Homeಮುಖಪುಟಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

ಹಿಂಡೆನ್‌ಬರ್ಗ್ ವರದಿ ಬೆನ್ನಲ್ಲೇ ಅದಾನಿ ಒಪ್ಪಂದವನ್ನು ಪರಿಷ್ಕರಿಸಲು ಮುಂದಾದ ಬಾಂಗ್ಲಾ

- Advertisement -
- Advertisement -

ಕಲ್ಲಿದ್ದಲು ಬೆಲೆಯಲ್ಲಿನ ಏರುಪೇರಿನಿಂದಾಗಿ ಬಾಂಗ್ಲಾದೇಶವು ಅದಾನಿ ಪವರ್‌ನೊಂದಿಗೆ ಮಾಡಿಕೊಂಡಿದ್ದ ವಿದ್ಯುತ್ ಒಪ್ಪಂದವನ್ನು ಪರಿಷ್ಕರಿಸಲು ಪ್ರಯತ್ನಿಸಿದೆ.

ನವೆಂಬರ್ 2017ರಲ್ಲಿ ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್(BPDB), ಅದಾನಿ ಕಂಪನಿಯೊಂದಿಗೆ ‘25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದ’ಕ್ಕೆ (PPA) ಸಹಿ ಹಾಕಿದೆ. ಬಾಂಗ್ಲಾ ದೇಶಕ್ಕೆ ವಾರ್ಷಿಕ 1,496 ಮೆಗಾವ್ಯಾಟ್ ವಿದ್ಯುತ್‌ನ್ನು ಭಾರತದ ಜಾರ್ಖಾಂಡ್‌‌ ರಾಜ್ಯದಲ್ಲಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಿಂದ ಸರಬರಾಜು ಮಾಡುವ ಒಪ್ಪಂದ ಒಳಗೊಂಡಿದೆ.

ಬಾಂಗ್ಲಾದೇಶ ಪವರ್ ಡೆವಲಪ್‌ಮೆಂಟ್ ಬೋರ್ಡ್ ಇತ್ತೀಚೆಗೆ ಅದಾನಿ ಪವರ್‌ಗೆ ಒಪ್ಪಂದದ ಪರಿಷ್ಕರಣೆ ಸಂಬಂಧ ಪತ್ರ ಬರೆದಿದೆ. ಈ ಒಪ್ಪಂದವು ಇತರ ಖಾಸಗಿ ವಿದ್ಯುತ್ ಪೂರೈಕೆದಾರರು ಪಾವತಿಸುವುದಕ್ಕಿಂತ ಹೆಚ್ಚಿನ ಸುಂಕವನ್ನು ದೇಶದ ಮೇಲೆ ವಿಧಿಸುತ್ತಿದೆ ಎಂದು ಪತ್ರದಲ್ಲಿ ಹೇಳಿರುವುದಾಗಿ ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ (UNB) ವರದಿ ಮಾಡಿದೆ.

ಈ ಬಗ್ಗೆ ಬಿಪಿಡಿಬಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಜಾರ್ಖಂಡ್‌ನ 1,600 ಮೆಗಾವ್ಯಾಟ್ ಸ್ಥಾವರಕ್ಕೆ ಇಂಧನವಾಗಿ ಬಳಸಲಾಗುವ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಎಲ್‌ಸಿಗಳನ್ನು (ಭಾರತದಲ್ಲಿ) ತೆರೆಯಲು ಅದಾನಿ ಗ್ರೂಪ್‌ಗೆ ಪತ್ರವನ್ನು ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸಮೂಹದ ಬಗ್ಗೆ ಎದ್ದಿರುವ ಆರೋಪಗಳಿಗೆ ಉತ್ತರಿಸುವ ಉತ್ತರದಾಯಿತ್ವ ಯಾರದ್ದು?

“ಅವರು ಉಲ್ಲೇಖಿಸಿದ ಕಲ್ಲಿದ್ದಲು ಬೆಲೆ ($400/MT) ವಿಪರೀತವಾಗಿದೆ. ಇದು $250/MT ಗಿಂತ ಕಡಿಮೆಯಿರಬೇಕು. ಏಕೆಂದರೆ ನಮ್ಮ ಇತರ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನಾವು ಈಗಾಗಲೇ ಕಡಿಮೆ ಪಾವತಿಸುತ್ತಿದ್ದೇವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಸರ್ಕಾರ ಮತ್ತು ಭಾರತೀಯ ಕಂಪನಿಯ ನಡುವಿನ ಒಪ್ಪಂದವನ್ನು ಉಲ್ಲೇಖಿಸುತ್ತಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ನಾವು ಇದರಲ್ಲಿ ಭಾಗಿಯಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅದಾನಿ ವಿರುದ್ಧ ವಂಚನೆಯ ಆರೋಪ ಮಾಡಿರುವ ಹಿಂಡನ್‌ಬರ್ಗ್ ರಿಸರ್ಚ್‌ನಿಂದ ಬಿಕ್ಕಟ್ಟು ಉಂಟಾದ ಬಳಿಕ ಈ ಬೆಳವಣಿಗೆಯಾಗಿದೆ. ಬಾಂಗ್ಲಾದೇಶ ಇಂಧನ ಖರೀದಿ ಒಪ್ಪಂದದಲ್ಲಿ ಪರಿಷ್ಕರಣೆ ಬಯಸಿದೆ.

ಯುಎಸ್ ಮೂಲದ ಹಣಕಾಸು ವಿಶ್ಲೇಷಣಾ ಸಂಸ್ಥೆಯಾದ ಹಿಂಡನ್‌ಬರ್ಗ್ ಜನವರಿಯಲ್ಲಿ ಅದಾನಿ ಗುಂಪಿನ ಮೇಲೆ ವರದಿಯನ್ನು ಪ್ರಕಟಿಸಿದಾಗಿನಿಂದ, ಅದಾನಿ ಕಂಪನಿ ಪಾತಾಳ ಕುಸಿಯುತ್ತಿದೆ. ಷೇರು ಮಾರುಕಟ್ಟೆ ಮೌಲ್ಯದಲ್ಲಿ $100 ಶತಕೋಟಿಯವರೆಗೂ ಕಳೆದುಕೊಂಡಿದೆ.

ಅದಾನಿ ಗುಂಪಿನ ಷೇರುಗಳ ಕುಸಿತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಧ್ಯಮದ ಒಂದು ವಿಭಾಗವು, ಈಗ ಅದಾನಿ ಜೊತೆಗಿನ BPDB ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. “ಅದಾನಿಗೆ ಇನ್ನೂ ತೊಂದರೆಗಳು ಎದುರಾಗುತ್ತವೆ‘. ಏಕೆಂದರೆ, ಹಿಂಡೆನ್‌ಬರ್ಗ್‌ನ ವರದಿಯ ಸರಣಿ ಇನ್ನೂ ಮುಂದುವರೆಯಲಿದೆ” ಎಂದು ಎಚ್ಚರಿಸಲಾಗುತ್ತಿದೆ.

ಫೆಬ್ರವರಿ 7 ರಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ತನ್ನ ಸುಸ್ಥಿರತೆಯ ಸೂಚ್ಯಂಕಗಳಿಂದ ತೆಗೆದುಹಾಕುವುದಾಗಿ ಎಸ್&ಪಿ ಡೌ ಜೋನ್ಸ್ ಸೂಚ್ಯಂಕ ಹೇಳಿದೆ. ಇದರ ನಡುವೆ ಭಾರತದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ (ಅದಾನಿ ಸಮೂಹದ ಮಾಲೀಕತ್ವದ) ಷೇರುಗಳ ಮೇಲೆ ಕಣ್ಗಾವಲಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...