Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....