Homeಕರ್ನಾಟಕಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೊಬ್ಬ ಅಸಮಾಧಾನಿತ ಹಿರಿಯ ನಾಯಕ ರಾಜಕೀಯ ನಿವೃತ್ತಿ ಘೋಷಣೆ

ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೊಬ್ಬ ಅಸಮಾಧಾನಿತ ಹಿರಿಯ ನಾಯಕ ರಾಜಕೀಯ ನಿವೃತ್ತಿ ಘೋಷಣೆ

- Advertisement -
- Advertisement -

ಮಂಗಳವಾರ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಘೋ‍ಷಣೆ ಮಾಡಿದ ಮೇಲೆ ಪಕ್ಷದಲ್ಲಿ ಅಸಮಾಧಾನದ ಕಿಚ್ಚು ಹೆಚ್ಚುತ್ತಲೇ ಇದೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ” ಎಂದು ಪಕ್ಷದ ಮೇಲಿನ ಬೇಸರ ವ್ಯಕ್ತಪಡಿಸಿದರು.

”ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು” ಎಂದು ಅಳಲು ತೋಡಿಕೊಂಡರು.

”ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು. ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿಯೊಂದಿಗಿನ ತಮ್ಮ ಸಂಬಂಧವನ್ನು ಬಹುತೇಕ ಕಡಿತಗೊಳಿಸುವ ಮಾತುಗಳನ್ನು ಅವರು ಆಡಿದ್ದಾರೆ.

ಇದನ್ನೂ ಓದಿ: ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಸಚಿವ ಎಸ್​.ಅಂಗಾರ ಆರು ಸುಳ್ಯ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ಶಾಸಕರಾಗಿದ್ದರು. ಆದರೂ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಸಚಿವ ಎಸ್.ಅಂಗಾರ ಅವರು ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಮೀನುಗಾರಿಕೆ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು.

ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು ಒಬ್ಬರಿಂದೊಬ್ಬರು ನಿವೃತ್ತಿಯಾಗುತ್ತಿದ್ದಾರೆ. ಮೊದಲಿಗೆ ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಇನ್ನು ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಹ ಟಿಕೆಟ್ ಕೈತಪ್ಪುವ ಸುಳಿವು ಇದ್ದಿದ್ದರಿಂದ ಮಂಗಳವಾರವಷ್ಟೇ ಚುನಾವಣೆಗೆ ನಿವೃತ್ತಿ ಘೋಷಿಸಿದರು, ಆದರೆ ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.

ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಹ ಸ್ವಯಂ ಪ್ರೇರಿತವಾಗಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಅವರೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಘೋಷಣೆ ಮಾಡಿದ್ದರು. ಇದೀಗ ಸತತ ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಸುಳ್ಯ ಶಾಸಕ ಎಸ್.​ಅಂಗಾರ ಅವರು ಈ ಬಾರಿ ಬಿಜೆಪಿ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಸಕ್ರಿಯ ರಾಜಕಾರಣಕ್ಕೆ ಗುಡ್​ಬೈ ಹೇಳಿದ್ದಾರೆ.

ಬುಧವಾರ ಬೆಳಿಗ್ಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಕೂಡ ಟಿಕೆಟ್ ವಿಚಾರಕ್ಕೆ ಹೈಕಮಾಂಡ್ ವಿರುದ್ದವೇ ಗುಡುಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಾತುಗಳನ್ನಾಡಿದ್ದಾರೆ.

ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು ಹೆಚ್ಚಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...