Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...