Homeಕರ್ನಾಟಕಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

ಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.

ಮೈಸೂರು ರಂಗಾಯಣ ನಿರ್ದೇಶಕರಾದ ಬಳಿಕ ಅಡ್ಡಂಡ ಕಾರ್ಯಪ್ಪ ಹಲವು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು. ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಜಾತಿಯ ಉರಿಗೌಡ ಮತ್ತು ನಂಜೇಗೌಡ ಎಂದು ಕಾಲ್ಪನಿಕ ಪಾತ್ರಗಳನ್ನು ಸೃಷ್ಟಿಸಿ, ಒಕ್ಕಲಿಗರು ವೀರರು ಶೂರರು ಎಂದು ಹೇಳಲು ಹೊರಟಿದ್ದರು. ಈ ಕಾಲ್ಪನಿಕ ಕಥೆಯನ್ನೇ ಬಿಜೆಪಿಯ ಒಕ್ಕಲಿಗ ರಾಜಕಾರಣಿಗಳಾದ ಸಿಟಿ ರವಿ ಹಾಗೂ ಅಶ್ವತ್ಥ ನಾರಾಯಣ ಅವರು ಸತ್ಯ ಎಂದು ಪ್ರತಿಪಾದಿಸಲು ಹೊರಟರು. ಆದರೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಆ ಸಮುದಾಯದ ಸ್ವಾಮೀಜಿ ಇದಕ್ಕೆ ವಿರೋಧ ಮಾಡಿದರು. ದೇಶಭಕ್ತ ಟಿಪ್ಪು ಸುಲ್ತಾನನನ್ನು ಕೊಂದ ದೇಶದ್ರೋಹಿ ಪಟ್ಟ ಒಕ್ಕಲಿಗರಿಗೆ ಬೇಡ ಎಂದು ಹೇಳುವ ಮೂಲಕ ಈ ಕಾಲ್ಪನಿಕ ಪಾತ್ರಗಳನ್ನು ಒಪ್ಪಲಿಲ್ಲ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ರಚಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಾರೆ. ಈ ಎರಡು ಪಾತ್ರಗಳ ಮೂಲಕ ಒಕ್ಕಲಿಗರನ್ನು ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿದ್ದವು.

ಇದೀಗ ಬಿಜೆಪಿ ಸೋತ ಹಿನ್ನೆಲೆ ಅಡ್ಡಂಡ ಕಾರ್ಯಪ್ಪ ಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರಿಕಾ ಹೇಳಿಕೆ ನೀಡಿದ್ದಾರೆ. ”ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ಮೈಸೂರು ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

”ನಾನು 2019ರ ಡಿ.31ರಂದು ಅಧಿಕಾರ ವಹಿಸಿಕೊಂಡಾಗ ರಂಗಾಯಣದ ಆರ್ಥಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಈಗ ₹2.09 ಕೋಟಿ ನಿರಖು ಠೇವಣಿ ಇದೆ. ಸಂಸ್ಥೆಯ ಬ್ಯಾಂಕ್‌ ಖಾತೆಯಲ್ಲಿ ₹1.57 ಕೋಟಿ ಉಳಿತಾಯದ ಹಣವಿದೆ. ಸಂಸ್ಥೆಯ ಪ್ರದರ್ಶನ, ದಾನಿಗಳ ನೆರವು, ಅನುದಾನ ಇತ್ಯಾದಿಗಳನ್ನು ಮಿತವ್ಯಯ ಮಾಡಿ ಉಳಿಕೆ ಮಾಡಲಾಗಿದೆ. ಸರ್ಕಾರದ ಇಡುಗಂಟು ಮೊತ್ತ ₹4 ಕೋಟಿ ಇದ್ದು, ಬಡ್ಡಿ ಮೊತ್ತ ₹50 ಲಕ್ಷ ಸಂಸ್ಥೆಗೆ ಸಿಗಲಿದೆ. ಒಟ್ಟು ₹4.16 ಕೋಟಿ ಮೊತ್ತ ಸಂಸ್ಥೆಯ ಖಾತೆಯಲ್ಲಿದೆ. ರಾಜ್ಯದ ಬೇರೆ ರಂಗಾಯಣ ಸಂಸ್ಥೆಗಳ ಖಾತೆಯಲ್ಲಿ ₹15 ಲಕ್ಷ ಕೂಡ ಉಳಿತಾಯ ಇಲ್ಲ. 3 ವರ್ಷ ಹಗಲಿರುಳು ದುಡಿದು ಮೈಸೂರು ರಂಗಾಯಣದ ಆರ್ಥಿಕ ಸ್ಥಿತಿ ಭದ್ರಪಡಿಸಿದ್ದೇನೆ” ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ನಡೆದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66, ಕಾಂಗ್ರೆಸ್ 135 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...