Homeಮುಖಪುಟಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

ಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

- Advertisement -
- Advertisement -

ಸತತ ಸೋಲುಗಳ ಅಥವಾ ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳ ಗೆಲುವು ಹೊಸ ಹುಮ್ಮಸ್ಸು ನೀಡಿದೆ. ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ನಂತರ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಯಾಗಿದ್ದು, ಕಾಂಗ್ರೆಸ್ ಹೊಸ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕರ್ನಾಟಕದಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್‌ನ ಮುಂದಿನ ಹಾದಿ ಅಷ್ಟು ಸುಲಭವಿಲ್ಲ. 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಯಲ್ಲಿಯೂ ಕಮಾಲ್ ಮಾಡಲು ಯತ್ನಿಸುತ್ತಿದೆ. ಅದರ ಪಕ್ಷಿನೋಟ ಇಲ್ಲಿದೆ.

2023 ನವೆಂಬರ್ – ಡಿಸೆಂಬರ್: ಮಧ್ಯಪ್ರದೇಶ ಚುನಾವಣೆ

2023ರ ನವೆಂಬರ್‌ನಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದಿತ್ತು. ಒಟ್ಟು 230 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 116 ಸ್ಥಾನಗಳ ಬಹುಮತ ಸಾಧಿಸಿ ಕಮಲ್ ನಾಥ್ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆದರೆ ಒಂದೇ ವರ್ಷದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಬಣ ಆಪರೇಷನ್ ಕಮಲಕ್ಕೆ ಬಲಿಯಾದ ಪರಿಣಾಮ ಅಧಿಕಾರ ಕಳೆದುಕೊಳ್ಳಬೇಕಾಯಿತು. ಶಾಸಕರನ್ನು ಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಆಗಿದ್ದಾರೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಹಾಗಾಗಿ ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸ ಹೊಂದಿದೆ.

2023 ನವೆಂಬರ್ – ಡಿಸೆಂಬರ್: ಚತ್ತೀಸ್‌ಘಡ ಚುನಾವಣೆ

90 ವಿಧಾನಸಭಾ ಕ್ಷೇತ್ರಗಳ ಚತ್ತೀಸ್‌ಘಡದಲ್ಲಿ ಇದೇ ನವೆಂಬರ್-ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 68 ಸ್ಥಾನಗಳಲ್ಲಿ ಗೆದ್ದು ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ, ಭೂಪೇಶ್ ಭಾಘೇಲ್ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಚತ್ತೀಸ್‌ಘಡ ಸ್ವತಂತ್ರ ರಾಜ್ಯವಾದ ನಂತರ ಬಿಜೆಪಿ ಮೂರು ಬಾರಿ ಸತತವಾಗಿ ಗೆದ್ದುಬಂದಿತ್ತು. ಬಿಜೆಪಿ ಓಟಕ್ಕೆ ಬ್ರೇಕ್ ಹಾಕಿದ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ವರ್ಷವೂ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ವ ಪ್ರಯತ್ನ ನಡೆಸಲಿದೆ.

2023 ನವೆಂಬರ್ – ಡಿಸೆಂಬರ್: ರಾಜಸ್ಥಾನ ಚುನಾವಣೆ

200 ವಿಧಾನಸಭಾ ಕ್ಷೇತ್ರಗಳಿರುವ ರಾಜಸ್ಥಾನದಲ್ಲಿ ಸದ್ಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. 2018ರ ಚುನಾವಣೆಯಲ್ಲಿ ಫೀನಿಕ್ಸ್‌ನಂತೆ ಎದ್ದುಬಂದ ಕಾಂಗ್ರೆಸ್ ಬರೋಬ್ಬರಿ 100 ಸ್ಥಾನಗಳನ್ನು ಗೆಲ್ಲುವ ಮೂಲಕ, ಬಿಎಸ್‌ಪಿ, ಪಕ್ಷೇತರರನ್ನು ಪಕ್ಷಕ್ಕೆ ಸೆಳೆದುಕೊಂಡು ಸರಳ ಬಹುಮತ ಸಾಧಿಸಿದೆ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದರೆ, ಸಚಿನ್ ಪೈಲಟ್ ಅವರ ಮಗ್ಗುಲ ಮುಳ್ಳಾಗಿ ಕಾಡುತ್ತಿದ್ದಾರೆ. ತಾನು ಸಿಎಂ ಆಗಬೇಕೆಂದು ಹಠ ಹಿಡಿದಿದ್ದ ಸಚಿನ್ ಪೈಲಟ್ ಬಣ ಕಟ್ಟಿಕೊಂಡು ಬ್ಲಾಕ್‌ ಮೇಲ್ ಮಾಡುತ್ತಲೇ ಇದ್ದಾರೆ. ಸದ್ಯ ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿರುವ ಅವರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಜನ ಸಂಘರ್ಷ್ ಯಾತ್ರೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ಆಡಳಿತ ವಿರೋಧಿ ಅಲೆ ಕೂಡ ಬೀಸುತ್ತಿದೆ. ಹಾಗಾಗಿ ಈ ಬಾರಿ ರಾಜಸ್ಥಾನ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಕಷ್ಟಕರವಾಗಿದೆ. ಆದರೂ ಪ್ರಯತ್ನ ಮುಂದುವರೆಸಿದೆ.

2023 ನವೆಂಬರ್ – ಡಿಸೆಂಬರ್: ತೆಲಂಗಾಣ ಚುನಾವಣೆ

ಆಂಧ್ರ ಪ್ರದೇಶ ರಾಜ್ಯದಿಂದ 2014ರಿಂದ ಬೇರ್ಪಟ್ಟಿರುವ ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿವೆ. ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದ್ದು 2014ರಲ್ಲಿ 63 ಸ್ಥಾನ ಗೆದ್ದಿದ್ದ ಕೆ.ಚಂದ್ರಶೇಖರ್‌ ರಾವ್‌ರವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವು 2018ರಲ್ಲಿಯೂ ಸಹ 88 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದೆ. ರಾಷ್ಟ್ರಮಟ್ಟಕ್ಕೆ ಪಕ್ಷ ವಿಸ್ತರಿಸಿರುವ ಕೆಸಿಆರ್ ಪಕ್ಷದ ಹೆಸರನ್ನು ಟಿಆರ್‌ಎಸ್ ಬದಲಿಗೆ ಬಿಆರ್‌ಎಸ್ ಎಂದು ಬದಲಿಸಿದ್ದಾರೆ. ಈಗ ನವೆಂಬರ್ ಡಿಸೆಂಬರ್‌ನಲ್ಲಿ ರಾಜ್ಯದ ಮೂರನೇ ಚುನಾವಣೆ ನಡೆಯಲಿದೆ. ಅಲ್ಲಿ ಬಿಜೆಪಿ ಪಕ್ಷ ವೇಗವಾಗಿ ಬೆಳಯುತ್ತಿದ್ದು, ಇತ್ತೀಚಿಗೆ ನಾಲ್ಕು ಜನ ಟಿಆರ್‌ಎಸ್ ಶಾಸಕರನ್ನು ಕೊಳ್ಳಲು ಹೋಗಿ ಸಿಕ್ಕಿಬಿದ್ದಿತ್ತು. ಕಾಂಗ್ರೆಸ್ ಪಕ್ಷ ಕೂಡ ಅಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ.

2023 ನವೆಂಬರ್ – ಡಿಸೆಂಬರ್: ಮಿಜೋರಾಂ ಚುನಾವಣೆ

ಈ ನಾಲ್ಕು ರಾಜ್ಯಗಳಲ್ಲದೇ 40 ವಿಧಾನಸಭಾ ಕ್ಷೇತ್ರಗಳ ಪುಟ್ಟ ರಾಜ್ಯ ಮಿಜೋರಾಂನಲ್ಲಿಯೂ ನವೆಂಬರ್ – ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಅಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ಅದೇ ರೀತಿ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿಯೂ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಇಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರಭಾವ ಬೀರುವ ಮೂಲಕ 2024ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳಲು ಯತ್ನಿಸುತ್ತಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...