Homeಮುಖಪುಟಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

- Advertisement -
- Advertisement -

“ನಿಮ್ಮ ನಂಬರ್‌ ಕೊಡಿ ಅಣ್ಣ”. ಇದು ದೆಹಲಿಯಲ್ಲಿ ಸಿಕ್ಕಿಕೊಂಡಿರುವ ವಲಸೆ ಕಾರ್ಮಿಕನೊಬ್ಬ ಸಹಾಯಕ್ಕಾಗಿ ಚಿತ್ರನಟ ಸೋನು ಸೂದ್‌ ಬಳಿ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದಾಗ, ಅದನ್ನು ಗಮನಿಸಿದ ಇನ್ನೊಬ್ಬ ನಟಿ ಸ್ವರ ಭಾಸ್ಕರ್‌ ಮಾಡಿದ ರಿಪ್ಲೆ. ಈ ಇಬ್ಬರೂ ನಟ-ನಟಿಯರು ಕೆಲದಿನಗಳಿಂದ ವಲಸೆ ಕಾರ್ಮಿಕರ ಪಾಲಿಗೆ ದೇವರಾಗಿಬಿಟ್ಟಿದ್ದಾರೆ.

ನೀವು ನಂಬುತ್ತೀರೋ ಇಲ್ಲವೋ, ಆದರೆ ಕೇವಲ ಒಂದು ಗಂಟೆಯ ಅವಧಿಯಲ್ಲಿ ಸಹಾಯ ಕೇಳಿದ ಮೂರು ಜನರಿಗೆ ಸ್ವರ ಭಾಸ್ಕರ್‌ ತಮ್ಮೂರಿಗೆ ತಲುಪುವ ಭರವಸೆ ನೀಡಿ, ನಿಂಬರ್‌ ಫೋನ್‌ ನಂಬರ್‌ಗಳನ್ನು ಕೊಡಿ ಎಂದು ಕೇಳುತ್ತಿದ್ದಾರೆ. ಅಷ್ಟರಮಟ್ಟಿಗೆ ಕಾರ್ಮಿಕರಿಗೆ ನೆರವಾಗುವ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ.

ಕೊರೊನಾ ವೈರಸ್‌ ಕಾರಣಕ್ಕೆ ಘೋಷಿಸಲ್ಪಟ್ಟ ಲಾಕ್‌ಡೌನ್‌ ಕೋಟ್ಯಾಂತರ ವಲಸೆ ಕಾರ್ಮಿಕರ ಪಾಲಿಗೆ ನರಕಯಾತನೆಯಾಗಿಬಿಟ್ಟಿದೆ. ಕೆಲಸವಿಲ್ಲದೇ, ಹಣವಿಲ್ಲದೇ ಸಿಕ್ಕಿಕೊಂಡಿರುವ ಲಕ್ಷಾಂತರ ಜನ ಕನಿಷ್ಟ ತಮ್ಮೂರಿಗೆ ಹೋಗಲು ಪರದಾಡುತ್ತಿದ್ದಾರೆ. ಸರ್ಕಾರ ಸಮರ್ಪಕವಾಗಿ ರೈಲುವ್ಯವಸ್ಥೆ ಮಾಡದಿರುವುದರಿಂದ ಈ ಕಾರ್ಮಿಕರ ಅಕ್ಷರಶಃ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಇಂತವರ ಪಾಲಿಗೆ ಸೋನು ಸೂದ್‌, ಸ್ವರ ಭಾಸ್ಕರ್‌ ಸೇರಿದಂತೆ ಹಲವರು ವರವಾಗಿ ಪರಿಣಮಿಸಿದ್ದು ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ಅವರ ಸ್ವಂತ ಸ್ಥಳಗಳಿಗೆ ತಲುಪಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ.

ಇಪ್ಪತ್ತು ದಿನಗಳ ಮೊದಲೇ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರು ತಮ್ಮ ಊರು ಕಲಬುರಗಿ ತಲುಪಲು ಸೋನು ಸೂದ್‌ 10 ಬಸ್‌ ವ್ಯವಸ್ಥೆ ಮಾಡಿದ್ದಲ್ಲದೆ, ಆ ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡೆದಿದ್ದರು. ಅದಾದ ನಂತರ ಪಂಜಾಬ್‌ ಸರ್ಕಾರಕ್ಕೆ 1500 ಪಿಪಿಇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿ ಸುದ್ದಿಯಾದರು. ಜೊತೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ವಲಸೆ ಕಾರ್ಮಿಕರು ತಮ್ಮ ಮನೆ ಸೇರಲು ಸೋನು ಸಹಾಯ ಮಾಡಿದ್ದಾರೆ.

Sonu Sood 'home delivery' service! #SonuSood

Posted by Cartoonist Satish Acharya on Wednesday, May 27, 2020

ಅಷ್ಟಕ್ಕೆ ಸುಮ್ಮನಾಗದ ಅವರು ಕೇರಳದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಮಾಡಿದ ಸಹಾಯ ದೇಶಾದ್ಯಂತ ಸುದ್ದಿಯಾಯಿತು. ಏಕೆಂದರೆ ಕೇರಳದಿಂದ ಓಡಿಸ್ಸಾಗೆ ಬಸ್‌ ವ್ಯವಸ್ಥೆ ಸಾಧ್ಯವಿಲ್ಲ ಎಂದು ಅರಿತು ಸೋನು ಸೂದ್‌ ಅವರೆಲ್ಲರೂ ವಿಮಾನವನ್ನೇ ಬುಕ್‌ ಮಾಡಿ ತಮ್ಮ ಊರು ತಲುಪುವಂತೆ ಮಾಡಿದ್ದರು..

ಸೋನು ಸೂದ್‌ರವರ ಈ ಕಾಳಜಿಗೆ ಮೆಚ್ಚಿದ ಮಹಿಳೆಯೊಬ್ಬರು ತನ್ನ ಮಗುವಿಗೆ ಸೋನು ಸೂದ್‌ ಶ್ರೀವಾಸ್ತವ್‌ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ್ದರು. ಅಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶಿಯಾರಿಯವರು ಸೋನು ಸೂದ್‌ರವರನ್ನು ರಾಜಭವನಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸ್ವರ ಭಾಸ್ಕರ್‌ ಸರದಿ…

ಕಳೆದ ವಾರ ಮುಂಬೈನಿಂದ ದೆಹಲಿಯನ್ನು ತಲುಪಿದ ಸ್ವರಾ ಭಾಸ್ಕರ್ ವಲಸೆ ಕಾರ್ಮಿಕರಿಗಾಗಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೂ ಸುಮಾರು 1350 ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಹಿಂದಿರುಗಿಲು ಸ್ವರ ಭಾಸ್ಕರ್‌ ನೆರವಾಗಿದ್ದಾರೆ.

ದೆಹಲಿ ಸರ್ಕಾರದ ಸಹಾಯದೊಂದಿಗೆ ಸ್ವರ ಭಾಸ್ಕರ್‌ ಉತ್ತರ ಪ್ರದೇಶ ಮತ್ತು ಬಿಹಾರದ 1350 ಕಾರ್ಮಿಕರಿಗೆ ತನ್ನ ಸ್ವಂತ ಹಣದಿಂದ ರೈಲುಟಿಕೆಟ್‌ ಬುಕ್‌ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಅವರನ್ನು ಯಾರಾದರೂ ಹೊಗಳಿದರೆ “ಲಕ್ಷಾಂತರ ಜನರನ್ನು ನಿರ್ಗತಿಕತೆ ಮತ್ತು ಸಂಕಷ್ಟಗಳಿಗೆ ದೂಡುತ್ತಿರುವಾಗ ನಾನು ಮಾತ್ರ ನನ್ನ ಮನೆಯ ಸುರಕ್ಷತೆ ಮತ್ತು ಸೌಕರ್ಯದಲ್ಲಿರಲು ನನಗೆ ನಾಚಿಕೆಯಾಗಿದೆ” ಎಂದು ಸ್ವರಾ ಹೇಳುತ್ತಾರೆ.

ನೂರಾರು ಜನರು ನಡೆದುಕೊಂಡು ಹೋಗುತ್ತಿರುವುದ ನೋವು ಕಂಡಿರುವ ಸ್ವರ ನೂರಾರು ವಲಸೆ ಕಾರ್ಮಿಕರಿಗೆ ಚಪ್ಪಲಿ ಕೊಡಿಸಿದ್ದಾರೆ.

View this post on Instagram

The migrant crisis is the most severe human impact story of our time – lakhs of our migrant brothers and sisters have walked hundreds of kilometres, often without slippers or shoes due to the after effects of the Corona lockdown. it's a harsh reality hard to ignore. I’m very very grateful to @athleoofficial and @actionshoesofficial who have kindly contributed 500 pairs of shoes toward migrant relief efforts. These were distributed by on-ground volunteers of @karwanemohabbat .. Kudos to the efforts of Adil, Ramzaan, Sandeep and everyone at Karwan-E-Mohabbat. Deep gratitude again to Vishesh Agrawal, S.K. Sharma, Action shoes, Athleo Shoes for their generosity and commitment to social causes. Special thanks to Shaivaal Sahay and @biraj.patnaik for making this possible. ???????? ????#coronavirus #lockdown #coronawarriors #doingourbit #doingourpart #actionshoes #athleoshoes #swarabhaskar #swarabhasker #notanad #notsponsored

A post shared by Swara Bhasker (@reallyswara) on

ಒಟ್ಟಿನಲ್ಲಿ ದೈತ್ಯ ಸರ್ಕಾರಗಳು ಕಾರ್ಮಿಕರಿಗಾಗಿ ಸಮರ್ಪಕ ವ್ಯವಸ್ಥೆ ಮಾಡಲು ವಿಫಲರಾದಾಗ ಸೋನು ಸೂದ್‌ ಮತ್ತು ಸ್ವರ ಭಾಸ್ಕರ್‌ ತರಹದ ಚಿತ್ರನಟ ನಟಿಯರ ಈ ಸಹಾಯ ಬಹಳ ದೊಡ್ಡದ್ದೆ ಆಗಿದೆ. ಇದಕ್ಕಾಗಿ ಈ ಇಬ್ಬರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡಲಾಗುತ್ತಿದೆ.

ಇದರ ನಡುವೆಯೇ ಮೈಸೂರು ಜಿಲ್ಲೆಯ ಚೆನ್ನಗಿರಿಕೊಪ್ಪಲಿನ 70 ವರ್ಷದ ಕಮಲಮ್ಮ ಎಂಬುವವರು ತಮಗೆ ಬರುವ 600 ರೂ ಪಿಂಚಣಿಯಲ್ಲಿ 500 ರೂಗಳನ್ನು ಅಗತ್ಯವಿದ್ದವರಿಗೆ ಸಹಾಯ ಮಾಡಲೆಂದು ಸಂಘಟನೆಯೊಂದಕ್ಕೆ ಒತ್ತಾಯಪೂರ್ವಕವಾಗಿ ನೀಡಿದ್ದಾರೆ. ಇವರ ಮೆಚ್ಚುಗೆ ಸಾವಿರಾರು ಕೋಟಿ ದೇಣಿಗೆ ನೀಡಿದವರಿಗಿಂತಲೂ ಹೆಚ್ಚಿನದೆಂದು ಜನ ಅಭಿನಂದನೆಗಳನ್ನು ತಿಳಿಸಿದ್ದಾರೆ.

Donors! #Corona

Posted by Cartoonist Satish Acharya on Thursday, May 28, 2020


ಇದನ್ನೂ ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್ 


Also Read: Swara Bhasker helps migrant workers reach home

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...