Homeಮುಖಪುಟತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ

ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ

- Advertisement -
- Advertisement -

ಬೋರ್ಡ್ ಪರೀಕ್ಷೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿರುವುದರಿಂದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸರ್ಕಾರ SSLC ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ತೀರ್ಮಾನ ಕೈಗೊಂಡಿದೆ.

ತೆಲಂಗಾಣ ರಾಜ್ಯದ ನಂತರ ತಮಿಳುನಾಡು ಸರ್ಕಾರವೂ ಇದೇ ತೀರ್ಮಾನ ತೆಗೆದುಕೊಂಡಿದೆ. ತಜ್ಞ ವೈದ್ಯರ ಸಲಹೆ ಮತ್ತು ಆಂತರಿಕ ಮಾಹಿತಿ ಪಡೆದ ನಂತರ SSLC ಮತ್ತು ಹನ್ನೊಂದನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಬಡ್ತಿ ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಪಳನಿಸ್ವಾಮಿ ತಿಳಿಸಿದ್ದಾರೆ.

12ನೇ ತರಗತಿ ಪರೀಕ್ಷೆಗೆ ಗೈರುಹಾಜರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಸಧ್ಯದ ಪರಿಸ್ಥಿತಿಯನ್ನು ನೋಡಿಕೊಂಡು ಪರೀಕ್ಷೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

SSLC ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾದ ಪರೀಕ್ಷೆಯಲ್ಲಿ ತೆಗೆದುಕೊಂಡ ಅಂಕಗಳನ್ನು ಲೆಕ್ಕಹಾಕಿ ಆಂತರೀಕ ಮೌಲ್ಯಮಾಪನ ಮಾಡಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಲು ನಿರ್ಧರಿಸಲಾಗಿದೆ.

ಬಾಕಿ ಇರುವ ಪರೀಕ್ಷೆಗಳನ್ನು 2 ಹಂತದಲ್ಲಿ ವಿಭಜಿಸಲಾಗಿದೆ. ಶೇಕಡ 80ರಷ್ಟು ಅಂಕಗಳ ಮೌಲ್ಯಮಾಪನ, ವಿದ್ಯಾರ್ಥಿಗಳ ಪ್ರಗತಿ, ಅರ್ಧವಾರ್ಷಿಕ ಪರೀಕ್ಷೆಯಲ್ಲಿ ತೆಗೆದುಕೊಂಡಿರುವ ಅಂಕಗಳು ಮತ್ತು ಶೇಕಡ 20ರಷ್ಟು ಹಾಜರಾತಿಯನ್ನು ಮುಂಬಡ್ತಿಗೆ ಪರಿಗಣಿಸಲಾಗುವುದು ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಈ ಹಿಂದೆ ಜೂನ್ 15 ರಿಂದ 26ರವರೆಗೆ SSLC ಪರೀಕ್ಷೆ ನಡೆಸಲು ತಮಿಳುನಾಡು ಸರ್ಕಾರ ತೀರ್ಮಾನಿಸಿತ್ತು. ಮೌಲ್ಯಮಾಪನವನ್ನು ಆಗಸ್ಟ್ ನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಈಗ ಮದ್ರಾಸ್ ಹೈಕೋರ್ಟ್ ಪರೀಕ್ಷೆ ನಡೆಸಲು ನಿರಾಕರಿಸಿರುವುದರಿಂದ ಈ ತೀರ್ಮಾನಕ್ಕೆ ಬಂದಿದೆ.

ತಮಿಳುನಾಡಿನಲ್ಲಿ 9.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ ಪರೀಕ್ಷೆ ನಡೆಸದೇ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕಾಗಿ ಬಂದಿದೆ. 11ನೇ ತರಗತಿ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲವಾಗಿದೆ.


ಇದನ್ನೂ ಓದಿ: ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...