Homeಮುಖಪುಟಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

- Advertisement -
- Advertisement -

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಫೈಝಾನ್‌ಗೆ ಪೊಲೀಸರು ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ರಕ್ಷಕರಾದ ಪೊಲೀಸರೇ ಅಮಾನವೀಯವಾಗಿ ವರ್ತಿಸಿದ್ದರ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರ ನಿಷ್ಪಕ್ಷಪಾತ ಕಾರ್ಯನಿರ್ಹಣೆಯ ಬಗ್ಗೆ ಪ್ರಶ್ನೆ ಮೂಡಿತ್ತು.

ಪೊಲೀಸರು ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ 23 ವರ್ಷದ ಯುವಕ ಫೈಝಾನ್ ಸಾವಿಗೀಡಾಗಿದ್ದ. ಆತನ ಕುಟುಂಬ ಪೊಲೀಸರ ವಿರುದ್ದ ಅಕ್ರಮ ಬಂಧನ ಮತ್ತು ವೈದ್ಯಕೀಯ ಚಿಕಿತ್ಸೆಯ ನಿರಾಕರಣೆಯ ಆರೋಪ ಮಾಡಿದೆ.

ಫೆಬ್ರವರಿ 4, 2026ರಂದು, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮಾಯಾಂಕ್ ಗೋಯೆಲ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸಿದ್ದಾರೆ ಅಥವಾ ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ಅವರಿಗೆ ಫೆಬ್ರವರಿ 24,2026 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

ಈ ಹಿಂದೆ ದೆಹಲಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಕಲಂ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಸಿಬಿಐ ತನ್ನ ತನಿಖೆಯಲ್ಲಿ ಕೊಲೆ ಮಾಡುವ ಸ್ಪಷ್ಟ ಉದ್ದೇಶ ಕಂಡುಬಂದಿಲ್ಲ ಎಂದು ತಿಳಿಸಿ, ಅದನ್ನು ಕಲಂ 304(II) ಅಡಿಯಲ್ಲಿ ‘ಕೊಲೆಯಲ್ಲದ ಅಪರಾಧಯುತ ನರಹತ್ಯೆ’ ಎಂದು ಮಾರ್ಪಡಿಸಿದೆ. ಅಲ್ಲದೆ, ಕಲಂ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 325 (ತೀವ್ರವಾದ ನೋವುಂಟುಮಾಡುವುದು) ಅಡಿ ಆರೋಪ ಹೊರಿಸಿದೆ.

ಜುಲೈ 23, 2024ರಂದು ದೆಹಲಿ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ, ಸಿಬಿಐ ಆಗಸ್ಟ್ 6, 2024ರಂದು ಐಪಿಸಿ ಕಲಂ 147, 148, 149 ಮತ್ತು 302 ರ ಅಡಿಯಲ್ಲಿ ಎಫ್‌ಐಆರ್ (RC-09S/2024/SC-II/2024) ದಾಖಲಿಸಿತ್ತು. ಫೈಝಾನ್ ಅವರ ತಾಯಿ ಕಿಸ್ಮತುನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ತನಿಖೆಯನ್ನು ದೆಹಲಿ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿತ್ತು.

2019ರ ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಕರ್ದಂಪುರಿಯಲ್ಲಿ ಪೊಲೀಸರು ತನ್ನ ಮಗನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ, ನಂತರ ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಅಲ್ಲಿ ಆತನಿಗೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸಲಾಗಿದೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ ಎಂದು ಕಿಸ್ಮತುನ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.

ಜುಲೈ 2024ರಲ್ಲಿ, ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರು ದೆಹಲಿ ಪೊಲೀಸರ ತನಿಖೆಯನ್ನು ತೀವ್ರವಾಗಿ ಟೀಕಿಸಿದ್ದರು. ಇದನ್ನು “ಆಲಸ್ಯ ಮತ್ತು ಅಸ್ಪಷ್ಟ” ಎಂದಿದ್ದರು. ಪ್ರಕರಣವು ದ್ವೇಷಾಪರಾಧದ ವರ್ಗಕ್ಕೆ ಸೇರುವಂತೆ ತೋರುತ್ತಿದೆ ಎಂದು ಹೇಳಿದ್ದರು.

ಆರೋಪಿಗಳು ಮತ್ತು ತನಿಖಾಧಿಕಾರಿಗಳು ಒಂದೇ ಇಲಾಖೆಗೆ ಸೇರಿದವರಾದಾಗ ತನಿಖೆ ನ್ಯಾಯಯುತವಾಗಿ ನಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿತ್ತು. ಇದೇ ಕಾರಣಕ್ಕೆ ಈ ಹಿಂದೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

“ಕಾನೂನಿನ ರಕ್ಷಕರೇ ಕಾನೂನನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವಾಗ ಮತ್ತು ಅವರೇ ಆ ಪ್ರಕರಣದ ತನಿಖೆ ನಡೆಸುವ ಸಂಸ್ಥೆಯ ಭಾಗವಾಗಿದ್ದಾಗ, ಅಂತಹ ತನಿಖೆಯು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಸಾಧ್ಯವಿಲ್ಲ,” ಎಂದು ಹೈಕೋರ್ಟ್ ಮಾರ್ಮಿಕವಾಗಿ ನುಡಿದಿತ್ತು.

ತನಿಖಾ ಪ್ರಕ್ರಿಯೆಯ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಲು, ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ವರ್ಗಾಯಿಸುವುದು ಅನಿವಾರ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಕ್ಷ್ಯಗಳಿದ್ದರೂ ಸಹ, ನಾಲ್ಕು ವರ್ಷಗಳ ಕಾಲ ಸ್ಥಳೀಯ ಪೊಲೀಸರು ನಡೆಸಿದ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 323ರ ಅಡಿಯಲ್ಲಿ ಇತರ ದಂಡ ವಿಧಿಸಬಹುದಾದ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿದೆ.

ಬುಧವಾರ, ಸಿಬಿಐ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಿದ ವಿಶೇಷ ಸಿಬಿಐ ನ್ಯಾಯಾಲಯವು, “ತನಿಖೆಯ ಸಮಯದಲ್ಲಿ, ಐಒ (ತನಿಖಾ ಅಧಿಕಾರಿ) ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಮತ್ತು ನಡೆಸಿದ ತನಿಖೆಯ ಆಧಾರದ ಮೇಲೆ, ಆರೋಪಿ ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಪ್ರಸ್ತುತ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಐಪಿಸಿ ಸೆಕ್ಷನ್ 323, 325, 304(II) r/w ಸೆಕ್ಷನ್ 34 ಮತ್ತು ಅದರ ಪ್ರಮುಖ ಅಪರಾಧಗಳ ಅಡಿಯಲ್ಲಿ ಅಪರಾಧವನ್ನು ಗುರುತಿಸಲು ಸಾಕಷ್ಟು ದಾಖಲೆಗಳಿವೆ” ಎಂದು ಹೇಳಿದೆ.

ಫೆಬ್ರವರಿ 2025ರಲ್ಲಿ, ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯವು ಜ್ಯೋತಿ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿರುದ್ಧವೂ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...