Homeಮುಖಪುಟಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ವೇಳಾಪಟ್ಟಿಯನ್ನು ಕೇಂದ್ರ ಸರ್ಕಾರ ಬುಧವಾರ (ಜೂ.4) ಪ್ರಕಟಿಸಿದೆ. ದೇಶದಾದ್ಯಂತ ಮಾರ್ಚ್ 1, 2027 ರಿಂದ ಗಣತಿ ಪ್ರಾರಂಭವಾಗಲಿದೆಯಾದರೂ, ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತ ಹಿಮ ಪ್ರದೇಶಗಳ ರಾಜ್ಯಗಳಲ್ಲಿ ಅಕ್ಟೋಬರ್ 1, 2026ರಂದು ಗಣತಿ ಪ್ರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಏಳು ವರ್ಷಗಳ ವಿಳಂಬ

ದೇಶದಾದ್ಯಂತ ಕೊನೆಯ ಬಾರಿ ಜನಗಣತಿ 2011ರಲ್ಲಿ ನಡೆಸಲಾಗಿತ್ತು. ಹತ್ತು ವರ್ಷಗಳ ನಂತರ 2021ರಲ್ಲಿ ಗಣತಿ ಮಾಡಬೇಕಾಗಿತ್ತು. ಆದರೆ, ಕೊರೊನಾ ಕಾರಣ ನೀಡಿ ಸರ್ಕಾರ ಗಣತಿ ಮುಂದೂಡಿತ್ತು. ಕೊರೊನಾ ಬಳಿಕವೂ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಕಾರಣ ನೀಡಿ ಗಣತಿ ಮುಂದೂಡಲಾಗಿತ್ತು. ಆದ್ದರಿಂದ ಏಳು ವರ್ಷಗಳ ವಿಳಂಬದ ನಂತರ ಈಗ ಗಣತಿ ನಡೆಸಲು ಸರ್ಕಾರ ಮುಂದಾಗಿದೆ.

“ಜನಸಂಖ್ಯಾ ಗಣತಿ-2027 ಅನ್ನು ಜಾತಿ ಗಣತಿಯೊಂದಿಗೆ ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜನಸಂಖ್ಯಾ ಗಣತಿ-2027 ರ ಉಲ್ಲೇಖ ದಿನಾಂಕವು ಮಾರ್ಚ್, 2027ರ ಮೊದಲ ದಿನದ 00:00 ಗಂಟೆಗಳು ಆಗಿರುತ್ತದೆ” ಎಂದು ಕೇಂದ್ರ ಗೃಹ ಸಚಿವಾಲಯ (MHAS) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಲಡಾಖ್ ಮತ್ತು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಉಲ್ಲೇಖ ದಿನಾಂಕವು ಅಕ್ಟೋಬರ್, 2026 ರ ಮೊದಲ ದಿನದ 00.00 ಗಂಟೆಗಳು” ಎಂದು ಗೃಹ ಸಚಿವಾಲಯ ಹೇಳಿದೆ.

“ಜನಸಂಖ್ಯಾ ಗಣತಿಯನ್ನು ನಡೆಸುವ ಉದ್ದೇಶಕ್ಕಾಗಿ ಅಧಿಸೂಚನೆಯನ್ನು ಮೇಲಿನ ಉಲ್ಲೇಖ ದಿನಾಂಕಗಳೊಂದಿಗೆ 1948 ರ ಜನಗಣತಿ ಕಾಯ್ದೆಯ ಸೆಕ್ಷನ್ 3 ರ ನಿಬಂಧನೆಗಳ ಪ್ರಕಾರ, ಜೂನ್ 16, 2025 ರಂದು ಅಧಿಕೃತ ಗೆಜೆಟ್‌ನಲ್ಲಿ ತಾತ್ಕಾಲಿಕವಾಗಿ ಪ್ರಕಟಿಸಲಾಗುವುದು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಭಾರತದ ಜನಗಣತಿಯನ್ನು 1948 ರ ಜನಗಣತಿ ಕಾಯ್ದೆ ಮತ್ತು 1990 ರ ಜನಗಣತಿ ನಿಯಮಗಳ ಅಡಿಯಲ್ಲಿ ನಡೆಸಲಾಗುತ್ತದೆ.

ಭಾರತದ ಕೊನೆಯ ಜನಗಣತಿಯನ್ನು 2011ರಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಮೊದಲನೆಯದು ಮನೆ ಪಟ್ಟಿ (HLO),ಇದನ್ನು 2010 ರ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರ ನಡುವೆ ನಡೆಸಲಾಗಿತ್ತು ಮತ್ತು ಎರಡನೆಯದು ಜನಸಂಖ್ಯಾ ಗಣತಿ (PE), ಇದನ್ನು 2011ರ ಫೆಬ್ರವರಿ 9 ರಿಂದ 28 ರ ನಡುವೆ ನಡೆಸಲಾಗಿತ್ತು.

2021ರ ಜನಗಣತಿಯನ್ನು ಎರಡು ಹಂತಗಳಲ್ಲಿ ಇದೇ ರೀತಿ ನಡೆಸಲು ಪ್ರಸ್ತಾಪಿಸಲಾಗಿತ್ತು. ಮೊದಲ ಹಂತ 2020ರ ಏಪ್ರಿಲ್ -ಸೆಪ್ಟೆಂಬರ್ ನಡುವೆ ಮತ್ತು ಎರಡನೇ ಹಂತ 2021ರ ಫೆಬ್ರವರಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು.

“2021ರಲ್ಲಿ ಜನಗಣತಿಯ ಮೊದಲ ಹಂತದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿತ್ತು. ಏಪ್ರಿಲ್ 1, 2020 ರಿಂದ ಕೆಲವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕ್ಷೇತ್ರಕಾರ್ಯವನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ಕಾರಣ ಜನಗಣತಿ ಕಾರ್ಯವನ್ನು ಮುಂದೂಡಲಾಯಿತು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ನಂತರ, ಜನಗಣತಿಯ ಜೊತೆಗೆ ಜಾತಿ ಆಧಾರಿತ ಗಣತಿ ನಡೆಸಲು ತೀರ್ಮಾನಿಸಿರುವುದಾಗಿ ಸರ್ಕಾರ ತಿಳಿಸಿತ್ತು. “ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಮೋದಿ ಸರ್ಕಾರ ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಅಂದು ಹೇಳಿದ್ದರು.

ಸ್ವಾತಂತ್ರ್ಯದ ನಂತರ, 1951ರಿಂದ ದೇಶದ ಜನಸಂಖ್ಯಾ ಗಣತಿಯನ್ನು ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಭಾರತದ ಜನಗಣತಿಯನ್ನು ಮೊದಲು 1872 ರಲ್ಲಿ ಭಾರತದಲ್ಲಿ ಪರಿಚಯಿಸಲಾಯಿತು. ಜನಗಣತಿ ಸಮಯದಲ್ಲಿ ನಾಗರಿಕರಿಗೆ ಕೇಳಲು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ 31 ಪ್ರಶ್ನೆಗಳನ್ನು ಸಿದ್ಧಪಡಿಸಿತ್ತು.

2011 ರ ಮಾಹಿತಿಯ ಪ್ರಕಾರ, ಭಾರತದ ಒಟ್ಟು ಜನಸಂಖ್ಯೆ 121 ಕೋಟಿ, ಲಿಂಗ ಅನುಪಾತವು 1,000 ಪುರುಷರಿಗೆ 940 ಮಹಿಳೆಯರು, ಸಾಕ್ಷರತಾ ಪ್ರಮಾಣವು 74.04 ಪ್ರತಿಶತ ಆಗಿತ್ತು. ಜೊತೆಗೆ 2001 ರಿಂದ 2011 ರವರೆಗೆ ಜನಸಂಖ್ಯಾ ಬೆಳವಣಿಗೆ 17.64 ಪ್ರತಿಶತದಷ್ಟಿತ್ತು. ಏಳು ವರ್ಷಗಳ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...