Homeಕರ್ನಾಟಕಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

ಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.

ಮೈಸೂರು ರಂಗಾಯಣ ನಿರ್ದೇಶಕರಾದ ಬಳಿಕ ಅಡ್ಡಂಡ ಕಾರ್ಯಪ್ಪ ಹಲವು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು. ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಜಾತಿಯ ಉರಿಗೌಡ ಮತ್ತು ನಂಜೇಗೌಡ ಎಂದು ಕಾಲ್ಪನಿಕ ಪಾತ್ರಗಳನ್ನು ಸೃಷ್ಟಿಸಿ, ಒಕ್ಕಲಿಗರು ವೀರರು ಶೂರರು ಎಂದು ಹೇಳಲು ಹೊರಟಿದ್ದರು. ಈ ಕಾಲ್ಪನಿಕ ಕಥೆಯನ್ನೇ ಬಿಜೆಪಿಯ ಒಕ್ಕಲಿಗ ರಾಜಕಾರಣಿಗಳಾದ ಸಿಟಿ ರವಿ ಹಾಗೂ ಅಶ್ವತ್ಥ ನಾರಾಯಣ ಅವರು ಸತ್ಯ ಎಂದು ಪ್ರತಿಪಾದಿಸಲು ಹೊರಟರು. ಆದರೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಆ ಸಮುದಾಯದ ಸ್ವಾಮೀಜಿ ಇದಕ್ಕೆ ವಿರೋಧ ಮಾಡಿದರು. ದೇಶಭಕ್ತ ಟಿಪ್ಪು ಸುಲ್ತಾನನನ್ನು ಕೊಂದ ದೇಶದ್ರೋಹಿ ಪಟ್ಟ ಒಕ್ಕಲಿಗರಿಗೆ ಬೇಡ ಎಂದು ಹೇಳುವ ಮೂಲಕ ಈ ಕಾಲ್ಪನಿಕ ಪಾತ್ರಗಳನ್ನು ಒಪ್ಪಲಿಲ್ಲ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ರಚಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಾರೆ. ಈ ಎರಡು ಪಾತ್ರಗಳ ಮೂಲಕ ಒಕ್ಕಲಿಗರನ್ನು ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿದ್ದವು.

ಇದೀಗ ಬಿಜೆಪಿ ಸೋತ ಹಿನ್ನೆಲೆ ಅಡ್ಡಂಡ ಕಾರ್ಯಪ್ಪ ಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರಿಕಾ ಹೇಳಿಕೆ ನೀಡಿದ್ದಾರೆ. ”ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ಮೈಸೂರು ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

”ನಾನು 2019ರ ಡಿ.31ರಂದು ಅಧಿಕಾರ ವಹಿಸಿಕೊಂಡಾಗ ರಂಗಾಯಣದ ಆರ್ಥಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಈಗ ₹2.09 ಕೋಟಿ ನಿರಖು ಠೇವಣಿ ಇದೆ. ಸಂಸ್ಥೆಯ ಬ್ಯಾಂಕ್‌ ಖಾತೆಯಲ್ಲಿ ₹1.57 ಕೋಟಿ ಉಳಿತಾಯದ ಹಣವಿದೆ. ಸಂಸ್ಥೆಯ ಪ್ರದರ್ಶನ, ದಾನಿಗಳ ನೆರವು, ಅನುದಾನ ಇತ್ಯಾದಿಗಳನ್ನು ಮಿತವ್ಯಯ ಮಾಡಿ ಉಳಿಕೆ ಮಾಡಲಾಗಿದೆ. ಸರ್ಕಾರದ ಇಡುಗಂಟು ಮೊತ್ತ ₹4 ಕೋಟಿ ಇದ್ದು, ಬಡ್ಡಿ ಮೊತ್ತ ₹50 ಲಕ್ಷ ಸಂಸ್ಥೆಗೆ ಸಿಗಲಿದೆ. ಒಟ್ಟು ₹4.16 ಕೋಟಿ ಮೊತ್ತ ಸಂಸ್ಥೆಯ ಖಾತೆಯಲ್ಲಿದೆ. ರಾಜ್ಯದ ಬೇರೆ ರಂಗಾಯಣ ಸಂಸ್ಥೆಗಳ ಖಾತೆಯಲ್ಲಿ ₹15 ಲಕ್ಷ ಕೂಡ ಉಳಿತಾಯ ಇಲ್ಲ. 3 ವರ್ಷ ಹಗಲಿರುಳು ದುಡಿದು ಮೈಸೂರು ರಂಗಾಯಣದ ಆರ್ಥಿಕ ಸ್ಥಿತಿ ಭದ್ರಪಡಿಸಿದ್ದೇನೆ” ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ನಡೆದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66, ಕಾಂಗ್ರೆಸ್ 135 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...