Homeಮುಖಪುಟಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

ಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

- Advertisement -
- Advertisement -

ಪ್ರಸ್ತುತ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳ’ ಕುರಿತು ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸದಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಿನ್ನೆ ಸುಪ್ರೀಂಕೋರ್ಟ್‌, ಪತ್ರಿಕೆಗಳಲ್ಲಿ ಮುದ್ರಿತ ಹಿಂದಿನ ಸಾರ್ವಜನಿಕ ಕ್ಷಮೆಯಾಚನೆಯು ಅವರ ಜಾಹೀರಾತುಗಳಷ್ಟು ದೊಡ್ಡದಾಗಿದೆಯೇ ಎಂದು ಕೇಳಿತ್ತು. ಇದರ ಬೆನ್ನಲ್ಲಿ ಮತ್ತೆ ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸ ಸಾರ್ವಜನಿಕ ಕ್ಷಮೆಯಾಚನೆಯನ್ನು ಪ್ರಕಟಿಸಿದ್ದಾರೆ.

ಮಂಗಳವಾರ ಜಾಹೀರಾತುಗಳ ಗಾತ್ರದ ಬಗ್ಗೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದಾಗ, ಪತಂಜಲಿಯ ಪರ ವಕೀಲ ಮುಕುಲ್ ರೋಹಟಗಿ, 67 ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗಿದೆ ಮತ್ತು ಅದಕ್ಕೆ “ಹತ್ತಾರು ಲಕ್ಷ” ವೆಚ್ಚವಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೊಹ್ಲಿ, ನೀವು ಪ್ರಕಟಿಸಿದ ಪೂರ್ಣ ಪುಟದ ಜಾಹೀರಾತುಗಳಿಗೆ ಸಮಾನವಾದ ವೆಚ್ಚ ಕ್ಷಮೆಯಾಚನೆಯ ಜಾಹೀರಾತಿಗೆ ವೆಚ್ಚವಾಗಿದೆಯಾ ಎಂದು ಪ್ರಶ್ನಿಸಿದ್ದು, ಪತಂಜಲಿಯ ವಕೀಲರು ಪ್ರಕಟಿಸಿದ ಕ್ಷಮಾಪಣೆಯ ಪ್ರತಿಯನ್ನು ನೀಡದಿದ್ದಕ್ಕಾಗಿ ಪೀಠವು ಛೀಮಾರಿ ಹಾಕಿದೆ.

ಭಾರತದ ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳು ಸೇರಿದಂತೆ ಆಧುನಿಕ ಔಷಧದ ಬಗ್ಗೆ ರಾಮ್‌ದೇವ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧದ ಭಾರತೀಯ ವೈದ್ಯಕೀಯ ಸಂಘ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೋರ್ಟ್‌ ಈ ಮಹತ್ವದ ಅಂಶವನ್ನು ಗಮನಿಸಿದೆ.

ನವೆಂಬರ್ 21ರಂದು, ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಮಾಹಿತಿ ಮತ್ತು ಜಾಹೀರಾತುಗಳನ್ನು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಪತಂಜಲಿಯನ್ನು ಸುಪ್ರೀಂ ಕೋರ್ಟ್ ಕೇಳಿದೆ, ಇಲ್ಲದಿದ್ದರೆ ಭಾರಿ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಇದಲ್ಲದೆ ನವೆಂಬರ್ 22ರಂದು ರಾಮ್‌ದೇವ್ ಅವರು ನಡೆಸಿದ ಪತ್ರಿಕಾಗೋಷ್ಠಿಯ ವೀಡಿಯೊ ಕ್ಲಿಪ್‌ನ್ನು IMA ಮತ್ತೆ ಪೀಠದ ಮುಂದಿಟ್ಟಿತ್ತು. ಇದಲ್ಲದೆ, ರಾಮ್‌ದೇವ್ ಅವರ ಸಂಸ್ಥೆಯು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಖಾಯಿಲೆಗಳನ್ನು ಶಾಶ್ವತವಾಗಿ ಗುಣಪಡಿಸುವುದಾಗಿ ಹೇಳಿಕೊಂಡು ಹಲವಾರು ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ಮುಂದುವರೆಸಿದೆ ಎಂದು ವೈದ್ಯಕೀಯ ಸಂಸ್ಥೆ ಕೊರ್ಟ್‌ ಗಮನಸೆಳೆದಿದೆ.

ಫೆಬ್ರವರಿ 27ರಂದು ಪತಂಜಲಿ ಆಯುರ್ವೇದ್ ಮತ್ತು ಬಾಲಕೃಷ್ಣ ಅವರಿಗೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಮುಂದುವರೆಸಿದ್ದಕ್ಕಾಗಿ ಸುಪ್ರೀಂಕೋರ್ಟ್ ನಿಂದನೆ ನೋಟಿಸ್ ಜಾರಿಗೊಳಿಸಿದೆ ಮತ್ತು ತಾತ್ಕಾಲಿಕವಾಗಿ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸದಂತೆ ನಿಷೇಧ ವಿಧಿಸಿತ್ತು. ಜಾಹೀರಾತುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿತ್ತು. ಮಾರ್ಚ್ 19, ಏಪ್ರಿಲ್ 2 ಮತ್ತು ಏಪ್ರಿಲ್ 10ರಂದು ವಿಚಾರಣೆಯ ಸಂದರ್ಭದಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರನ್ನು ಖುದ್ದಾಗಿ ಕರೆದು, ನ್ಯಾಯಾಲಯದ ನಿಂದನೆಗಾಗಿ ಏಕೆ ಶಿಕ್ಷಿಸಬಾರದು ಎಂದು ಕಾರಣವನ್ನು ನೀಡುವಂತೆ ಹೇಳಿತ್ತು. ನ್ಯಾಯಾಲಯವು ಇಲ್ಲಿಯವರೆಗೆ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ನೀಡಿದ ಎರಡು ಕ್ಷಮೆಯಾಚನೆಗಳನ್ನು ತಿರಸ್ಕರಿಸಿದೆ.

ಇದನ್ನು ಓದಿ: ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...