Homeಕರ್ನಾಟಕಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೊಬ್ಬ ಅಸಮಾಧಾನಿತ ಹಿರಿಯ ನಾಯಕ ರಾಜಕೀಯ ನಿವೃತ್ತಿ ಘೋಷಣೆ

ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೊಬ್ಬ ಅಸಮಾಧಾನಿತ ಹಿರಿಯ ನಾಯಕ ರಾಜಕೀಯ ನಿವೃತ್ತಿ ಘೋಷಣೆ

- Advertisement -
- Advertisement -

ಮಂಗಳವಾರ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಘೋ‍ಷಣೆ ಮಾಡಿದ ಮೇಲೆ ಪಕ್ಷದಲ್ಲಿ ಅಸಮಾಧಾನದ ಕಿಚ್ಚು ಹೆಚ್ಚುತ್ತಲೇ ಇದೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ” ಎಂದು ಪಕ್ಷದ ಮೇಲಿನ ಬೇಸರ ವ್ಯಕ್ತಪಡಿಸಿದರು.

”ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು” ಎಂದು ಅಳಲು ತೋಡಿಕೊಂಡರು.

”ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು. ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದೇನೆ” ಎಂದು ಬಿಜೆಪಿಯೊಂದಿಗಿನ ತಮ್ಮ ಸಂಬಂಧವನ್ನು ಬಹುತೇಕ ಕಡಿತಗೊಳಿಸುವ ಮಾತುಗಳನ್ನು ಅವರು ಆಡಿದ್ದಾರೆ.

ಇದನ್ನೂ ಓದಿ: ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಸಚಿವ ಎಸ್​.ಅಂಗಾರ ಆರು ಸುಳ್ಯ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ಶಾಸಕರಾಗಿದ್ದರು. ಆದರೂ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಸಚಿವ ಎಸ್.ಅಂಗಾರ ಅವರು ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಮೀನುಗಾರಿಕೆ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು.

ಕರ್ನಾಟಕ ಬಿಜೆಪಿಯ ಹಿರಿಯ ನಾಯಕರು ಒಬ್ಬರಿಂದೊಬ್ಬರು ನಿವೃತ್ತಿಯಾಗುತ್ತಿದ್ದಾರೆ. ಮೊದಲಿಗೆ ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಇನ್ನು ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಹ ಟಿಕೆಟ್ ಕೈತಪ್ಪುವ ಸುಳಿವು ಇದ್ದಿದ್ದರಿಂದ ಮಂಗಳವಾರವಷ್ಟೇ ಚುನಾವಣೆಗೆ ನಿವೃತ್ತಿ ಘೋಷಿಸಿದರು, ಆದರೆ ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.

ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಹ ಸ್ವಯಂ ಪ್ರೇರಿತವಾಗಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಅವರೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಘೋಷಣೆ ಮಾಡಿದ್ದರು. ಇದೀಗ ಸತತ ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಸುಳ್ಯ ಶಾಸಕ ಎಸ್.​ಅಂಗಾರ ಅವರು ಈ ಬಾರಿ ಬಿಜೆಪಿ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಸಕ್ರಿಯ ರಾಜಕಾರಣಕ್ಕೆ ಗುಡ್​ಬೈ ಹೇಳಿದ್ದಾರೆ.

ಬುಧವಾರ ಬೆಳಿಗ್ಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನಗೊಂಡು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಕೂಡ ಟಿಕೆಟ್ ವಿಚಾರಕ್ಕೆ ಹೈಕಮಾಂಡ್ ವಿರುದ್ದವೇ ಗುಡುಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಾತುಗಳನ್ನಾಡಿದ್ದಾರೆ.

ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು ಹೆಚ್ಚಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...