Homeಮುಖಪುಟತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ

ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ

- Advertisement -
- Advertisement -

ಬೋರ್ಡ್ ಪರೀಕ್ಷೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿರುವುದರಿಂದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸರ್ಕಾರ SSLC ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ತೀರ್ಮಾನ ಕೈಗೊಂಡಿದೆ.

ತೆಲಂಗಾಣ ರಾಜ್ಯದ ನಂತರ ತಮಿಳುನಾಡು ಸರ್ಕಾರವೂ ಇದೇ ತೀರ್ಮಾನ ತೆಗೆದುಕೊಂಡಿದೆ. ತಜ್ಞ ವೈದ್ಯರ ಸಲಹೆ ಮತ್ತು ಆಂತರಿಕ ಮಾಹಿತಿ ಪಡೆದ ನಂತರ SSLC ಮತ್ತು ಹನ್ನೊಂದನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಬಡ್ತಿ ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಪಳನಿಸ್ವಾಮಿ ತಿಳಿಸಿದ್ದಾರೆ.

12ನೇ ತರಗತಿ ಪರೀಕ್ಷೆಗೆ ಗೈರುಹಾಜರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಸಧ್ಯದ ಪರಿಸ್ಥಿತಿಯನ್ನು ನೋಡಿಕೊಂಡು ಪರೀಕ್ಷೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

SSLC ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾದ ಪರೀಕ್ಷೆಯಲ್ಲಿ ತೆಗೆದುಕೊಂಡ ಅಂಕಗಳನ್ನು ಲೆಕ್ಕಹಾಕಿ ಆಂತರೀಕ ಮೌಲ್ಯಮಾಪನ ಮಾಡಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಲು ನಿರ್ಧರಿಸಲಾಗಿದೆ.

ಬಾಕಿ ಇರುವ ಪರೀಕ್ಷೆಗಳನ್ನು 2 ಹಂತದಲ್ಲಿ ವಿಭಜಿಸಲಾಗಿದೆ. ಶೇಕಡ 80ರಷ್ಟು ಅಂಕಗಳ ಮೌಲ್ಯಮಾಪನ, ವಿದ್ಯಾರ್ಥಿಗಳ ಪ್ರಗತಿ, ಅರ್ಧವಾರ್ಷಿಕ ಪರೀಕ್ಷೆಯಲ್ಲಿ ತೆಗೆದುಕೊಂಡಿರುವ ಅಂಕಗಳು ಮತ್ತು ಶೇಕಡ 20ರಷ್ಟು ಹಾಜರಾತಿಯನ್ನು ಮುಂಬಡ್ತಿಗೆ ಪರಿಗಣಿಸಲಾಗುವುದು ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಈ ಹಿಂದೆ ಜೂನ್ 15 ರಿಂದ 26ರವರೆಗೆ SSLC ಪರೀಕ್ಷೆ ನಡೆಸಲು ತಮಿಳುನಾಡು ಸರ್ಕಾರ ತೀರ್ಮಾನಿಸಿತ್ತು. ಮೌಲ್ಯಮಾಪನವನ್ನು ಆಗಸ್ಟ್ ನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಈಗ ಮದ್ರಾಸ್ ಹೈಕೋರ್ಟ್ ಪರೀಕ್ಷೆ ನಡೆಸಲು ನಿರಾಕರಿಸಿರುವುದರಿಂದ ಈ ತೀರ್ಮಾನಕ್ಕೆ ಬಂದಿದೆ.

ತಮಿಳುನಾಡಿನಲ್ಲಿ 9.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ ಪರೀಕ್ಷೆ ನಡೆಸದೇ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕಾಗಿ ಬಂದಿದೆ. 11ನೇ ತರಗತಿ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲವಾಗಿದೆ.


ಇದನ್ನೂ ಓದಿ: ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...