Homeಮುಖಪುಟಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾವನ್ನು ಕೆಡವಿದ ಎರಡು ದಿನಗಳ ನಂತರ ಆ ಪ್ರದೇಶದ ಮುಸ್ಲಿಂ ನಿವಾಸಿಗಳು ಪೊಲೀಸ್ ದೌರ್ಜನ್ಯವು ತಮ್ಮನ್ನು ಭಯಭೀತಗೊಳಿಸಿದೆ ಎಂದು ಹೇಳುತ್ತಿದ್ದು, ಕೆಲವರು ಭಯದಿಂದ ಆ ಪ್ರದೇಶವನ್ನು ತೊರೆದಿದ್ದಾರೆ.

ಫೆಬ್ರವರಿ 8ರಂದು ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದ ನಂತರ ಸ್ಥಳೀಯ ಜನರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿದರು, ಮಹಿಳೆಯರು ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ, ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಮನೆಯಲ್ಲಿದ್ದ ಪುರುಷರನ್ನು ಬಂಧಿಸಿದ್ದಾರೆ ಎಂದು ಬಂಬೂಲ್ಪುರದ ನಿವಾಸಿಗಳು ಆರೋಪಿಸಿದ್ದಾರೆ.

ಸ್ಥಳೀಯ ಶಾಲೆಯೊಂದರಲ್ಲಿ ಅಡುಗೆ ಕೆಲಸ ಮಾಡುವ 38 ವರ್ಷದ ಶಮಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸ್ ಅಧಿಕಾರಿಗಳು ಶನಿವಾರ ಸಂಜೆ 4 ಗಂಟೆ ಸುಮಾರಿಗೆ ನಮ್ಮ ಮನೆಗೆ ನುಗ್ಗಿದರು. ಅವರು ನಮ್ಮ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ, ನಮ್ಮನ್ನು ತಳ್ಳಿದ್ದಾರೆ. ಬಳಿಕ ಪತಿಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದು, ಅವರು ಈಗ ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ. ಶಮಾ ಅವರ ಪತಿ, ನಯೀಮ್(45) ಹಲ್ದ್ವಾನಿಯಲ್ಲಿ  ಮರಳನ್ನು ಸಾಗಿಸುವ ದೈನಂದಿನ ಕೂಲಿ ಕಾರ್ಮಿಕರಾಗಿದ್ದರು. ನಮಗೆ ಸಣ್ಣ ಸಣ್ಣ ಮಕ್ಕಳಿದ್ದಾರೆ, ನಮ್ಮನ್ನು ಬಿಟ್ಟುಬಿಡಿ ಎಂದು ನಾವು ಮನವಿ ಮಾಡಿದೆವು, ಈ ವೇಳೆ ಪೊಲೀಸರು ನಮಗೂ ಮಕ್ಕಳಿದ್ದಾರೆ ನಮ್ಮ ಮೇಲೆ ಏಕೆ ಕಲ್ಲು ಎಸೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ 22 ವರ್ಷದ ಮೆಹ್ರೀನ್ ಮಾತನಾಡಿದ್ದು, ನನ್ನ ಪತಿ ಆರಿಫ್(25) ಅವರನ್ನು ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ನಾಲ್ಕು ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಏಳು ತಿಂಗಳ ಹಿಂದೆಯಷ್ಠೇ ನಮ್ಮ ವಿವಾಹವಾಗಿತ್ತು. ಅವರಿಲ್ಲದೆ ನನಗೆ ಬದುಕಲು ಸಾಧ್ಯವಿಲ್ಲ, ನಾನು ನನ್ನ ಪತಿಯನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಾಕ್ಷ್ಯಾಧಾರಗಳಿಲ್ಲದೆ ಯಾರ ವಿರುದ್ಧವೂ ಕ್ರಮ ಕೈಗೊಳ್ಳುವ ಉದ್ದೇಶ ನಮಗಿಲ್ಲ. ಫೆಬ್ರವರಿ 7ರ ಘಟನೆಗಳು ಮತ್ತು ಅವುಗಳ ನಂತರದ ಬೆಳವಣಿಗೆ ಬಗ್ಗೆ ಈಗ ಸುಳ್ಳು ಹೇಳಲಾಗುತ್ತಿದೆ. ನಾವು ಕಾನೂನಿಗೆ ಅನುಸಾರವಾಗಿ ಯಾವುದೇ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ಫೆಬ್ರವರಿ 8ರಂದು ಪಟ್ಟಣದ ಮುನ್ಸಿಪಲ್ ಕಾರ್ಪೊರೇಶನ್ ಬಂಭೂಲ್ಪುರದಲ್ಲಿರುವ ಮಸೀದಿ ಮತ್ತು ಮದರಸಾವನ್ನು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಪುರಸಭೆಯು ನೆಲಸಮಗೊಳಿಸಿತ್ತು. ಮಸೀದಿ ಕುರಿತ ಪ್ರಕರಣ ಉತ್ತರಾಖಂಡ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗಲೇ ದಿಢೀರ್‌ ಎಂಬಂತೆ ಈ ಬೆಳವಣಿಗೆ ನಡೆದಿತ್ತು.

ಈ ವೇಳೆ ನಡೆದ ಹಿಂಸಾಚಾರದಲ್ಲಿ 6 ಮಂದಿ ನಾಗರಿಕರು ಸಾವನ್ನಪ್ಪಿದ್ದರು. ನೂರಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ, ಕಾರುಗಳಿಗೆ ಬೆಂಕಿ ಹಚ್ಚಿದೆ ಮತ್ತು ಬಂಭೂಲ್ಪುರ ಪೊಲೀಸ್ ಠಾಣೆಯನ್ನು ಗುಂಪು ಸುತ್ತುವರಿದಿದೆ. ಸ್ಥಳೀಯ ಆಡಳಿತವು ಫೆಬ್ರವರಿ 8ರ ಸಂಜೆ ಕರ್ಫ್ಯೂ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಕಂಡಲ್ಲಿ ಗುಂಡು ಆದೇಶವನ್ನು ನೀಡಿತ್ತು. ಅಂದಿನಿಂದ ಬಂಭೂಲ್‌ಪುರದ ಹಿಂದೂ ಬಹುಸಂಖ್ಯಾತ ಪ್ರದೇಶದ ಬಳಿ ಪೊಲೀಸ್ ಬ್ಯಾರಿಕೇಡ್‌ಗಳು ಹಾಕಲಾಗಿದೆ ಮತ್ತು ಪತ್ರಕರ್ತರು ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಫೆಬ್ರವರಿ 10ರಂದು ವರದಿಗಾರರು ಆ ಪ್ರದೇಶಕ್ಕೆ ಭೇಟಿ ನೀಡಿದಾಗ, ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿತ್ತು ಮತ್ತು ಅನೇಕ ಮನೆಗಳ ಬಾಗಿಲುಗಳಿಗೆ ಬೀಗಗಳನ್ನು ನೇತು ಹಾಕಲಾಗಿತ್ತು. ಹತ್ತಾರು ಕಾರುಗಳು ಮತ್ತು ಬೈಕ್‌ಗಳು ಧ್ವಂಸಗೊಂಡಿದ್ದವು. ವಾಹನಗಳ ಕಿಟಕಿಗಳು ಮತ್ತು ಹೆಡ್‌ಲೈಟ್‌ಗಳನ್ನು ಪೊಲೀಸ್ ಅಧಿಕಾರಿಗಳು ಒಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಪರ್ವೀನ್(30) ಈ ಬಗ್ಗೆ ಮಾತನಾಡಿದ್ದು, ತನ್ನ ಪತಿ ಮುಕೀಮ್ ದಿನಗೂಲಿ ನೌಕರನಾಗಿದ್ದು, ಫೆ.10ರಂದು ಸಂಜೆ ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಶಾಹಿದ್ (35) ತರಕಾರಿ ಮಾರಾಟಗಾರನಾಗಿದ್ದು, ಆತನನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಅವರ ತಾಯಿ ಅನಿಸಾ ಹೇಳಿದ್ದಾರೆ. ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುವ ತನ್ನ ಪತಿ ಆರಿಫ್‌ನನ್ನು ಬಂಧಿಸಿದ ನಾಲ್ವರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೆಹ್ರೀನ್ ಎಂಬವರು ಆರೋಪಿಸಿದರು. ಅವಳ ಒಂದು ಕೈ ಮತ್ತು ತೊಡೆಯ ಮೇಲೆ ಹಲ್ಲೆ ನಡೆಸಲಾಗಿದೆ. ಎರಡೂ ಈಗ ಊದಿಕೊಂಡಿವೆ ಎಂದು ಅವರು ಹೇಳಿದ್ದಾರೆ.

55 ವರ್ಷದ ಶಾಹೀನ್ ತನ್ನ ಮನೆಯ ಪ್ರವೇಶದ್ವಾರದಲ್ಲಿ ಅಳುತ್ತಾ, ಜೀವನೋಪಾಯಕ್ಕಾಗಿ ಮಂಚಗಳನ್ನು ತಯಾರಿಸುವ ಕೆಲಸ ಮಾಡುತ್ತಿದ್ದ ಮಗ ಶಾರುಖ್(32)ನನ್ನು ಫೆಬ್ರವರಿ 10ರಂದು ಮಧ್ಯಾಹ್ನ 3ಗಂಟೆಗೆ ಬಂಧಿಸಲಾಗಿದೆ. ಮನೆಯೊಳಗಿದ್ದ ಟಿವಿಯನ್ನು ಧ್ವಂಸಗೊಳಿಸಿ ನಮ್ಮ ಮೇಲೆ ಹಲ್ಲೆ ನಡೆಸಿ ಮಗನನ್ನು ಎಳೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಪೋಲೀಸರ ದೌರ್ಜನ್ಯದಿಂದ  ಹಲ್ದ್ವಾನಿಯಿಂದ ಮುಸ್ಲಿಮರು ವಲಸೆ ಹೋಗುವಂತಾಗಿದೆ. ನೂರಾರು ಜನರು, ಕೈಯಲ್ಲಿ ಸಾಮಾನುಗಳನ್ನು ಹಿಡಿದುಕೊಂಡು ಉತ್ತರಾಖಂಡದ ಇತರ ನಗರಗಳಿಗೆ ಮತ್ತು ಉತ್ತರಪ್ರದೇಶದ ನೆರೆಯ ಪಟ್ಟಣಗಳು ಮತ್ತು ನಗರಗಳಿಗೆ ಬಸ್ಸುಗಳನ್ನು ಹತ್ತಿದ್ದಾರೆ.

ಘಟನೆ ಬಗ್ಗೆ ಸ್ಥಳೀಯ ನಿವಾಸಿ ಪರ್ವೀನ್ ಹೇಳಿಕೆ…..

ಫೆಬ್ರವರಿ 8ರಂದು ಮಧ್ಯಾಹ್ನ 3.30ರ ಸುಮಾರಿಗೆ ನಾನು (ಪರ್ವೀನ್) ತನ್ನ ಟೆರೇಸ್‌ನಲ್ಲಿ ಬಟ್ಟೆಗಳನ್ನು ನೇತು ಹಾಕುತ್ತಿದ್ದಾಗ ಬುಲ್ಡೋಜರ್‌ಗಳು ಬಂದವು, ಡಜನ್‌ಗಟ್ಟಲೆ ಪೊಲೀಸ್ ಅಧಿಕಾರಿಗಳು ಇದ್ದರು. ಇದು ಅನಿರೀಕ್ಷಿತವಾಗಿತ್ತು ಎಂದು ಅವರು ಹೇಳಿದ್ದಾರೆ. ಸ್ಥಳೀಯ ಅಧಿಕಾರಿಗಳು ಕೆಡವಿದ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಜಕಾರಿಯಾ ಮದರಸಾದಿಂದ ಪರ್ವೀನ್ ಅವರ ಮನೆ ಕೇವಲ 50 ಮೀಟರ್ ದೂರದಲ್ಲಿತ್ತು.

ತೆರವು ಕಾರ್ಯಾಚರಣೆ ತಡೆಯಲು ಜನರು ತಮ್ಮ ಮನೆಗಳಿಂದ ಹೊರಬಂದರು. ಸ್ಥಳೀಯ ಕೌನ್ಸಿಲರ್ ನೇತೃತ್ವದಲ್ಲಿ ಹಿರಿಯರು ಮುಂಭಾಗದಲ್ಲಿದ್ದರು. ಕಟ್ಟಡಗಳನ್ನು ಕೆಡವದಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು. ಧ್ವಂಸ ಮಾಡುವುದನ್ನು ತಡೆಯಲು ಮಹಿಳೆಯರು ಮದರಸಾದ ಪಕ್ಕದ ತೆರೆದ ಪ್ರದೇಶದಲ್ಲಿ ಕುಳಿತುಕೊಂಡರು. ಈ ವೇಳೆ ಪೊಲೀಸರು ಮಹಿಳೆಯರನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು. ಇದು ಹಿಂಸೆಗೆ ಪ್ರೇರೇಪಿಸಿದ್ದು, ಆ ಮೇಲೆ ಕಲ್ಲು ತೂರಲು ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನೈನಿತಾಲ್‌ನ ಹಿರಿಯ ಪೊಲೀಸ್ ಅಧೀಕ್ಷಕ ಪ್ರಹ್ಲಾದ್ ನಾರಾಯಣ ಮೀನಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ, ಇವರಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ, ಪೊಲೀಸ್ ಠಾಣೆಯ ಹೊರಗೆ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಡಿಜಿಪಿ ಅಭಿನವ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸರು ತಮ್ಮ ಅಧಿಕೃತ ಕರ್ತವ್ಯಗಳ ನಿರ್ವಹಣೆಯಲ್ಲಿ ತಮ್ಮ ಆತ್ಮರಕ್ಷಣೆ ಹಕ್ಕನ್ನು ಕಾನೂನುಬದ್ಧವಾಗಿ ಚಲಾಯಿಸಿದ್ದಾರೆ. ಇದಕ್ಕೆ ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಇದನ್ನು ಮ್ಯಾಜಿಸ್ಟ್ರೇಟ್ ವಿಚಾರಣೆ ಮತ್ತು ಕ್ರಿಮಿನಲ್ ತನಿಖೆಯಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...