Homeಮುಖಪುಟಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ತಡರಾತ್ರಿ ಡಾ.ಕಫೀಲ್‌ ಖಾನ್ ಬಿಡುಗಡೆ

ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ತಡರಾತ್ರಿ ಡಾ.ಕಫೀಲ್‌ ಖಾನ್ ಬಿಡುಗಡೆ

ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿತ್ತು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದ ಉತ್ತರ ಪ್ರದೇಶದ ಡಾ.ಕಫೀಲ್‌ ಖಾನ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದ ಬೆನ್ನಲೇ ನಿನ್ನೆ ಮಧ್ಯ ರಾತ್ರಿ ಅವರನ್ನು ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಅಲಹಾಬಾದ್ ಹೈಕೋರ್ಟ್ ಮಂಗಳವಾರ ಡಾ.ಕಫೀಲ್‌ ಖಾನ್ ಬಂಧನವನ್ನು ಕಾನೂನುಬಾಹಿರ ಎಂದು ಕರೆದಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಡಾ.ಕಫೀಲ್‌ ಖಾನ್‌ ಈ ಹಿಂದೆ ಹಲವು ಮನವಿಗಳನ್ನು ಮಾಡಿದ್ದರು. ಕೊನೆಗೂ ಅವರ ಅರ್ಜಿಯನ್ನು ಮಾನ್ಯ ಮಾಡಿದ ಅಲಹಾಬಾದ್ ಹೈಕೋರ್ಟ್‌ನ ನ್ಯಾ.ಸುಮಿತ್ರಾ ದಯಾಳ್‌ ಸಿಂಗ್‌ ಮತ್ತು ನ್ಯಾ.ಗೋವಿಂದ ಮಾಥೂರ್‌ ಅವರಿದ್ದ ಪೀಠವು ಅವರ ಬಿಡುಗಡೆಗೆ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಾಲಯದ ತೀರ್ಪಿನ ನಂತರವೂ, ಜೈಲಿನ ಅಧಿಕಾರಿಗಳು ಡಾ.ಕಫೀಲ್‌ ಖಾನ್ ಅವರನ್ನು ಬಿಡುಗಡೆ ಮಾಡುವುದಕ್ಕೆ ಗಂಟೆಗಟ್ಟಲೆ  ತಡ ಮಾಡಿದಾಗ, ಅವರ ಕುಟುಂಬವು ಅಲಹಾಬಾದ್ ಹೈಕೋರ್ಟ್‌ನಲ್ಲಿ ತಿರಸ್ಕಾರ ಅರ್ಜಿ ಸಲ್ಲಿಸುವುದಾಗಿ ತಿಳಿಸಿತ್ತು.

“ನನ್ನ ಮಗ ಜೈಲಿನಿಂದ ಹೊರಬರುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಬಹಳ ಸಮಯದ ನಂತರ ನಾನು ಅವನನ್ನು ನೋಡಲು, ಸ್ಪರ್ಶಿಸಲು ಸಾಧ್ಯವಾಗುತ್ತದೆ” ಎಂದು ಮಥುರಾ ಜೈಲಿಗೆ ತೆರಳುವಾಗ ಕಫೀಲ್ ಅವರ ತಾಯಿ ಎಂ.ಎಸ್. ಪರ್ವೀನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ ಎಂದು ಎನ್ ಡಿ ಟಿ ವಿ ಹೇಳಿದೆ.

“ನನ್ನ ಮಗ ಒಳ್ಳೆಯ ವ್ಯಕ್ತಿ. ಅವನು ಎಂದಿಗೂ ದೇಶ ಅಥವಾ ಸಮಾಜಕ್ಕೆ ವಿರೋಧಿಯಲ್ಲ. ಇಂದು ನನ್ನ ಸೊಸೆಯ ಜನ್ಮದಿನ. ಹಾಗಾಗಿ ಅವಳಿಗೆ ಕೇಕ್ ಕೂಡ ತೆಗೆದುಕೊಂಡುಹೋಗುತ್ತಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಡಾ.ಕಫೀಲ್ ಖಾನ್ ಜೀವಕ್ಕೆ ಅಪಾಯವಿದೆ : ಖಾನ್‌ ಪತ್ನಿಯ ಆರೋಪ

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ಮೇಲೆ ಮೊದಲ ಬಾರಿಗೆ ಆರೋಪ ಹೊರಿಸಲಾಗಿದ್ದರೂ, ಈ ವರ್ಷ ಫೆಬ್ರವರಿ 13ರಂದು ಜಾಮೀನು ನೀಡಿದ ಎರಡು ದಿನಗಳ ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಆರೋಪ ಹೊರಿಸಿದ್ದು ಪ್ರಸ್ತುತ ಮಥುರಾ ಜೈಲಿನಲ್ಲಿದ್ದರು.

ಆಗಸ್ಟ್ 16ರಂದು NSA ಪ್ರಕರಣದಲ್ಲಿ ಇನ್ನು ಮೂರು ತಿಂಗಳ ಕಾಲ ಅವರ ಬಂಧನವನ್ನು ವಿಸ್ತರಿಸುವಂತೆ ಕೇಳಿಕೊಳ್ಳಲಾಗಿತ್ತು.

ಆದರೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ‌ ಎನ್‌ಎಸ್‌ಎ ಕಾಯಿದೆಯಡಿ ಡಾ. ಕಫೀಲ್‌ ಖಾನ್‌ ಬಂಧನ  ಕಾನೂನಿನಡಿ ಮಾನ್ಯವಲ್ಲ. ಹಾಗಾಗಿ ಅವರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಹೇಳಿದೆ.

2017 ರಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಗೋರಖ್‌ಪುರದ ಸರ್ಕಾರಿ ಆಸ್ಪತ್ರೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳ ಸಾವಿನಲ್ಲಿ ಕಫೀಲ್ ಖಾನ್ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ ಬಂಧಿಸಿ, ಜೈಲಿಗೆ ಹಾಕಲಾಗಿತ್ತು.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...