Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...