Homeಮುಖಪುಟಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಬಳಿಕ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಕೂಡ ಆಹಾರ ಮಳಿಗೆಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಬುಧವಾರ ಆದೇಶಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಮಾತನಾಡಿರುವ ಹಿಮಾಚಲದ ಲೋಕೋಪಯೋಗಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್ “ರಾಜ್ಯ ಸರ್ಕಾರ ‘ಗ್ರಾಹಕರ ಅನುಕೂಲಕ್ಕಾಗಿ’ ಈ ರೀತಿಯ ಆದೇಶ ಹೊರಡಿಸಿದೆ ಎಂದಿದ್ದಾರೆ.

“ನಾವು ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಗಳ ಸಭೆ ನಡೆಸಿದ್ದೇವೆ. ನೈರ್ಮಲ್ಯದ ಆಹಾರ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ… ವಿಶೇಷವಾಗಿ ಖಾದ್ಯ ವಸ್ತುಗಳನ್ನು ಮಾರಾಟ ಮಾಡುವವರಿಗೆ ಹೆಸರು ಪ್ರದರ್ಶಿಸಲು ನಿರ್ದೇಶಿಸಿದ್ದೇವೆ” ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

“ಜನರು ಆಹಾರದ ನೈರ್ಮಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆ, ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಂಬಂಧಪಟ್ಟಂತೆ ನೀತಿ ರೂಪಿಸಲು ರಚಿಸಲಾದ ಏಳು ಸದಸ್ಯರ ಸಮಿತಿಯ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಯಾವುದೇ ರಾಜ್ಯವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಂಡಿಲ್ಲ. ಸರ್ಕಾರದ ಆದೇಶ ಎಲ್ಲಾ ಧರ್ಮೀಯರಿಗೂ ಅನ್ವಯಿಸಲಿದೆ. ಕೆಲ ದಿನಗಳಿಂದ ನಮ್ಮ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ” ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ಬೀದಿ ಬದಿ ವ್ಯಾಪಾರ ನೀತಿಯನ್ನು ರೂಪಿಸಲಾಗುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶ ಸರ್ಕಾರದಿಂದ ಆದೇಶ

ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಆಹಾರ ಮಳಿಗೆಗಳ ಮಾಲೀಕರು, ನಿರ್ವಾಹಕರು ತಮ್ಮ ಹೆಸರು ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ತಿನಿಸುಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಈ ವರ್ಷದ ಕನ್ವರ್ ಯಾತ್ರೆಯ ಸಂದರ್ಭ, ಯಾತ್ರೆ ಸಾಗುವ ಮಾರ್ಗದ ಎಲ್ಲಾ ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಸರ್ಕಾರ ಸೂಚಿಸಿತ್ತು. ಆದರೆ, ಇದು ಧರ್ಮದ ಆಧಾರದಲ್ಲಿ ಹೋಟೆಲ್‌ಗಳನ್ನು ಗುರುತಿಸಿ ಒಂದು ಸಮುದಾಯದ ವ್ಯಾಪಾರ ಬಹಿಷ್ಕರಿಸುವ ಹುನ್ನಾರ ಎಂದು ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು.

ಸರ್ಕಾರದ ಆದೇಶ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಉಂಟು ಮಾಡುತ್ತದೆ ಎಂದು ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 22 ರಂದು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಉತ್ತರ ಪ್ರದೇಶದ ಸರ್ಕಾರ ಈಗ ನೀಡಿರುವ ಮತ್ತು ಮಧ್ಯ ಪ್ರದೇಶ ಸರ್ಕಾರ ಈ ಹಿಂದೆ ನೀಡಿದ್ದ ಆದೇಶದ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಬಿಜೆಪಿಯನ್ನು ಅನುಸರಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ : ಹೋಟೆಲ್ ಮಾಲೀಕರು ಹೆಸರು ಪ್ರದರ್ಶಿಸಿ : ಮತ್ತೊಮ್ಮೆ ಆದೇಶಿಸಿದ ಯೋಗಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...