Homeಮುಖಪುಟಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ವೇಳಾಪಟ್ಟಿಯನ್ನು ಕೇಂದ್ರ ಸರ್ಕಾರ ಬುಧವಾರ (ಜೂ.4) ಪ್ರಕಟಿಸಿದೆ. ದೇಶದಾದ್ಯಂತ ಮಾರ್ಚ್ 1, 2027 ರಿಂದ ಗಣತಿ ಪ್ರಾರಂಭವಾಗಲಿದೆಯಾದರೂ, ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತ ಹಿಮ ಪ್ರದೇಶಗಳ ರಾಜ್ಯಗಳಲ್ಲಿ ಅಕ್ಟೋಬರ್ 1, 2026ರಂದು ಗಣತಿ ಪ್ರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಏಳು ವರ್ಷಗಳ ವಿಳಂಬ

ದೇಶದಾದ್ಯಂತ ಕೊನೆಯ ಬಾರಿ ಜನಗಣತಿ 2011ರಲ್ಲಿ ನಡೆಸಲಾಗಿತ್ತು. ಹತ್ತು ವರ್ಷಗಳ ನಂತರ 2021ರಲ್ಲಿ ಗಣತಿ ಮಾಡಬೇಕಾಗಿತ್ತು. ಆದರೆ, ಕೊರೊನಾ ಕಾರಣ ನೀಡಿ ಸರ್ಕಾರ ಗಣತಿ ಮುಂದೂಡಿತ್ತು. ಕೊರೊನಾ ಬಳಿಕವೂ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಕಾರಣ ನೀಡಿ ಗಣತಿ ಮುಂದೂಡಲಾಗಿತ್ತು. ಆದ್ದರಿಂದ ಏಳು ವರ್ಷಗಳ ವಿಳಂಬದ ನಂತರ ಈಗ ಗಣತಿ ನಡೆಸಲು ಸರ್ಕಾರ ಮುಂದಾಗಿದೆ.

“ಜನಸಂಖ್ಯಾ ಗಣತಿ-2027 ಅನ್ನು ಜಾತಿ ಗಣತಿಯೊಂದಿಗೆ ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜನಸಂಖ್ಯಾ ಗಣತಿ-2027 ರ ಉಲ್ಲೇಖ ದಿನಾಂಕವು ಮಾರ್ಚ್, 2027ರ ಮೊದಲ ದಿನದ 00:00 ಗಂಟೆಗಳು ಆಗಿರುತ್ತದೆ” ಎಂದು ಕೇಂದ್ರ ಗೃಹ ಸಚಿವಾಲಯ (MHAS) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಲಡಾಖ್ ಮತ್ತು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಉಲ್ಲೇಖ ದಿನಾಂಕವು ಅಕ್ಟೋಬರ್, 2026 ರ ಮೊದಲ ದಿನದ 00.00 ಗಂಟೆಗಳು” ಎಂದು ಗೃಹ ಸಚಿವಾಲಯ ಹೇಳಿದೆ.

“ಜನಸಂಖ್ಯಾ ಗಣತಿಯನ್ನು ನಡೆಸುವ ಉದ್ದೇಶಕ್ಕಾಗಿ ಅಧಿಸೂಚನೆಯನ್ನು ಮೇಲಿನ ಉಲ್ಲೇಖ ದಿನಾಂಕಗಳೊಂದಿಗೆ 1948 ರ ಜನಗಣತಿ ಕಾಯ್ದೆಯ ಸೆಕ್ಷನ್ 3 ರ ನಿಬಂಧನೆಗಳ ಪ್ರಕಾರ, ಜೂನ್ 16, 2025 ರಂದು ಅಧಿಕೃತ ಗೆಜೆಟ್‌ನಲ್ಲಿ ತಾತ್ಕಾಲಿಕವಾಗಿ ಪ್ರಕಟಿಸಲಾಗುವುದು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಭಾರತದ ಜನಗಣತಿಯನ್ನು 1948 ರ ಜನಗಣತಿ ಕಾಯ್ದೆ ಮತ್ತು 1990 ರ ಜನಗಣತಿ ನಿಯಮಗಳ ಅಡಿಯಲ್ಲಿ ನಡೆಸಲಾಗುತ್ತದೆ.

ಭಾರತದ ಕೊನೆಯ ಜನಗಣತಿಯನ್ನು 2011ರಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಮೊದಲನೆಯದು ಮನೆ ಪಟ್ಟಿ (HLO),ಇದನ್ನು 2010 ರ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರ ನಡುವೆ ನಡೆಸಲಾಗಿತ್ತು ಮತ್ತು ಎರಡನೆಯದು ಜನಸಂಖ್ಯಾ ಗಣತಿ (PE), ಇದನ್ನು 2011ರ ಫೆಬ್ರವರಿ 9 ರಿಂದ 28 ರ ನಡುವೆ ನಡೆಸಲಾಗಿತ್ತು.

2021ರ ಜನಗಣತಿಯನ್ನು ಎರಡು ಹಂತಗಳಲ್ಲಿ ಇದೇ ರೀತಿ ನಡೆಸಲು ಪ್ರಸ್ತಾಪಿಸಲಾಗಿತ್ತು. ಮೊದಲ ಹಂತ 2020ರ ಏಪ್ರಿಲ್ -ಸೆಪ್ಟೆಂಬರ್ ನಡುವೆ ಮತ್ತು ಎರಡನೇ ಹಂತ 2021ರ ಫೆಬ್ರವರಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು.

“2021ರಲ್ಲಿ ಜನಗಣತಿಯ ಮೊದಲ ಹಂತದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿತ್ತು. ಏಪ್ರಿಲ್ 1, 2020 ರಿಂದ ಕೆಲವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕ್ಷೇತ್ರಕಾರ್ಯವನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ಕಾರಣ ಜನಗಣತಿ ಕಾರ್ಯವನ್ನು ಮುಂದೂಡಲಾಯಿತು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ನಂತರ, ಜನಗಣತಿಯ ಜೊತೆಗೆ ಜಾತಿ ಆಧಾರಿತ ಗಣತಿ ನಡೆಸಲು ತೀರ್ಮಾನಿಸಿರುವುದಾಗಿ ಸರ್ಕಾರ ತಿಳಿಸಿತ್ತು. “ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಮೋದಿ ಸರ್ಕಾರ ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಅಂದು ಹೇಳಿದ್ದರು.

ಸ್ವಾತಂತ್ರ್ಯದ ನಂತರ, 1951ರಿಂದ ದೇಶದ ಜನಸಂಖ್ಯಾ ಗಣತಿಯನ್ನು ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಭಾರತದ ಜನಗಣತಿಯನ್ನು ಮೊದಲು 1872 ರಲ್ಲಿ ಭಾರತದಲ್ಲಿ ಪರಿಚಯಿಸಲಾಯಿತು. ಜನಗಣತಿ ಸಮಯದಲ್ಲಿ ನಾಗರಿಕರಿಗೆ ಕೇಳಲು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ 31 ಪ್ರಶ್ನೆಗಳನ್ನು ಸಿದ್ಧಪಡಿಸಿತ್ತು.

2011 ರ ಮಾಹಿತಿಯ ಪ್ರಕಾರ, ಭಾರತದ ಒಟ್ಟು ಜನಸಂಖ್ಯೆ 121 ಕೋಟಿ, ಲಿಂಗ ಅನುಪಾತವು 1,000 ಪುರುಷರಿಗೆ 940 ಮಹಿಳೆಯರು, ಸಾಕ್ಷರತಾ ಪ್ರಮಾಣವು 74.04 ಪ್ರತಿಶತ ಆಗಿತ್ತು. ಜೊತೆಗೆ 2001 ರಿಂದ 2011 ರವರೆಗೆ ಜನಸಂಖ್ಯಾ ಬೆಳವಣಿಗೆ 17.64 ಪ್ರತಿಶತದಷ್ಟಿತ್ತು. ಏಳು ವರ್ಷಗಳ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...