Homeಕರ್ನಾಟಕಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

ಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.

ಮೈಸೂರು ರಂಗಾಯಣ ನಿರ್ದೇಶಕರಾದ ಬಳಿಕ ಅಡ್ಡಂಡ ಕಾರ್ಯಪ್ಪ ಹಲವು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು. ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಜಾತಿಯ ಉರಿಗೌಡ ಮತ್ತು ನಂಜೇಗೌಡ ಎಂದು ಕಾಲ್ಪನಿಕ ಪಾತ್ರಗಳನ್ನು ಸೃಷ್ಟಿಸಿ, ಒಕ್ಕಲಿಗರು ವೀರರು ಶೂರರು ಎಂದು ಹೇಳಲು ಹೊರಟಿದ್ದರು. ಈ ಕಾಲ್ಪನಿಕ ಕಥೆಯನ್ನೇ ಬಿಜೆಪಿಯ ಒಕ್ಕಲಿಗ ರಾಜಕಾರಣಿಗಳಾದ ಸಿಟಿ ರವಿ ಹಾಗೂ ಅಶ್ವತ್ಥ ನಾರಾಯಣ ಅವರು ಸತ್ಯ ಎಂದು ಪ್ರತಿಪಾದಿಸಲು ಹೊರಟರು. ಆದರೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಆ ಸಮುದಾಯದ ಸ್ವಾಮೀಜಿ ಇದಕ್ಕೆ ವಿರೋಧ ಮಾಡಿದರು. ದೇಶಭಕ್ತ ಟಿಪ್ಪು ಸುಲ್ತಾನನನ್ನು ಕೊಂದ ದೇಶದ್ರೋಹಿ ಪಟ್ಟ ಒಕ್ಕಲಿಗರಿಗೆ ಬೇಡ ಎಂದು ಹೇಳುವ ಮೂಲಕ ಈ ಕಾಲ್ಪನಿಕ ಪಾತ್ರಗಳನ್ನು ಒಪ್ಪಲಿಲ್ಲ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ರಚಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಾರೆ. ಈ ಎರಡು ಪಾತ್ರಗಳ ಮೂಲಕ ಒಕ್ಕಲಿಗರನ್ನು ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿದ್ದವು.

ಇದೀಗ ಬಿಜೆಪಿ ಸೋತ ಹಿನ್ನೆಲೆ ಅಡ್ಡಂಡ ಕಾರ್ಯಪ್ಪ ಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರಿಕಾ ಹೇಳಿಕೆ ನೀಡಿದ್ದಾರೆ. ”ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ಮೈಸೂರು ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

”ನಾನು 2019ರ ಡಿ.31ರಂದು ಅಧಿಕಾರ ವಹಿಸಿಕೊಂಡಾಗ ರಂಗಾಯಣದ ಆರ್ಥಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಈಗ ₹2.09 ಕೋಟಿ ನಿರಖು ಠೇವಣಿ ಇದೆ. ಸಂಸ್ಥೆಯ ಬ್ಯಾಂಕ್‌ ಖಾತೆಯಲ್ಲಿ ₹1.57 ಕೋಟಿ ಉಳಿತಾಯದ ಹಣವಿದೆ. ಸಂಸ್ಥೆಯ ಪ್ರದರ್ಶನ, ದಾನಿಗಳ ನೆರವು, ಅನುದಾನ ಇತ್ಯಾದಿಗಳನ್ನು ಮಿತವ್ಯಯ ಮಾಡಿ ಉಳಿಕೆ ಮಾಡಲಾಗಿದೆ. ಸರ್ಕಾರದ ಇಡುಗಂಟು ಮೊತ್ತ ₹4 ಕೋಟಿ ಇದ್ದು, ಬಡ್ಡಿ ಮೊತ್ತ ₹50 ಲಕ್ಷ ಸಂಸ್ಥೆಗೆ ಸಿಗಲಿದೆ. ಒಟ್ಟು ₹4.16 ಕೋಟಿ ಮೊತ್ತ ಸಂಸ್ಥೆಯ ಖಾತೆಯಲ್ಲಿದೆ. ರಾಜ್ಯದ ಬೇರೆ ರಂಗಾಯಣ ಸಂಸ್ಥೆಗಳ ಖಾತೆಯಲ್ಲಿ ₹15 ಲಕ್ಷ ಕೂಡ ಉಳಿತಾಯ ಇಲ್ಲ. 3 ವರ್ಷ ಹಗಲಿರುಳು ದುಡಿದು ಮೈಸೂರು ರಂಗಾಯಣದ ಆರ್ಥಿಕ ಸ್ಥಿತಿ ಭದ್ರಪಡಿಸಿದ್ದೇನೆ” ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ನಡೆದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66, ಕಾಂಗ್ರೆಸ್ 135 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....