Homeಕರ್ನಾಟಕಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೊಬ್ಬ ಅಸಮಾಧಾನಿತ ಹಿರಿಯ ನಾಯಕ ರಾಜಕೀಯ ನಿವೃತ್ತಿ ಘೋಷಣೆ

ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೊಬ್ಬ ಅಸಮಾಧಾನಿತ ಹಿರಿಯ ನಾಯಕ ರಾಜಕೀಯ ನಿವೃತ್ತಿ ಘೋಷಣೆ

- Advertisement -
- Advertisement -

ಮಂಗಳವಾರ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಘೋ‍ಷಣೆ ಮಾಡಿದ ಮೇಲೆ ಪಕ್ಷದಲ್ಲಿ ಅಸಮಾಧಾನದ ಕಿಚ್ಚು ಹೆಚ್ಚುತ್ತಲೇ ಇದೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ” ಎಂದು ಪಕ್ಷದ ಮೇಲಿನ ಬೇಸರ ವ್ಯಕ್ತಪಡಿಸಿದರು.

”ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು” ಎಂದು ಅಳಲು ತೋಡಿಕೊಂಡರು.

”ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು. ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿಯೊಂದಿಗಿನ ತಮ್ಮ ಸಂಬಂಧವನ್ನು ಬಹುತೇಕ ಕಡಿತಗೊಳಿಸುವ ಮಾತುಗಳನ್ನು ಅವರು ಆಡಿದ್ದಾರೆ.

ಇದನ್ನೂ ಓದಿ: ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಸಚಿವ ಎಸ್​.ಅಂಗಾರ ಆರು ಸುಳ್ಯ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ಶಾಸಕರಾಗಿದ್ದರು. ಆದರೂ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಸಚಿವ ಎಸ್.ಅಂಗಾರ ಅವರು ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಮೀನುಗಾರಿಕೆ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು.

ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು ಒಬ್ಬರಿಂದೊಬ್ಬರು ನಿವೃತ್ತಿಯಾಗುತ್ತಿದ್ದಾರೆ. ಮೊದಲಿಗೆ ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಇನ್ನು ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಹ ಟಿಕೆಟ್ ಕೈತಪ್ಪುವ ಸುಳಿವು ಇದ್ದಿದ್ದರಿಂದ ಮಂಗಳವಾರವಷ್ಟೇ ಚುನಾವಣೆಗೆ ನಿವೃತ್ತಿ ಘೋಷಿಸಿದರು, ಆದರೆ ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.

ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಹ ಸ್ವಯಂ ಪ್ರೇರಿತವಾಗಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಅವರೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಘೋಷಣೆ ಮಾಡಿದ್ದರು. ಇದೀಗ ಸತತ ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಸುಳ್ಯ ಶಾಸಕ ಎಸ್.​ಅಂಗಾರ ಅವರು ಈ ಬಾರಿ ಬಿಜೆಪಿ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಸಕ್ರಿಯ ರಾಜಕಾರಣಕ್ಕೆ ಗುಡ್​ಬೈ ಹೇಳಿದ್ದಾರೆ.

ಬುಧವಾರ ಬೆಳಿಗ್ಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಕೂಡ ಟಿಕೆಟ್ ವಿಚಾರಕ್ಕೆ ಹೈಕಮಾಂಡ್ ವಿರುದ್ದವೇ ಗುಡುಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಾತುಗಳನ್ನಾಡಿದ್ದಾರೆ.

ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು ಹೆಚ್ಚಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...