Homeಕರ್ನಾಟಕಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

ಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.

ಮೈಸೂರು ರಂಗಾಯಣ ನಿರ್ದೇಶಕರಾದ ಬಳಿಕ ಅಡ್ಡಂಡ ಕಾರ್ಯಪ್ಪ ಹಲವು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು. ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಜಾತಿಯ ಉರಿಗೌಡ ಮತ್ತು ನಂಜೇಗೌಡ ಎಂದು ಕಾಲ್ಪನಿಕ ಪಾತ್ರಗಳನ್ನು ಸೃಷ್ಟಿಸಿ, ಒಕ್ಕಲಿಗರು ವೀರರು ಶೂರರು ಎಂದು ಹೇಳಲು ಹೊರಟಿದ್ದರು. ಈ ಕಾಲ್ಪನಿಕ ಕಥೆಯನ್ನೇ ಬಿಜೆಪಿಯ ಒಕ್ಕಲಿಗ ರಾಜಕಾರಣಿಗಳಾದ ಸಿಟಿ ರವಿ ಹಾಗೂ ಅಶ್ವತ್ಥ ನಾರಾಯಣ ಅವರು ಸತ್ಯ ಎಂದು ಪ್ರತಿಪಾದಿಸಲು ಹೊರಟರು. ಆದರೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಆ ಸಮುದಾಯದ ಸ್ವಾಮೀಜಿ ಇದಕ್ಕೆ ವಿರೋಧ ಮಾಡಿದರು. ದೇಶಭಕ್ತ ಟಿಪ್ಪು ಸುಲ್ತಾನನನ್ನು ಕೊಂದ ದೇಶದ್ರೋಹಿ ಪಟ್ಟ ಒಕ್ಕಲಿಗರಿಗೆ ಬೇಡ ಎಂದು ಹೇಳುವ ಮೂಲಕ ಈ ಕಾಲ್ಪನಿಕ ಪಾತ್ರಗಳನ್ನು ಒಪ್ಪಲಿಲ್ಲ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ರಚಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಾರೆ. ಈ ಎರಡು ಪಾತ್ರಗಳ ಮೂಲಕ ಒಕ್ಕಲಿಗರನ್ನು ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿದ್ದವು.

ಇದೀಗ ಬಿಜೆಪಿ ಸೋತ ಹಿನ್ನೆಲೆ ಅಡ್ಡಂಡ ಕಾರ್ಯಪ್ಪ ಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರಿಕಾ ಹೇಳಿಕೆ ನೀಡಿದ್ದಾರೆ. ”ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ಮೈಸೂರು ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

”ನಾನು 2019ರ ಡಿ.31ರಂದು ಅಧಿಕಾರ ವಹಿಸಿಕೊಂಡಾಗ ರಂಗಾಯಣದ ಆರ್ಥಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಈಗ ₹2.09 ಕೋಟಿ ನಿರಖು ಠೇವಣಿ ಇದೆ. ಸಂಸ್ಥೆಯ ಬ್ಯಾಂಕ್‌ ಖಾತೆಯಲ್ಲಿ ₹1.57 ಕೋಟಿ ಉಳಿತಾಯದ ಹಣವಿದೆ. ಸಂಸ್ಥೆಯ ಪ್ರದರ್ಶನ, ದಾನಿಗಳ ನೆರವು, ಅನುದಾನ ಇತ್ಯಾದಿಗಳನ್ನು ಮಿತವ್ಯಯ ಮಾಡಿ ಉಳಿಕೆ ಮಾಡಲಾಗಿದೆ. ಸರ್ಕಾರದ ಇಡುಗಂಟು ಮೊತ್ತ ₹4 ಕೋಟಿ ಇದ್ದು, ಬಡ್ಡಿ ಮೊತ್ತ ₹50 ಲಕ್ಷ ಸಂಸ್ಥೆಗೆ ಸಿಗಲಿದೆ. ಒಟ್ಟು ₹4.16 ಕೋಟಿ ಮೊತ್ತ ಸಂಸ್ಥೆಯ ಖಾತೆಯಲ್ಲಿದೆ. ರಾಜ್ಯದ ಬೇರೆ ರಂಗಾಯಣ ಸಂಸ್ಥೆಗಳ ಖಾತೆಯಲ್ಲಿ ₹15 ಲಕ್ಷ ಕೂಡ ಉಳಿತಾಯ ಇಲ್ಲ. 3 ವರ್ಷ ಹಗಲಿರುಳು ದುಡಿದು ಮೈಸೂರು ರಂಗಾಯಣದ ಆರ್ಥಿಕ ಸ್ಥಿತಿ ಭದ್ರಪಡಿಸಿದ್ದೇನೆ” ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ನಡೆದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66, ಕಾಂಗ್ರೆಸ್ 135 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...