Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ : ಪ.ಬಂಗಾಳದಲ್ಲಿ 'ನರೇಗಾ' ಪುನರಾರಂಭಕ್ಕೆ ಮುಂದಾದ ಕೇಂದ್ರ

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ : ಪ.ಬಂಗಾಳದಲ್ಲಿ ‘ನರೇಗಾ’ ಪುನರಾರಂಭಕ್ಕೆ ಮುಂದಾದ ಕೇಂದ್ರ

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ನರೇಗಾ) ಪುನರಾರಂಭಿಸಲು ಮುಂದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೂರು ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಅದನ್ನು ಪುನರಾರಂಭಿಸುವಂತೆ ಅಲ್ಲಿನ ಆಡಳಿತರೂಢ ಟಿಎಂಸಿ ಒತ್ತಾಯಿಸುತ್ತಿತ್ತು.

ವಿಶೇಷ ಷರತ್ತುಗಳೊಂದಿಗೆ ಯೋಜನೆಯನ್ನು ಪುನರಾರಂಭಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯ ಕಳೆದ ವಾರ ಪ್ರಧಾನ ಮಂತ್ರಿ ಕಚೇರಿಗೆ ತಿಳಿಸಿದೆ ಎಂದು ಗೊತ್ತಾಗಿದೆ. ಈ ವಿಷಯದ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಸಚಿವಾಲಯದಿಂದ ವರದಿಯನ್ನು ಕೇಳಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ತಿಳಿಸಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಈ-ಮೇಲ್‌ ಮಾಡಿ ನಾವು ಈ ಬಗ್ಗೆ ಮಾಹಿತಿ ಕೇಳಿದ್ದೇವೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ಹೇಳಿದೆ.

ಆಗಸ್ಟ್ 1, 2025ರಿಂದ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಂತೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್‌ ಜೂನ್ 18, 2025ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27, 2025ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ರಾಜ್ಯದಲ್ಲಿ ಯೋಜನೆಯ ಅನುಷ್ಠಾನಕ್ಕೆ ‘ವಿಶೇಷ ಷರತ್ತುಗಳನ್ನು’ ವಿಧಿಸುವ ಅಧಿಕಾರವನ್ನು ಹೈಕೋರ್ಟ್ ಕೇಂದ್ರಕ್ಕೆ ಬಿಟ್ಟಿತ್ತು.

ಜೂನ್‌ 18ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಲೈ 31ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿತ್ತು. ಆದರೆ, ಅದರ ಮರುದಿನ ಆಗಸ್ಟ್ 1ರಂದು ಯೋಜನೆ ಪುನರಾರಂಭಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಆಗಸ್ಟ್ 2025ರಿಂದ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಾಗ, ಯಾವುದೇ ಅಕ್ರಮಗಳು ಸಂಭವಿಸದಂತೆ ನೋಡಿಕೊಳ್ಳಲು ದೇಶದ ಇತರ ರಾಜ್ಯಗಳಲ್ಲಿ ಇರುವಂತೆ ವಿಶೇಷ ಷರತ್ತುಗಳು, ನಿರ್ಬಂಧಗಳು ಮತ್ತು ನಿಯಮಗಳು ಇತ್ಯಾದಿಗಳನ್ನು ವಿಧಿಸಲು ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ಹೊಂದಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9, 2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿತ್ತು. ಅಂದಿನಿಂದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಅದರ ಲಾಭ ಪಡೆಯುತ್ತಿದ್ದವು.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ : ಆರು ಮಹಿಳೆಯರು ಸಾವು

ಹಳಿ ದಾಟುತ್ತಿದ್ದ ವೇಳೆ ರೈಲು ಹರಿದು ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಝಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ 9.30 ರ ಸುಮಾರಿಗೆ ಚೋಪನ್-ಪ್ರಯಾಗರಾಜ್ ಪ್ಯಾಸೆಂಜರ್...

ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಪರಿಸರ ಹಾಗೂ ಮತ್ಸ್ಯ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುವಂತಹ ಹೊನ್ನಾವರ ಬಂದರು ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಅಲ್ಲದೇ, ಹೋರಾಟಗಾರರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ...

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬುಧವಾರ (ನವೆಂಬರ್ 5, 2025) ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, 2024ರ ಅಕ್ಟೋಬರ್...

ಬಾಣಂತಿಯರ ಸಾವಿನಿಂದ ಎಚ್ಚೆತ್ತ ಸರ್ಕಾರ: ಜೀವರಕ್ಷಕ ಔಷಧಿ ಖರೀದಿಸಲು ಕಟ್ಟುನಿಟ್ಟಿನ ನಿಯಮ

ಬೆಂಗಳೂರು: ಕೆಲವು ತಿಂಗಳ ಹಿಂದೆ ಬಳ್ಳಾರಿಯಲ್ಲಿ ಕಳಪೆ ಗುಣಮಟ್ಟದ IV ದ್ರವಗಳ ಬಳಕೆಯಿಂದ ಐದು ಯುವ ತಾಯಂದಿರು ಸಾವನ್ನಪ್ಪಿದ ನಂತರ, ರಾಜ್ಯ ಸರ್ಕಾರವು ತನ್ನ ಆಸ್ಪತ್ರೆಗಳಿಗೆ ಗುಣಮಟ್ಟದ ಜೀವರಕ್ಷಕ ಔಷಧಿಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು...

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ 25 ಲಕ್ಷ ಅಥವಾ ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡ 12ರಷ್ಟು 'ನಕಲಿ ಮತಗಳು' ಚಲಾವಣೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಬುಧವಾರ (ನ.5)...

ಆಹಾರ-ಆರೋಗ್ಯ ಮತ್ತು ಸುರಕ್ಷತೆಗೆ ಮಾನದಂಡ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೀದಿ ಬದಿ ವ್ಯಾಪಾರಿಗಳು ಹಾಗೂ ದೊಡ್ಡ-ದೊಡ್ಡ ರೆಸ್ಟೋರೆಂಟ್‌ಗಳು ಆರೋಗ್ಯ ಮತ್ತು ಸುರಕ್ಷತಾ ಮಾನದಂಡ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಜೊತೆಗೆ, ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ನಿಗಾ ಇರಿಸುವುದಕ್ಕೆ ಸೂಕ್ತ ಕಾರ್ಯ ವಿಧಾನವೊಂದನ್ನು...

ಹರಿಯಾಣ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ : ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಬಿಹಾರದಲ್ಲಿ ಮೊದಲ ಹಂತದ ಮತದಾನದ ಮುನ್ನಾ ದಿನವಾದ ಇಂದು (ನವೆಂಬರ್ 5, 2025) ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ 'ಮತಗಳ್ಳತನ' ನಡೆದಿದೆ ಎಂಬ 'ಹೈಡ್ರೋಜನ್ ಬಾಂಬ್'...

ಹೊನ್ನಾವರದ ಕಾರ್ಪೊರೇಟ್ ಬಂದರಿನ ಭೂತ ಚೇಷ್ಟೆಯೂ… ಬೆಸ್ತರಿಗೆ ಬೀದಿ ಪಾಲಾಗುವ ಭಯವೂ!!

(ಇದು ಮೊದಲು ನ್ಯಾಯಪಥ ಜುಲೈ ಸಂಚಿಕೆಯಲ್ಲಿ ಪ್ರಕಟವಾಗಿತ್ತು) ಉತ್ತರ ಕನ್ನಡವೆಂದರೆ ಸರಕಾರಿ ಯೋಜನೆಗಳ ಪ್ರಯೋಗಶಾಲೆ; ಇಲ್ಲಿಯ ಅಮಾಯಕ ಮಂದಿ ಸರಕಾರಿ ಯೋಜನೆಗಳ ಪ್ರಯೋಗಪಶುಗಳು. ಹಲವು ದಶಕಗಳಿಂದ ಉತ್ತರ ಕನ್ನಡದ ಜನರು ಒಂದಿಲ್ಲೊಂದು ಯೋಜನೆಗಾಗಿ ತಲೆತಲಾಂತರದಿಂದ...

ಮೊದಲ ಪತ್ನಿ ವಿರೋಧಿಸಿದರೆ ಮುಸ್ಲಿಂ ಪುರುಷರಿಗೆ ಎರಡನೇ ವಿವಾಹ ನೋಂದಣಿಗೆ ಅವಕಾಶವಿಲ್ಲ: ಕೇರಳ ಹೈಕೋರ್ಟ್

ಕೇರಳ ಹೈಕೋರ್ಟ್ ಇತ್ತೀಚೆಗೆ ಮುಸ್ಲಿಂ ಪುರುಷನ ಎರಡನೇ ವಿವಾಹವನ್ನು ಕೇರಳ ವಿವಾಹ ನೋಂದಣಿ (ಸಾಮಾನ್ಯ) ನಿಯಮಗಳು, 2008 ರ ಅಡಿಯಲ್ಲಿ, ಮೊದಲ ಪತ್ನಿಗೆ ತಿಳಿಸದೆ ಮತ್ತು ವಿಚಾರಣೆ ನಡೆಸದೆ ನೋಂದಾಯಿಸಲಾಗುವುದಿಲ್ಲ ಎಂದು ತೀರ್ಪು...

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ಅಮೆರಿಕದ ಅತಿ ದೊಡ್ಡ ನಗರ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ತನ್ನ ವಿಷಯ ಭಾಷಣದಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರು ಅವರ ಐತಿಹಾಸಿಕ ಭಾಷಣದ ಸಾಲುಗಳನ್ನು...