Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...