Homeಮುಖಪುಟಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ವೇಳಾಪಟ್ಟಿಯನ್ನು ಕೇಂದ್ರ ಸರ್ಕಾರ ಬುಧವಾರ (ಜೂ.4) ಪ್ರಕಟಿಸಿದೆ. ದೇಶದಾದ್ಯಂತ ಮಾರ್ಚ್ 1, 2027 ರಿಂದ ಗಣತಿ ಪ್ರಾರಂಭವಾಗಲಿದೆಯಾದರೂ, ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತ ಹಿಮ ಪ್ರದೇಶಗಳ ರಾಜ್ಯಗಳಲ್ಲಿ ಅಕ್ಟೋಬರ್ 1, 2026ರಂದು ಗಣತಿ ಪ್ರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಏಳು ವರ್ಷಗಳ ವಿಳಂಬ

ದೇಶದಾದ್ಯಂತ ಕೊನೆಯ ಬಾರಿ ಜನಗಣತಿ 2011ರಲ್ಲಿ ನಡೆಸಲಾಗಿತ್ತು. ಹತ್ತು ವರ್ಷಗಳ ನಂತರ 2021ರಲ್ಲಿ ಗಣತಿ ಮಾಡಬೇಕಾಗಿತ್ತು. ಆದರೆ, ಕೊರೊನಾ ಕಾರಣ ನೀಡಿ ಸರ್ಕಾರ ಗಣತಿ ಮುಂದೂಡಿತ್ತು. ಕೊರೊನಾ ಬಳಿಕವೂ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಕಾರಣ ನೀಡಿ ಗಣತಿ ಮುಂದೂಡಲಾಗಿತ್ತು. ಆದ್ದರಿಂದ ಏಳು ವರ್ಷಗಳ ವಿಳಂಬದ ನಂತರ ಈಗ ಗಣತಿ ನಡೆಸಲು ಸರ್ಕಾರ ಮುಂದಾಗಿದೆ.

“ಜನಸಂಖ್ಯಾ ಗಣತಿ-2027 ಅನ್ನು ಜಾತಿ ಗಣತಿಯೊಂದಿಗೆ ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜನಸಂಖ್ಯಾ ಗಣತಿ-2027 ರ ಉಲ್ಲೇಖ ದಿನಾಂಕವು ಮಾರ್ಚ್, 2027ರ ಮೊದಲ ದಿನದ 00:00 ಗಂಟೆಗಳು ಆಗಿರುತ್ತದೆ” ಎಂದು ಕೇಂದ್ರ ಗೃಹ ಸಚಿವಾಲಯ (MHAS) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಲಡಾಖ್ ಮತ್ತು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಉಲ್ಲೇಖ ದಿನಾಂಕವು ಅಕ್ಟೋಬರ್, 2026 ರ ಮೊದಲ ದಿನದ 00.00 ಗಂಟೆಗಳು” ಎಂದು ಗೃಹ ಸಚಿವಾಲಯ ಹೇಳಿದೆ.

“ಜನಸಂಖ್ಯಾ ಗಣತಿಯನ್ನು ನಡೆಸುವ ಉದ್ದೇಶಕ್ಕಾಗಿ ಅಧಿಸೂಚನೆಯನ್ನು ಮೇಲಿನ ಉಲ್ಲೇಖ ದಿನಾಂಕಗಳೊಂದಿಗೆ 1948 ರ ಜನಗಣತಿ ಕಾಯ್ದೆಯ ಸೆಕ್ಷನ್ 3 ರ ನಿಬಂಧನೆಗಳ ಪ್ರಕಾರ, ಜೂನ್ 16, 2025 ರಂದು ಅಧಿಕೃತ ಗೆಜೆಟ್‌ನಲ್ಲಿ ತಾತ್ಕಾಲಿಕವಾಗಿ ಪ್ರಕಟಿಸಲಾಗುವುದು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಭಾರತದ ಜನಗಣತಿಯನ್ನು 1948 ರ ಜನಗಣತಿ ಕಾಯ್ದೆ ಮತ್ತು 1990 ರ ಜನಗಣತಿ ನಿಯಮಗಳ ಅಡಿಯಲ್ಲಿ ನಡೆಸಲಾಗುತ್ತದೆ.

ಭಾರತದ ಕೊನೆಯ ಜನಗಣತಿಯನ್ನು 2011ರಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಮೊದಲನೆಯದು ಮನೆ ಪಟ್ಟಿ (HLO),ಇದನ್ನು 2010 ರ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರ ನಡುವೆ ನಡೆಸಲಾಗಿತ್ತು ಮತ್ತು ಎರಡನೆಯದು ಜನಸಂಖ್ಯಾ ಗಣತಿ (PE), ಇದನ್ನು 2011ರ ಫೆಬ್ರವರಿ 9 ರಿಂದ 28 ರ ನಡುವೆ ನಡೆಸಲಾಗಿತ್ತು.

2021ರ ಜನಗಣತಿಯನ್ನು ಎರಡು ಹಂತಗಳಲ್ಲಿ ಇದೇ ರೀತಿ ನಡೆಸಲು ಪ್ರಸ್ತಾಪಿಸಲಾಗಿತ್ತು. ಮೊದಲ ಹಂತ 2020ರ ಏಪ್ರಿಲ್ -ಸೆಪ್ಟೆಂಬರ್ ನಡುವೆ ಮತ್ತು ಎರಡನೇ ಹಂತ 2021ರ ಫೆಬ್ರವರಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು.

“2021ರಲ್ಲಿ ಜನಗಣತಿಯ ಮೊದಲ ಹಂತದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿತ್ತು. ಏಪ್ರಿಲ್ 1, 2020 ರಿಂದ ಕೆಲವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕ್ಷೇತ್ರಕಾರ್ಯವನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ಕಾರಣ ಜನಗಣತಿ ಕಾರ್ಯವನ್ನು ಮುಂದೂಡಲಾಯಿತು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ನಂತರ, ಜನಗಣತಿಯ ಜೊತೆಗೆ ಜಾತಿ ಆಧಾರಿತ ಗಣತಿ ನಡೆಸಲು ತೀರ್ಮಾನಿಸಿರುವುದಾಗಿ ಸರ್ಕಾರ ತಿಳಿಸಿತ್ತು. “ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಮೋದಿ ಸರ್ಕಾರ ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಅಂದು ಹೇಳಿದ್ದರು.

ಸ್ವಾತಂತ್ರ್ಯದ ನಂತರ, 1951ರಿಂದ ದೇಶದ ಜನಸಂಖ್ಯಾ ಗಣತಿಯನ್ನು ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಭಾರತದ ಜನಗಣತಿಯನ್ನು ಮೊದಲು 1872 ರಲ್ಲಿ ಭಾರತದಲ್ಲಿ ಪರಿಚಯಿಸಲಾಯಿತು. ಜನಗಣತಿ ಸಮಯದಲ್ಲಿ ನಾಗರಿಕರಿಗೆ ಕೇಳಲು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ 31 ಪ್ರಶ್ನೆಗಳನ್ನು ಸಿದ್ಧಪಡಿಸಿತ್ತು.

2011 ರ ಮಾಹಿತಿಯ ಪ್ರಕಾರ, ಭಾರತದ ಒಟ್ಟು ಜನಸಂಖ್ಯೆ 121 ಕೋಟಿ, ಲಿಂಗ ಅನುಪಾತವು 1,000 ಪುರುಷರಿಗೆ 940 ಮಹಿಳೆಯರು, ಸಾಕ್ಷರತಾ ಪ್ರಮಾಣವು 74.04 ಪ್ರತಿಶತ ಆಗಿತ್ತು. ಜೊತೆಗೆ 2001 ರಿಂದ 2011 ರವರೆಗೆ ಜನಸಂಖ್ಯಾ ಬೆಳವಣಿಗೆ 17.64 ಪ್ರತಿಶತದಷ್ಟಿತ್ತು. ಏಳು ವರ್ಷಗಳ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...