Homeಮುಖಪುಟಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

ಪತಂಜಲಿ ಪ್ರಕರಣ: ಸುಪ್ರೀಂಕೋರ್ಟ್‌ ಪ್ರಶ್ನೆ ಬಳಿಕ ರಾಮ್‌ದೇವ್‌ ಮತ್ತೆ ಸಾರ್ವಜನಿಕ ಕ್ಷಮೆಯಾಚನೆ

- Advertisement -
- Advertisement -

ಪ್ರಸ್ತುತ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳ’ ಕುರಿತು ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸದಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಿನ್ನೆ ಸುಪ್ರೀಂಕೋರ್ಟ್‌, ಪತ್ರಿಕೆಗಳಲ್ಲಿ ಮುದ್ರಿತ ಹಿಂದಿನ ಸಾರ್ವಜನಿಕ ಕ್ಷಮೆಯಾಚನೆಯು ಅವರ ಜಾಹೀರಾತುಗಳಷ್ಟು ದೊಡ್ಡದಾಗಿದೆಯೇ ಎಂದು ಕೇಳಿತ್ತು. ಇದರ ಬೆನ್ನಲ್ಲಿ ಮತ್ತೆ ಪತಂಜಲಿ ಆಯುರ್ವೇದ, ಆಚಾರ್ಯ ಬಾಲಕೃಷ್ಣ ಮತ್ತು ಸ್ವಾಮಿ ರಾಮ್‌ದೇವ್ ಅವರು ಹೊಸ ಸಾರ್ವಜನಿಕ ಕ್ಷಮೆಯಾಚನೆಯನ್ನು ಪ್ರಕಟಿಸಿದ್ದಾರೆ.

ಮಂಗಳವಾರ ಜಾಹೀರಾತುಗಳ ಗಾತ್ರದ ಬಗ್ಗೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದಾಗ, ಪತಂಜಲಿಯ ಪರ ವಕೀಲ ಮುಕುಲ್ ರೋಹಟಗಿ, 67 ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗಿದೆ ಮತ್ತು ಅದಕ್ಕೆ “ಹತ್ತಾರು ಲಕ್ಷ” ವೆಚ್ಚವಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೊಹ್ಲಿ, ನೀವು ಪ್ರಕಟಿಸಿದ ಪೂರ್ಣ ಪುಟದ ಜಾಹೀರಾತುಗಳಿಗೆ ಸಮಾನವಾದ ವೆಚ್ಚ ಕ್ಷಮೆಯಾಚನೆಯ ಜಾಹೀರಾತಿಗೆ ವೆಚ್ಚವಾಗಿದೆಯಾ ಎಂದು ಪ್ರಶ್ನಿಸಿದ್ದು, ಪತಂಜಲಿಯ ವಕೀಲರು ಪ್ರಕಟಿಸಿದ ಕ್ಷಮಾಪಣೆಯ ಪ್ರತಿಯನ್ನು ನೀಡದಿದ್ದಕ್ಕಾಗಿ ಪೀಠವು ಛೀಮಾರಿ ಹಾಕಿದೆ.

ಭಾರತದ ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳು ಸೇರಿದಂತೆ ಆಧುನಿಕ ಔಷಧದ ಬಗ್ಗೆ ರಾಮ್‌ದೇವ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧದ ಭಾರತೀಯ ವೈದ್ಯಕೀಯ ಸಂಘ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೋರ್ಟ್‌ ಈ ಮಹತ್ವದ ಅಂಶವನ್ನು ಗಮನಿಸಿದೆ.

ನವೆಂಬರ್ 21ರಂದು, ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಮಾಹಿತಿ ಮತ್ತು ಜಾಹೀರಾತುಗಳನ್ನು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಪತಂಜಲಿಯನ್ನು ಸುಪ್ರೀಂ ಕೋರ್ಟ್ ಕೇಳಿದೆ, ಇಲ್ಲದಿದ್ದರೆ ಭಾರಿ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಇದಲ್ಲದೆ ನವೆಂಬರ್ 22ರಂದು ರಾಮ್‌ದೇವ್ ಅವರು ನಡೆಸಿದ ಪತ್ರಿಕಾಗೋಷ್ಠಿಯ ವೀಡಿಯೊ ಕ್ಲಿಪ್‌ನ್ನು IMA ಮತ್ತೆ ಪೀಠದ ಮುಂದಿಟ್ಟಿತ್ತು. ಇದಲ್ಲದೆ, ರಾಮ್‌ದೇವ್ ಅವರ ಸಂಸ್ಥೆಯು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಖಾಯಿಲೆಗಳನ್ನು ಶಾಶ್ವತವಾಗಿ ಗುಣಪಡಿಸುವುದಾಗಿ ಹೇಳಿಕೊಂಡು ಹಲವಾರು ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ಮುಂದುವರೆಸಿದೆ ಎಂದು ವೈದ್ಯಕೀಯ ಸಂಸ್ಥೆ ಕೊರ್ಟ್‌ ಗಮನಸೆಳೆದಿದೆ.

ಫೆಬ್ರವರಿ 27ರಂದು ಪತಂಜಲಿ ಆಯುರ್ವೇದ್ ಮತ್ತು ಬಾಲಕೃಷ್ಣ ಅವರಿಗೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಮುಂದುವರೆಸಿದ್ದಕ್ಕಾಗಿ ಸುಪ್ರೀಂಕೋರ್ಟ್ ನಿಂದನೆ ನೋಟಿಸ್ ಜಾರಿಗೊಳಿಸಿದೆ ಮತ್ತು ತಾತ್ಕಾಲಿಕವಾಗಿ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸದಂತೆ ನಿಷೇಧ ವಿಧಿಸಿತ್ತು. ಜಾಹೀರಾತುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿತ್ತು. ಮಾರ್ಚ್ 19, ಏಪ್ರಿಲ್ 2 ಮತ್ತು ಏಪ್ರಿಲ್ 10ರಂದು ವಿಚಾರಣೆಯ ಸಂದರ್ಭದಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರನ್ನು ಖುದ್ದಾಗಿ ಕರೆದು, ನ್ಯಾಯಾಲಯದ ನಿಂದನೆಗಾಗಿ ಏಕೆ ಶಿಕ್ಷಿಸಬಾರದು ಎಂದು ಕಾರಣವನ್ನು ನೀಡುವಂತೆ ಹೇಳಿತ್ತು. ನ್ಯಾಯಾಲಯವು ಇಲ್ಲಿಯವರೆಗೆ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ನೀಡಿದ ಎರಡು ಕ್ಷಮೆಯಾಚನೆಗಳನ್ನು ತಿರಸ್ಕರಿಸಿದೆ.

ಇದನ್ನು ಓದಿ: ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...