Homeಮುಖಪುಟಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

ಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

- Advertisement -
- Advertisement -

ಸತತ ಸೋಲುಗಳ ಅಥವಾ ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳ ಗೆಲುವು ಹೊಸ ಹುಮ್ಮಸ್ಸು ನೀಡಿದೆ. ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ನಂತರ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಯಾಗಿದ್ದು, ಕಾಂಗ್ರೆಸ್ ಹೊಸ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕರ್ನಾಟಕದಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್‌ನ ಮುಂದಿನ ಹಾದಿ ಅಷ್ಟು ಸುಲಭವಿಲ್ಲ. 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಯಲ್ಲಿಯೂ ಕಮಾಲ್ ಮಾಡಲು ಯತ್ನಿಸುತ್ತಿದೆ. ಅದರ ಪಕ್ಷಿನೋಟ ಇಲ್ಲಿದೆ.

2023 ನವೆಂಬರ್ – ಡಿಸೆಂಬರ್: ಮಧ್ಯಪ್ರದೇಶ ಚುನಾವಣೆ

2023ರ ನವೆಂಬರ್‌ನಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದಿತ್ತು. ಒಟ್ಟು 230 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 116 ಸ್ಥಾನಗಳ ಬಹುಮತ ಸಾಧಿಸಿ ಕಮಲ್ ನಾಥ್ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆದರೆ ಒಂದೇ ವರ್ಷದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಬಣ ಆಪರೇಷನ್ ಕಮಲಕ್ಕೆ ಬಲಿಯಾದ ಪರಿಣಾಮ ಅಧಿಕಾರ ಕಳೆದುಕೊಳ್ಳಬೇಕಾಯಿತು. ಶಾಸಕರನ್ನು ಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಆಗಿದ್ದಾರೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಹಾಗಾಗಿ ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸ ಹೊಂದಿದೆ.

2023 ನವೆಂಬರ್ – ಡಿಸೆಂಬರ್: ಚತ್ತೀಸ್‌ಘಡ ಚುನಾವಣೆ

90 ವಿಧಾನಸಭಾ ಕ್ಷೇತ್ರಗಳ ಚತ್ತೀಸ್‌ಘಡದಲ್ಲಿ ಇದೇ ನವೆಂಬರ್-ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 68 ಸ್ಥಾನಗಳಲ್ಲಿ ಗೆದ್ದು ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ, ಭೂಪೇಶ್ ಭಾಘೇಲ್ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಚತ್ತೀಸ್‌ಘಡ ಸ್ವತಂತ್ರ ರಾಜ್ಯವಾದ ನಂತರ ಬಿಜೆಪಿ ಮೂರು ಬಾರಿ ಸತತವಾಗಿ ಗೆದ್ದುಬಂದಿತ್ತು. ಬಿಜೆಪಿ ಓಟಕ್ಕೆ ಬ್ರೇಕ್ ಹಾಕಿದ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ವರ್ಷವೂ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ವ ಪ್ರಯತ್ನ ನಡೆಸಲಿದೆ.

2023 ನವೆಂಬರ್ – ಡಿಸೆಂಬರ್: ರಾಜಸ್ಥಾನ ಚುನಾವಣೆ

200 ವಿಧಾನಸಭಾ ಕ್ಷೇತ್ರಗಳಿರುವ ರಾಜಸ್ಥಾನದಲ್ಲಿ ಸದ್ಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. 2018ರ ಚುನಾವಣೆಯಲ್ಲಿ ಫೀನಿಕ್ಸ್‌ನಂತೆ ಎದ್ದುಬಂದ ಕಾಂಗ್ರೆಸ್ ಬರೋಬ್ಬರಿ 100 ಸ್ಥಾನಗಳನ್ನು ಗೆಲ್ಲುವ ಮೂಲಕ, ಬಿಎಸ್‌ಪಿ, ಪಕ್ಷೇತರರನ್ನು ಪಕ್ಷಕ್ಕೆ ಸೆಳೆದುಕೊಂಡು ಸರಳ ಬಹುಮತ ಸಾಧಿಸಿದೆ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದರೆ, ಸಚಿನ್ ಪೈಲಟ್ ಅವರ ಮಗ್ಗುಲ ಮುಳ್ಳಾಗಿ ಕಾಡುತ್ತಿದ್ದಾರೆ. ತಾನು ಸಿಎಂ ಆಗಬೇಕೆಂದು ಹಠ ಹಿಡಿದಿದ್ದ ಸಚಿನ್ ಪೈಲಟ್ ಬಣ ಕಟ್ಟಿಕೊಂಡು ಬ್ಲಾಕ್‌ ಮೇಲ್ ಮಾಡುತ್ತಲೇ ಇದ್ದಾರೆ. ಸದ್ಯ ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿರುವ ಅವರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಜನ ಸಂಘರ್ಷ್ ಯಾತ್ರೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ಆಡಳಿತ ವಿರೋಧಿ ಅಲೆ ಕೂಡ ಬೀಸುತ್ತಿದೆ. ಹಾಗಾಗಿ ಈ ಬಾರಿ ರಾಜಸ್ಥಾನ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಕಷ್ಟಕರವಾಗಿದೆ. ಆದರೂ ಪ್ರಯತ್ನ ಮುಂದುವರೆಸಿದೆ.

2023 ನವೆಂಬರ್ – ಡಿಸೆಂಬರ್: ತೆಲಂಗಾಣ ಚುನಾವಣೆ

ಆಂಧ್ರ ಪ್ರದೇಶ ರಾಜ್ಯದಿಂದ 2014ರಿಂದ ಬೇರ್ಪಟ್ಟಿರುವ ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿವೆ. ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದ್ದು 2014ರಲ್ಲಿ 63 ಸ್ಥಾನ ಗೆದ್ದಿದ್ದ ಕೆ.ಚಂದ್ರಶೇಖರ್‌ ರಾವ್‌ರವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವು 2018ರಲ್ಲಿಯೂ ಸಹ 88 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದೆ. ರಾಷ್ಟ್ರಮಟ್ಟಕ್ಕೆ ಪಕ್ಷ ವಿಸ್ತರಿಸಿರುವ ಕೆಸಿಆರ್ ಪಕ್ಷದ ಹೆಸರನ್ನು ಟಿಆರ್‌ಎಸ್ ಬದಲಿಗೆ ಬಿಆರ್‌ಎಸ್ ಎಂದು ಬದಲಿಸಿದ್ದಾರೆ. ಈಗ ನವೆಂಬರ್ ಡಿಸೆಂಬರ್‌ನಲ್ಲಿ ರಾಜ್ಯದ ಮೂರನೇ ಚುನಾವಣೆ ನಡೆಯಲಿದೆ. ಅಲ್ಲಿ ಬಿಜೆಪಿ ಪಕ್ಷ ವೇಗವಾಗಿ ಬೆಳಯುತ್ತಿದ್ದು, ಇತ್ತೀಚಿಗೆ ನಾಲ್ಕು ಜನ ಟಿಆರ್‌ಎಸ್ ಶಾಸಕರನ್ನು ಕೊಳ್ಳಲು ಹೋಗಿ ಸಿಕ್ಕಿಬಿದ್ದಿತ್ತು. ಕಾಂಗ್ರೆಸ್ ಪಕ್ಷ ಕೂಡ ಅಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ.

2023 ನವೆಂಬರ್ – ಡಿಸೆಂಬರ್: ಮಿಜೋರಾಂ ಚುನಾವಣೆ

ಈ ನಾಲ್ಕು ರಾಜ್ಯಗಳಲ್ಲದೇ 40 ವಿಧಾನಸಭಾ ಕ್ಷೇತ್ರಗಳ ಪುಟ್ಟ ರಾಜ್ಯ ಮಿಜೋರಾಂನಲ್ಲಿಯೂ ನವೆಂಬರ್ – ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಅಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ಅದೇ ರೀತಿ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿಯೂ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಇಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರಭಾವ ಬೀರುವ ಮೂಲಕ 2024ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳಲು ಯತ್ನಿಸುತ್ತಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...