Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...