Homeಚಳವಳಿಎರಡು ದಿನದಲ್ಲಿ ಎರಡು ಕೋಟಿಗೂ ಅಧಿಕ ಜನ ನೋಡಿದ ’ಚಪಾಕ್‌’ ಟ್ರೇಲರ್‌: ಸಮಾಜಮುಖಿ ಚಿತ್ರವಿದು

ಎರಡು ದಿನದಲ್ಲಿ ಎರಡು ಕೋಟಿಗೂ ಅಧಿಕ ಜನ ನೋಡಿದ ’ಚಪಾಕ್‌’ ಟ್ರೇಲರ್‌: ಸಮಾಜಮುಖಿ ಚಿತ್ರವಿದು

ಆಕೆ ತನ್ನ ಮುಖಮುಚ್ಚಿ ಓಡಾಡುವುದಿಲ್ಲ. ಏಕೆಂದರೆ ತಪ್ಪು ಆತನದೇ ಹೊರತು ನನ್ನದಲ್ಲ. ಮುಖ ಮುಚ್ಚಿ ಓಡಾಡಬೇಕಾದವನು ನನಗೆ ಆಸಿಡ್‌ ಎರಚಿದವನು ಎನ್ನುತ್ತಾರೆ ಲಕ್ಷ್ಮಿ ಅಗರವಾಲ್‌..

- Advertisement -
- Advertisement -

ಕಳೆದ ವಾರ ಹೈದರಾಬಾದ್‌ನ ಪಶುವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲ್ಲಲಾಯಿತು. ಅದಾದ ಒಂದೇ ವಾರಕ್ಕೆ ಉತ್ತರಪ್ರದೇಶ ಉನ್ನಾವ್‌ನಲ್ಲಿ ಅತ್ಯಾಚಾರ ಸಂತ್ರಸ್ತೆಯ ಮೇಲೆ ಅತ್ಯಾಚಾರದ ಆರೋಪಿಗಳೆ ಪೆಟ್ರೊಲ್ ಸುರಿದು ದಹಿಸಿಬಿಟ್ಟರು. ಈ ರೀತಿಯ ಹೆಣ್ಣಮಕ್ಕಳ ಮೇಲಿನ ಅಮಾನವೀಯ ದಾಳಿಗಳ ಸಂದರ್ಭದಲ್ಲಿ ಅಂತಹುದೇ ನೊಂದ ಹೆಣ್ಣು ಮಗಳು ಹೋರಾಡಿ ಮುಂದೆ ಬರುವ ಕಥೆಯುಳ್ಳ ಸಿನಿಮಾ ’ಚಪಾಕ್‌’ ಬಾಲಿವುಡ್‌ನಲ್ಲಿ ತಯಾರಾಗಿದೆ.

ಚಪಾಕ್‌ ಹಿಂದೆ ಯಾರಿದ್ದಾರೆ?

ಜನಪ್ರಿಯ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಫಾಕ್ಸ್‌ ಸ್ಟಾರ್‌ ಸ್ಟುಡಿಯೋ ಜೊತೆ ಈ ಸೇರಿ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಜನವರಿ 10ರಂದು ಬಿಡುಗಡೆಯಾಗಲಿರುವ ಚಪಾಕ್‌ ಸಿನಿಮಾ ಹಲವು ವೈಶಿಷ್ಟ್ಯತೆಗಳನ್ನು ಒಳಗೊಂಡಿರುವ ಈ ಸಿನೆಮಾಗೆ ಗೋವಿಂದ್‌ ಸಿಂಗ್‌ ಸಂಧು ಮತ್ತು ಮೇಘನ ಗುಲ್ಜಾರ್‌ ಸಹ ಹಣ ಹೂಡಿದ್ದಾರೆ.

ಅಷ್ಟೇ ಅಲ್ಲದೇ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ದಾಖಲೆಗಳನ್ನು ಮಾಡುತ್ತಿದೆ. ಅವುಗಳೆಂದರೆ ’ಚಪಾಕ್‌’ ಟ್ರೇಲರ್‌ ಬಿಡುಗಡೆಯಾದ ಎರಡು ದಿನದಲ್ಲೇ ಎರಡು ಕೋಟಿಗೂ ಅಧಿಕ ಜನ ಅದನ್ನು ವೀಕ್ಷಿಸಿದ್ದಾರೆ. ಅಷ್ಟು ಮಾತ್ರವಲ್ಲ ಯೂಟ್ಯೂಬ್‌ನಲ್ಲಿ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿರುವ ಆ ಟ್ರೇಲರ್‌ ಅನ್ನು ಸುಮಾರು 9.2 ಲಕ್ಷ ಜನರು ಅದನ್ನು ಇಷ್ಟಪಟ್ಟು ಲೈಕ್‌ ಮಾಡಿದ್ದಾರೆ.

ಟ್ರೇಲರ್‌ ನೋಡಿ.

ಏನಿದರ ಕಥಾಹಂದರ?

2005ರಲ್ಲಿ ಆಸಿಡ್‌ ದಾಳಿಗೊಳಗಾದ ಲಕ್ಷ್ಮಿ ಅಗರ್‌ವಾಲ್‌ರವರ ಜೀವನ ಕಥನದ ನೈಜ ಘಟನೆಗಳನ್ನು ಆಧರಿಸಿ ಚಪಾಕ್‌ ಸಿನೆಮಾ ಮಾಡಲಾಗಿದೆ. 1990ರಲ್ಲಿ ದೆಹಲಿಯಲ್ಲಿ ಹುಟ್ಟಿದ ಲಕ್ಷ್ಮಿ ಅಗರ್‌ವಾಲ್‌ ಎಲ್ಲರಂತೆ ಬದುಕಿನ ಬಗ್ಗೆ ಭರವಸೆ ಇಟ್ಟುಕೊಂಡಿದ್ದ ಹುಡುಗಿ. ಆದರೆ ಬಡತನದ ಕಾರಣಕ್ಕೆ ಚಿಕ್ಕ ವಯಸ್ಸಿಗೆ ಕೆಲಸಕ್ಕೆ ಸೇರಬೇಕಾದ ಅನಿವಾರ್ಯತೆಗೆ ಬಿದ್ದ ಆಕೆ ಪುಸ್ತಕದಂಗಡಿಯಲ್ಲಿ ಕೆಲಸಕ್ಕೆ ಸೇರುತ್ತಾರೆ.

ಅಂದವಾಗಿದ್ದ 15 ವರ್ಷದ ಈ ಬಾಲೆಯ ಹಿಂದೆ 32 ವರ್ಷದ ಗುಡ್ಡು ಎಂಬ ವ್ಯಕ್ತಿ ಬೀಳುತ್ತಾನೆ. ಸಹಜವಾಗಿಯೇ ಆತನ ಪ್ರೀತಿಯನ್ನು ಲಕ್ಷ್ಮಿ ನಿರಾಕರಿಸಿದ ಏಕೈಕ ಕಾರಣಕ್ಕಾಗಿ ಆ ದುಷ್ಟನಿಂದ ಆಸಿಡ್‌ ದಾಳಿಗೊಳಗಾಗುತ್ತಾಳೆ. ಅವಳ ಬಹುತೇಕ ಮುಖ ತೀವ್ರ ಹಾನಿಗೊಳಗಾಗುತ್ತದೆ.

ಆದರೆ ಕುಗ್ಗದ ಲಕ್ಷ್ಮಿ ನ್ಯಾಯಕ್ಕಾಗಿ ಕೋರ್ಟ್‌ ಮೆಟ್ಟಿಲೇರುತ್ತಾಳೆ ಮತ್ತು ದಿಟ್ಟವಾಗಿ ಹೋರಾಡಿ ಅದರಲ್ಲಿ ಜಯಸಾಧಿಸುತ್ತಾಳೆ. ಆರೋಪಿಗೆ ಜೀವಾವಧಿ ಶಿಕ್ಷೆಯಾಗುತ್ತದೆ. ಆದರೆ ಅಷ್ಟಕ್ಕೆ ಲಕ್ಷ್ಮಿ ಸುಮ್ಮನಾಗುವುದಿಲ್ಲ. ತನ್ನ ಮುಖವನ್ನು ಘಾಸಿಗೊಳಿಸಿದ್ದು ಸಾಕು ಮತ್ಯಾರ ಮುಖವೂ ಹಾಳಾಗಬಾರದೆಂಬ ದಿಟ್ಟ ತೀರ್ಮಾನಕ್ಕೆ ಬರುತ್ತಾಳೆ. ಅದಕ್ಕಾಗಿ ದೇಶಾದ್ಯಂತ ಆಸಿಡ್‌ ಮಾರಾಟ ನೀಷೇಧಿಸುವ ಆಂದೋಲಕ್ಕೆ ಕರೆ ನೀಡುತ್ತಾಳೆ.

ಲಕ್ಷ್ಮಿ ಅಗರ್‌ವಾಲ್

ನ್ಯಾಯಾಲಯದಲ್ಲಿಯೂ ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವ ಇವಳು ಜನಾಭಿಪ್ರಾಯ ಮೂಡಿಸಲು ಮುಂದಾಗುತ್ತಾಳೆ. ಕೊನೆಗೂ ನ್ಯಾಯಾಲಯ 2013ರಲ್ಲಿ ಆಸಿಡ್‌ ಮಾರಾಟದ ಕುರಿತು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಆದೇಶಿಸಿದೆ. ಅದರಲ್ಲಿ ಗೆದ್ದ ಆಕೆ ಹಿಂತಿರುಗಿ ನೋಡಲೇ ಇಲ್ಲ. ಆಸಿಡ್‌ ದಾಳಿ ನಿಲ್ಲಿಸಿ ಎಂಬ ಆಂದೋಲನದ ಗಟ್ಟಿ ಕೂಗಾಗುತ್ತಾಳೆ.

ಆದರೆ ಕುಟುಂಬದ ಪರಿಸ್ಥಿತಿ ಚಿಂತಾಜನಕವಾಗುತ್ತದೆ. ಟಿಬಿಯಿಂದ ತಮ್ಮ ಕೊನೆಯುಸಿರೆಳೆದರೆ ಆಕೆಯ ತಂದೆಯೂ ಸಹ ಹೃದಯಾಘಾತದಿಂದ ಮರಣಹೊಂದುತ್ತಾರೆ. ಛಲ ಬಿಡದ ಗಟ್ಟಿಗಿತ್ತಿ ಲಕ್ಷ್ಮಿ ತನ್ನ ಹೋರಾಟ ಮಾತ್ರ ನಿಲ್ಲಿಸುವುದಿಲ್ಲ.

ಆಕೆ ತನ್ನ ಮುಖಮುಚ್ಚಿ ಓಡಾಡುವುದಿಲ್ಲ. ಏಕೆಂದರೆ ತಪ್ಪು ಆತನದೇ ಹೊರತು ನನ್ನದಲ್ಲ. ಮುಖ ಮುಚ್ಚಿ ಓಡಾಡಬೇಕಾದವನು ನನಗೆ ಆಸಿಡ್‌ ಎರಚಿದವನು ಎಂದು ಹಲವು ಸಂದರ್ಶನಗಳಲ್ಲಿ ಆಕೆ ದಿಟ್ಟವಾಗಿ ಹೇಳಿದ್ದಾಳೆ. ಇದನ್ನು ನಾವು ಅತ್ಯಾಚಾರಕ್ಕೊಳಗಾದ ಹೆಣ್ಣು ಮಕ್ಕಳಿಗೂ ಅನ್ವಯಿಸಬೇಕಾಗಿದೆ. ಸಂತ್ರಸ್ತರ ತಲೆಯೆತ್ತಿ ನಡೆಯಬೇಕು. ಆರೋಪಿಗಳು ತಲೆತಗ್ಗಿಸಬೇಕು ಎಂಬ ಮನೋಭಾವವನ್ನು ಎಲ್ಲೆಡೆ ಮೂಡಿಸಬೇಕು ಎನ್ನುವುದು ಆಕೆಯ ಮನದಾಳದ ಮಾತು.

ಆಕೆಯ ಈ ಧೈರ್ಯ ಮತ್ತು ದಿಟ್ಟತನವನ್ನು ಮೆಚ್ಚಿದ ಪರ್ತಕರ್ತ ಮತ್ತು ಸಾಮಾಜಿಕ ಕಾರ್ಯಕರ್ತ ಅಲೋಕ್‌ ದೀಕ್ಷಿತ್‌ ಆಕೆಯ ಜೊತೆಗಾರನಾಗಿದ್ದಾನೆ. ಸಾಂಪ್ರಾದಾಯಿಕ ಮದುವೆ ಪದ್ಧತಿಯಲ್ಲಿ ನಂಬಿಕೆಯಿರದ ಅವರು ಜೊತೆಗೂಡಿ ಪ್ರೀತಿಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಂದು ಮಗು ಸಹ ಇದೆ.

ಚಾವ್‌ ಫೌಂಡೇಶನ್‌ ತೆರದಿರುವ ಅವರಿಬ್ಬರೂ ಆಸಿಡ್‌ ದಾಳಿಯ ವಿರುದ್ಧ ಪ್ರಚಾರಾಂದೋಲನ ಮತ್ತು ದಾಳಿಗೊಳಗಾದವರಿಗೆ ರಕ್ಷಣೆ, ಪರಿಹಾರ ಇನ್ನಿತರ ವಿಚಾರಗಳಲ್ಲಿ ತೊಡಗಿಸಿಕೊಂಡಿದೆ. ಸಾಕಷ್ಟು ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಲಕ್ಷ್ಮಿ 2016ರಲ್ಲಿ ಲಂಡನ್‌ನಲ್ಲಿ ನಡೆದ ಫ್ಯಾಷನ್‌ ವೀಕ್‌ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿದ್ದಾರೆ. ಅಮೆರಿಕಾದ ಮಾಜಿ ಅಧ್ಯಕ್ಷ ಒಬಾಮ ಪತ್ನಿ ಮಿಶೆಲ್‌ ಲಕ್ಷ್ಮಿಯನ್ನು ಗುರುತಿಸಿ ಧೈರ್‍ಯವಂತ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಒಟ್ಟಿನಲ್ಲಿ ನಮಗೆ ಬರುವ ಕಷ್ಟಗಳು, ಸವಾಲುಗಳನ್ನೇ ದಾರಿಯಾಗಿ ಮಾಡಿಕೊಂಡು ಸಾಧನೆಗೈಯ್ಯಬೇಕು ಮತ್ತು ನೊಂದವರಿಗೆ ಸಹಾಯ ಮಾಡಬೇಕು ಎಂಬುದನ್ನು ನಾವು ಲಕ್ಷ್ಮಿಯಿಂದ ಕಲಿಯಬೇಕಾಗಿದೆ. ಈಕೆಯ ಇಷ್ಟೆಲ್ಲಾ ಸಾಧನೆ ನೋಡಿಯೇ ಚಪಾಕ್‌ ಸಿನಿಮಾ ರಚನೆಗೊಂಡಿದೆ.

ಮೇಘನ ಗುಲ್ಜಾರ್‌

ಇನ್ನು ಮಹತ್ವದ ಈ ಸಿನಿಮಾಗೆ ರಾಝಿ ಮತ್ತು ತಲ್ವಾರ್‌ ನಂತಹ ಹಿಟ್‌ ಸಿನಿಮಾಗಳನ್ನು ಕೊಟ್ಟ ಖ್ಯಾತ ನಿರ್ದೇಶಕಿ ಮೇಘನ ಗುಲ್ಜಾರ್‌ರವರು ಆಕ್ಷಮ್‌ ಕಟ್‌ ಹೇಳಿದ್ದಾರೆ.

ದೀಪಿಕಾ ಪಡುಕೋಣೆ ಬಗ್ಗೆ ಒಂದಿಷ್ಟು…

ಬಾಲಿವುಡ್‌ ತಾರೆ ದೀಪಿಕಾ ಪಡುಕೋಣೆ ಸಿನಿಮಾಗಷ್ಟೇ ಸೀಮಿತವಾಗಿಲ್ಲ. ಅವರು ಮಾನಸಿಕ ಖಿನ್ನತೆಯ ವಿರುದ್ಧ ಅರಿವು ಮೂಡಿಸಲು ದಿ ಲೈವ್‌ ಲವ್‌ ಲಾಫ್‌ ಫೌಂಡೇಶನ್‌ ಆರಂಭಿಸಿದ್ದಾರೆ. ಚಿಕ್ಕಂದಿನಲ್ಲಿ ಮತ್ತು ಸಿನೆಮಾ ತಾರೆಯಾದ ನಂತರವೂ ಸ್ವತಃ ಖಿನ್ನತೆಯಿಂದ ಬಳಲಿದ ದೀಪಿಕಾ ತನಗಾದ ನೋವು ಮತ್ಯಾರಿಗೂ ಆಗಬಾರದೆಂದು ಖಿನ್ನತೆಯ ವಿರುದ್ಧ ಸಮರ ಸಾರಿದ್ದಾರೆ.

ಕರ್ನಾಟಕದ ಕೊಪ್ಪಳ ಜಿಲ್ಲೆಗೂ ಬಂದು ಈ ಕುರಿತು ಅರಿವು ಮೂಡಿಸುತ್ತಿರುವ ಅವರು ಮಾನಸಿಕ ಖಿನ್ನತೆಯಿಂದ ಉಂಟಾಗುವ  ಆತ್ಮಹತ್ಯೆಗಳನ್ನು ತಡೆಯುವಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದೇ ಮಾದರಿಯ ಚಿತ್ರ ಉಯರೆ..

ಇನ್ನು ಈ ವರ್ಷ ತೆರೆಕಂಡ ಮಲೆಯಾಳಂ ಸಿನೆಮಾ ಕೂಡ ಆಸಿಡ್‌ ದಾಳಿಗೊಳಗಾದ ಸಂತ್ರಸ್ತೆಯ ದಿಟ್ಟ ಹೋರಾಟವನ್ನು ಬಿಚ್ಚಿಡುತ್ತದೆ. ಪೈಲೆಟ್‌ ಆಗಿ ಆಕಾಸದಲ್ಲಿ ಹಕ್ಕಿಯ ರೀತಿ ಹಾರಬೇಕೆಂದು ಚಿಕ್ಕಂದಿನಿಂದ ಕನಸು ಕಾಣುವ ಹುಡುಗಿಗೆ ಆತನ ಪ್ರಿಯತಮೆನೆ ಕಲ್ಲು ಗುಂಡಿನ ಹಾಗೆ ಆಕೆಯ ಕಾಲಿಗೆ ಗಂಟು ಬಿದ್ದಿರುತ್ತಾನೆ.

ಪೈಲೆಟ್‌ ತರಬೇತಿಗಾಗಿ ಮುಂಬೈ ಸೇರುವ ಹುಡುಗಿ, ಆಕೆಯ ಬಗ್ಗೆ ಅನುಮಾನಿಸವು ಪ್ರಿಯತಮೆ, ಜೀವಕ್ಕಿಂತ ಹೆಚ್ಚು ಮಗಳನ್ನು ಪ್ರೀತಿಸುವ ಆಕೆಯ ತಂದೆ.. ಇವಿಷ್ಟರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಪ್ರಯತಮೆನೇ ಆಕೆಯ ಮೇಲೆ ಆಸಿಡ್‌ ಎರಚುತ್ತಾನೆ. ಆ ಮೂಲಕ ಆಕೆಯ ಕನಸುಗಳನ್ನು ಭಗ್ನಗೊಳಿಸಲು ಯತ್ನಿಸುತ್ತಾನೆ.

ಛಲಬಿಡದ ಆಕೆ ಪೈಲೆಟ್‌ ಆಗದಿದ್ದರೂ ಕೊನೆಗೆ ಗಗನಸಖಿಯಾಗುತ್ತಾಳೆ. ಆದರೆ ಆರೋಪಿ ಮಾತ್ರ ತನ್ನ ಕೃತ್ಯಕ್ಕೆ ಪಶ್ಚಾತಾಪ ಪಡದೇ ಆಕೆಗೆ ಮತ್ತೆ ತೊಂದರೆ ಕೊಟ್ಟು ಆ ಕೆಲಸದಿಂದಲೂ ಆಕೆಯನ್ನು ಬಿಡಿಸುತ್ತಾನೆ. ಅಲ್ಲಿಂದ ಹೋರಾಟ ಮುಂದುವರೆಸುವ ಆಕೆ ನ್ಯಾಯಾಲಯದಲ್ಲಿಯೂ ಗೆಲ್ಲುವುದು ಮತ್ತು ಸಂಕಷ್ಟದಲ್ಲಿ ಪೈಲೆಟ್‌ ಆಗಿ ಜನರನ್ನು ರಕ್ಷಿಸುವ ಮೂಲಕ ಜನಮನವನ್ನು ಗೆಲ್ಲುತ್ತಾಳೆ.

ಪಾರ್ವತಿ, ತೊವಿನೊ ಥಾಮಸ್‌, ಆಸಿಫ್‌ ಅಲಿ ಅಭಿನಯದ ಈ ಚಿತ್ರ ಅತ್ಯುತ್ತಮ ಸಂದೇಶ ಬೀರುವ ಚಿತ್ರವಾಗಿ ಎಲ್ಲರ ಮನಗೆದ್ದಿದೆ. ಅಲ್ಲಿನ ಹಾಡುಗಳು ಸಹ ಸ್ಪೂರ್ತಿಯುತವಾಗಿದೆ.

ಒಟ್ಟಿನಲ್ಲಿ ಈ ರೀತಿಯ ಸಮಾಜಮುಖಿ ಮತ್ತಷ್ಟು ಬರಲಿ. ಇದನ್ನು ನೋಡಿದ ಜನ ಅಲ್ಲಿನ ಸಂದೇಶಗಳನ್ನು ಅಳವಡಿಸಿಕೊಳ್ಳಲ್ಲಿ. ಹೆಣ್ಣು ಮಕ್ಕಳ ಮೇಲಿನ ಅಪರಾಧಗಳು ನಿಲ್ಲಲ್ಲಿ ಎಂಬುದು ನಮ್ಮ ಕಾಳಜಿ. ಆ ನಿಟ್ಟಿನಲ್ಲಿ ಚಿತ್ರತಂಡಕ್ಕೆ ಶುಭಕೋರೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...