Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ - ಕೊಹ್ಲಿ

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ ಆಧಾರದಲ್ಲಿ ಯಾರ ಮೇಲಾದರೂ ದಾಳಿ ಮಾಡಿದರೆ ಮನುಷ್ಯನಾಗಿ ಮಾಡಬಹುದಾದ ಅತ್ಯಂತ ಕರುಣಾಜನಕ ವಿಷಯ” ಎಂದು ಕೊಹ್ಲಿ ವಿಷಾಧ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ ಹಕ್ಕಿದೆ. ಆದರೆ ಕೆಲವರ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ನಾನು ಎಂದಿಗೂ ಊಹಿಸಿರಲಿಲ್ಲ” ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ನಾವು ಒಳ್ಳೆಯ ಉದ್ದೇಶಕ್ಕಾಗಿ ಮೈದಾನದಲ್ಲಿ ಆಡುತ್ತಿದ್ದೇವೆಯೇ ಹೊರತು ಸಾಮಾಜಿಕ ಮಾಧ್ಯಮಗಳಲ್ಲಿನ ಬೆನ್ನುಮೂಳೆಯಿಲ್ಲದ ಜನರ ಗುಂಪಿನಂತಲ್ಲ. ಅವರಿಗೆ ಕೇವಲ ಒಬ್ಬ ವ್ಯಕ್ತಿಯನ್ನು ಸಹ ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅವರು ತಮ್ಮ ಗುರುತನ್ನು ಮರೆಮಾಚಿ ಸಾಮಾಜಿಕ ಮಾಧ್ಯಮಗಳಲ್ಲಿ ಗೇಲಿ ಮಾಡುತ್ತಾರೆ. ಇದು ಕೆಲವರಿಗೆ ಮನರಂಜನೆಯ ಮೂಲವಾಗಿರುವುದು ದುರದೃಷ್ಟಕರ ಮತ್ತು ದುಃಖದ ವಿಷಯವಾಗಿದೆ. ಇದು ಅಕ್ಷರಶಃ ಒಬ್ಬ ಮನುಷ್ಯ ಅತಿ ಕೆಳಮಟ್ಟದ ಕೃತ್ಯವಾಗಿದೆ ಎಂದು ಕೊಹ್ಲಿ ಕಿಡಿಕಾರಿದ್ದಾರೆ.

ಜನರು ತಮ್ಮ ಹತಾಶೆಯನ್ನು ಹೊರಹಾಕುತ್ತಾರೆ. ಏಕೆಂದರೆ ಮೊಹಮ್ಮದ್ ಶಮಿ ಭಾರತದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂಬ ತಿಳುವಳಿಕೆ ಅವರಿಗಿಲ್ಲ. ಶಮಿಯವರ ಪ್ರಾಮಾಣಿಕತೆ, ದೇಶದ ಬಗೆಗಿನ ಬದ್ಧತೆಯನ್ನು ಅರ್ಥಮಾಡಿಕೊಳ್ಳದ ಜನರೊಂದಿಗೆ ಒಂದು ನಿಮಿಷವನ್ನು ಸಹ ವ್ಯರ್ಥಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.


ಇದನ್ನೂ ಓದಿ; ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...