೀಲ ಮುಕುಲ್ ರೋಹಟಗಿ, 67 ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗಿದೆ ಮತ್ತು ಅದಕ್ಕೆ “ಹತ್ತಾರು ಲಕ್ಷ” ವೆಚ್ಚವಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೊಹ್ಲಿ, ನೀವು ಪ್ರಕಟಿಸಿದ ಪೂರ್ಣ ಪುಟದ ಜಾಹೀರಾತುಗಳಿಗೆ ಸಮಾನವಾದ ವೆಚ್ಚ ಕ್ಷಮೆಯಾಚನೆಯ ಜಾಹೀರಾತಿಗೆ ವೆಚ್ಚವಾಗಿದೆಯಾ ಎಂದು ಪ್ರಶ್ನಿಸಿದ್ದು, ಪತಂಜಲಿಯ ವಕೀಲರು ಪ್ರಕಟಿಸಿದ ಕ್ಷಮಾಪಣೆಯ ಪ್ರತಿಯನ್ನು ನೀಡದಿದ್ದಕ್ಕಾಗಿ ಪೀಠವು ಛೀಮಾರಿ ಹಾಕಿದೆ.

ಭಾರತದ ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳು ಸೇರಿದಂತೆ ಆಧುನಿಕ ಔಷಧದ ಬಗ್ಗೆ ರಾಮ್‌ದೇವ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧದ ಭಾರತೀಯ ವೈದ್ಯಕೀಯ ಸಂಘ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೋರ್ಟ್‌ ಈ ಮಹತ್ವದ ಅಂಶವನ್ನು ಗಮನಿಸಿದೆ.

ನವೆಂಬರ್ 21ರಂದು, ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಮಾಹಿತಿ ಮತ್ತು ಜಾಹೀರಾತುಗಳನ್ನು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಪತಂಜಲಿಯನ್ನು ಸುಪ್ರೀಂ ಕೋರ್ಟ್ ಕೇಳಿದೆ, ಇಲ್ಲದಿದ್ದರೆ ಭಾರಿ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಇದಲ್ಲದೆ ನವೆಂಬರ್ 22ರಂದು ರಾಮ್‌ದೇವ್ ಅವರು ನಡೆಸಿದ ಪತ್ರಿಕಾಗೋಷ್ಠಿಯ ವೀಡಿಯೊ ಕ್ಲಿಪ್‌ನ್ನು IMA ಮತ್ತೆ ಪೀಠದ ಮುಂದಿಟ್ಟಿತ್ತು. ಇದಲ್ಲದೆ, ರಾಮ್‌ದೇವ್ ಅವರ ಸಂಸ್ಥೆಯು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಖಾಯಿಲೆಗಳನ್ನು ಶಾಶ್ವತವಾಗಿ ಗುಣಪಡಿಸುವುದಾಗಿ ಹೇಳಿಕೊಂಡು ಹಲವಾರು ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ಮುಂದುವರೆಸಿದೆ ಎಂದು ವೈದ್ಯಕೀಯ ಸಂಸ್ಥೆ ಕೊರ್ಟ್‌ ಗಮನಸೆಳೆದಿದೆ.

ಫೆಬ್ರವರಿ 27ರಂದು ಪತಂಜಲಿ ಆಯುರ್ವೇದ್ ಮತ್ತು ಬಾಲಕೃಷ್ಣ ಅವರಿಗೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಮುಂದುವರೆಸಿದ್ದಕ್ಕಾಗಿ ಸುಪ್ರೀಂಕೋರ್ಟ್ ನಿಂದನೆ ನೋಟಿಸ್ ಜಾರಿಗೊಳಿಸಿದೆ ಮತ್ತು ತಾತ್ಕಾಲಿಕವಾಗಿ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸದಂತೆ ನಿಷೇಧ ವಿಧಿಸಿತ್ತು. ಜಾಹೀರಾತುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿತ್ತು. ಮಾರ್ಚ್ 19, ಏಪ್ರಿಲ್ 2 ಮತ್ತು ಏಪ್ರಿಲ್ 10ರಂದು ವಿಚಾರಣೆಯ ಸಂದರ್ಭದಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರನ್ನು ಖುದ್ದಾಗಿ ಕರೆದು, ನ್ಯಾಯಾಲಯದ ನಿಂದನೆಗಾಗಿ ಏಕೆ ಶಿಕ್ಷಿಸಬಾರದು ಎಂದು ಕಾರಣವನ್ನು ನೀಡುವಂತೆ ಹೇಳಿತ್ತು. ನ್ಯಾಯಾಲಯವು ಇಲ್ಲಿಯವರೆಗೆ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ನೀಡಿದ ಎರಡು ಕ್ಷಮೆಯಾಚನೆಗಳನ್ನು ತಿರಸ್ಕರಿಸಿದೆ.

ಇದನ್ನು ಓದಿ: ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...