Homeಮುಖಪುಟಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

ಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

- Advertisement -
- Advertisement -

ಸತತ ಸೋಲುಗಳ ಅಥವಾ ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳ ಗೆಲುವು ಹೊಸ ಹುಮ್ಮಸ್ಸು ನೀಡಿದೆ. ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ನಂತರ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಯಾಗಿದ್ದು, ಕಾಂಗ್ರೆಸ್ ಹೊಸ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕರ್ನಾಟಕದಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್‌ನ ಮುಂದಿನ ಹಾದಿ ಅಷ್ಟು ಸುಲಭವಿಲ್ಲ. 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಯಲ್ಲಿಯೂ ಕಮಾಲ್ ಮಾಡಲು ಯತ್ನಿಸುತ್ತಿದೆ. ಅದರ ಪಕ್ಷಿನೋಟ ಇಲ್ಲಿದೆ.

2023 ನವೆಂಬರ್ – ಡಿಸೆಂಬರ್: ಮಧ್ಯಪ್ರದೇಶ ಚುನಾವಣೆ

2023ರ ನವೆಂಬರ್‌ನಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದಿತ್ತು. ಒಟ್ಟು 230 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 116 ಸ್ಥಾನಗಳ ಬಹುಮತ ಸಾಧಿಸಿ ಕಮಲ್ ನಾಥ್ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆದರೆ ಒಂದೇ ವರ್ಷದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಬಣ ಆಪರೇಷನ್ ಕಮಲಕ್ಕೆ ಬಲಿಯಾದ ಪರಿಣಾಮ ಅಧಿಕಾರ ಕಳೆದುಕೊಳ್ಳಬೇಕಾಯಿತು. ಶಾಸಕರನ್ನು ಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಆಗಿದ್ದಾರೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಹಾಗಾಗಿ ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸ ಹೊಂದಿದೆ.

2023 ನವೆಂಬರ್ – ಡಿಸೆಂಬರ್: ಚತ್ತೀಸ್‌ಘಡ ಚುನಾವಣೆ

90 ವಿಧಾನಸಭಾ ಕ್ಷೇತ್ರಗಳ ಚತ್ತೀಸ್‌ಘಡದಲ್ಲಿ ಇದೇ ನವೆಂಬರ್-ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 68 ಸ್ಥಾನಗಳಲ್ಲಿ ಗೆದ್ದು ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ, ಭೂಪೇಶ್ ಭಾಘೇಲ್ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಚತ್ತೀಸ್‌ಘಡ ಸ್ವತಂತ್ರ ರಾಜ್ಯವಾದ ನಂತರ ಬಿಜೆಪಿ ಮೂರು ಬಾರಿ ಸತತವಾಗಿ ಗೆದ್ದುಬಂದಿತ್ತು. ಬಿಜೆಪಿ ಓಟಕ್ಕೆ ಬ್ರೇಕ್ ಹಾಕಿದ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ವರ್ಷವೂ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ವ ಪ್ರಯತ್ನ ನಡೆಸಲಿದೆ.

2023 ನವೆಂಬರ್ – ಡಿಸೆಂಬರ್: ರಾಜಸ್ಥಾನ ಚುನಾವಣೆ

200 ವಿಧಾನಸಭಾ ಕ್ಷೇತ್ರಗಳಿರುವ ರಾಜಸ್ಥಾನದಲ್ಲಿ ಸದ್ಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. 2018ರ ಚುನಾವಣೆಯಲ್ಲಿ ಫೀನಿಕ್ಸ್‌ನಂತೆ ಎದ್ದುಬಂದ ಕಾಂಗ್ರೆಸ್ ಬರೋಬ್ಬರಿ 100 ಸ್ಥಾನಗಳನ್ನು ಗೆಲ್ಲುವ ಮೂಲಕ, ಬಿಎಸ್‌ಪಿ, ಪಕ್ಷೇತರರನ್ನು ಪಕ್ಷಕ್ಕೆ ಸೆಳೆದುಕೊಂಡು ಸರಳ ಬಹುಮತ ಸಾಧಿಸಿದೆ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದರೆ, ಸಚಿನ್ ಪೈಲಟ್ ಅವರ ಮಗ್ಗುಲ ಮುಳ್ಳಾಗಿ ಕಾಡುತ್ತಿದ್ದಾರೆ. ತಾನು ಸಿಎಂ ಆಗಬೇಕೆಂದು ಹಠ ಹಿಡಿದಿದ್ದ ಸಚಿನ್ ಪೈಲಟ್ ಬಣ ಕಟ್ಟಿಕೊಂಡು ಬ್ಲಾಕ್‌ ಮೇಲ್ ಮಾಡುತ್ತಲೇ ಇದ್ದಾರೆ. ಸದ್ಯ ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿರುವ ಅವರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಜನ ಸಂಘರ್ಷ್ ಯಾತ್ರೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ಆಡಳಿತ ವಿರೋಧಿ ಅಲೆ ಕೂಡ ಬೀಸುತ್ತಿದೆ. ಹಾಗಾಗಿ ಈ ಬಾರಿ ರಾಜಸ್ಥಾನ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಕಷ್ಟಕರವಾಗಿದೆ. ಆದರೂ ಪ್ರಯತ್ನ ಮುಂದುವರೆಸಿದೆ.

2023 ನವೆಂಬರ್ – ಡಿಸೆಂಬರ್: ತೆಲಂಗಾಣ ಚುನಾವಣೆ

ಆಂಧ್ರ ಪ್ರದೇಶ ರಾಜ್ಯದಿಂದ 2014ರಿಂದ ಬೇರ್ಪಟ್ಟಿರುವ ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿವೆ. ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದ್ದು 2014ರಲ್ಲಿ 63 ಸ್ಥಾನ ಗೆದ್ದಿದ್ದ ಕೆ.ಚಂದ್ರಶೇಖರ್‌ ರಾವ್‌ರವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವು 2018ರಲ್ಲಿಯೂ ಸಹ 88 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದೆ. ರಾಷ್ಟ್ರಮಟ್ಟಕ್ಕೆ ಪಕ್ಷ ವಿಸ್ತರಿಸಿರುವ ಕೆಸಿಆರ್ ಪಕ್ಷದ ಹೆಸರನ್ನು ಟಿಆರ್‌ಎಸ್ ಬದಲಿಗೆ ಬಿಆರ್‌ಎಸ್ ಎಂದು ಬದಲಿಸಿದ್ದಾರೆ. ಈಗ ನವೆಂಬರ್ ಡಿಸೆಂಬರ್‌ನಲ್ಲಿ ರಾಜ್ಯದ ಮೂರನೇ ಚುನಾವಣೆ ನಡೆಯಲಿದೆ. ಅಲ್ಲಿ ಬಿಜೆಪಿ ಪಕ್ಷ ವೇಗವಾಗಿ ಬೆಳಯುತ್ತಿದ್ದು, ಇತ್ತೀಚಿಗೆ ನಾಲ್ಕು ಜನ ಟಿಆರ್‌ಎಸ್ ಶಾಸಕರನ್ನು ಕೊಳ್ಳಲು ಹೋಗಿ ಸಿಕ್ಕಿಬಿದ್ದಿತ್ತು. ಕಾಂಗ್ರೆಸ್ ಪಕ್ಷ ಕೂಡ ಅಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ.

2023 ನವೆಂಬರ್ – ಡಿಸೆಂಬರ್: ಮಿಜೋರಾಂ ಚುನಾವಣೆ

ಈ ನಾಲ್ಕು ರಾಜ್ಯಗಳಲ್ಲದೇ 40 ವಿಧಾನಸಭಾ ಕ್ಷೇತ್ರಗಳ ಪುಟ್ಟ ರಾಜ್ಯ ಮಿಜೋರಾಂನಲ್ಲಿಯೂ ನವೆಂಬರ್ – ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಅಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ಅದೇ ರೀತಿ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿಯೂ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಇಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರಭಾವ ಬೀರುವ ಮೂಲಕ 2024ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳಲು ಯತ್ನಿಸುತ್ತಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....