Homeಮುಖಪುಟಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾವನ್ನು ಕೆಡವಿದ ಎರಡು ದಿನಗಳ ನಂತರ ಆ ಪ್ರದೇಶದ ಮುಸ್ಲಿಂ ನಿವಾಸಿಗಳು ಪೊಲೀಸ್ ದೌರ್ಜನ್ಯವು ತಮ್ಮನ್ನು ಭಯಭೀತಗೊಳಿಸಿದೆ ಎಂದು ಹೇಳುತ್ತಿದ್ದು, ಕೆಲವರು ಭಯದಿಂದ ಆ ಪ್ರದೇಶವನ್ನು ತೊರೆದಿದ್ದಾರೆ.

ಫೆಬ್ರವರಿ 8ರಂದು ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದ ನಂತರ ಸ್ಥಳೀಯ ಜನರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿದರು, ಮಹಿಳೆಯರು ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ, ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಮನೆಯಲ್ಲಿದ್ದ ಪುರುಷರನ್ನು ಬಂಧಿಸಿದ್ದಾರೆ ಎಂದು ಬಂಬೂಲ್ಪುರದ ನಿವಾಸಿಗಳು ಆರೋಪಿಸಿದ್ದಾರೆ.

ಸ್ಥಳೀಯ ಶಾಲೆಯೊಂದರಲ್ಲಿ ಅಡುಗೆ ಕೆಲಸ ಮಾಡುವ 38 ವರ್ಷದ ಶಮಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸ್ ಅಧಿಕಾರಿಗಳು ಶನಿವಾರ ಸಂಜೆ 4 ಗಂಟೆ ಸುಮಾರಿಗೆ ನಮ್ಮ ಮನೆಗೆ ನುಗ್ಗಿದರು. ಅವರು ನಮ್ಮ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ, ನಮ್ಮನ್ನು ತಳ್ಳಿದ್ದಾರೆ. ಬಳಿಕ ಪತಿಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದು, ಅವರು ಈಗ ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ. ಶಮಾ ಅವರ ಪತಿ, ನಯೀಮ್(45) ಹಲ್ದ್ವಾನಿಯಲ್ಲಿ  ಮರಳನ್ನು ಸಾಗಿಸುವ ದೈನಂದಿನ ಕೂಲಿ ಕಾರ್ಮಿಕರಾಗಿದ್ದರು. ನಮಗೆ ಸಣ್ಣ ಸಣ್ಣ ಮಕ್ಕಳಿದ್ದಾರೆ, ನಮ್ಮನ್ನು ಬಿಟ್ಟುಬಿಡಿ ಎಂದು ನಾವು ಮನವಿ ಮಾಡಿದೆವು, ಈ ವೇಳೆ ಪೊಲೀಸರು ನಮಗೂ ಮಕ್ಕಳಿದ್ದಾರೆ ನಮ್ಮ ಮೇಲೆ ಏಕೆ ಕಲ್ಲು ಎಸೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ 22 ವರ್ಷದ ಮೆಹ್ರೀನ್ ಮಾತನಾಡಿದ್ದು, ನನ್ನ ಪತಿ ಆರಿಫ್(25) ಅವರನ್ನು ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ನಾಲ್ಕು ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಏಳು ತಿಂಗಳ ಹಿಂದೆಯಷ್ಠೇ ನಮ್ಮ ವಿವಾಹವಾಗಿತ್ತು. ಅವರಿಲ್ಲದೆ ನನಗೆ ಬದುಕಲು ಸಾಧ್ಯವಿಲ್ಲ, ನಾನು ನನ್ನ ಪತಿಯನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಾಕ್ಷ್ಯಾಧಾರಗಳಿಲ್ಲದೆ ಯಾರ ವಿರುದ್ಧವೂ ಕ್ರಮ ಕೈಗೊಳ್ಳುವ ಉದ್ದೇಶ ನಮಗಿಲ್ಲ. ಫೆಬ್ರವರಿ 7ರ ಘಟನೆಗಳು ಮತ್ತು ಅವುಗಳ ನಂತರದ ಬೆಳವಣಿಗೆ ಬಗ್ಗೆ ಈಗ ಸುಳ್ಳು ಹೇಳಲಾಗುತ್ತಿದೆ. ನಾವು ಕಾನೂನಿಗೆ ಅನುಸಾರವಾಗಿ ಯಾವುದೇ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ಫೆಬ್ರವರಿ 8ರಂದು ಪಟ್ಟಣದ ಮುನ್ಸಿಪಲ್ ಕಾರ್ಪೊರೇಶನ್ ಬಂಭೂಲ್ಪುರದಲ್ಲಿರುವ ಮಸೀದಿ ಮತ್ತು ಮದರಸಾವನ್ನು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಪುರಸಭೆಯು ನೆಲಸಮಗೊಳಿಸಿತ್ತು. ಮಸೀದಿ ಕುರಿತ ಪ್ರಕರಣ ಉತ್ತರಾಖಂಡ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗಲೇ ದಿಢೀರ್‌ ಎಂಬಂತೆ ಈ ಬೆಳವಣಿಗೆ ನಡೆದಿತ್ತು.

ಈ ವೇಳೆ ನಡೆದ ಹಿಂಸಾಚಾರದಲ್ಲಿ 6 ಮಂದಿ ನಾಗರಿಕರು ಸಾವನ್ನಪ್ಪಿದ್ದರು. ನೂರಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ, ಕಾರುಗಳಿಗೆ ಬೆಂಕಿ ಹಚ್ಚಿದೆ ಮತ್ತು ಬಂಭೂಲ್ಪುರ ಪೊಲೀಸ್ ಠಾಣೆಯನ್ನು ಗುಂಪು ಸುತ್ತುವರಿದಿದೆ. ಸ್ಥಳೀಯ ಆಡಳಿತವು ಫೆಬ್ರವರಿ 8ರ ಸಂಜೆ ಕರ್ಫ್ಯೂ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಕಂಡಲ್ಲಿ ಗುಂಡು ಆದೇಶವನ್ನು ನೀಡಿತ್ತು. ಅಂದಿನಿಂದ ಬಂಭೂಲ್‌ಪುರದ ಹಿಂದೂ ಬಹುಸಂಖ್ಯಾತ ಪ್ರದೇಶದ ಬಳಿ ಪೊಲೀಸ್ ಬ್ಯಾರಿಕೇಡ್‌ಗಳು ಹಾಕಲಾಗಿದೆ ಮತ್ತು ಪತ್ರಕರ್ತರು ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಫೆಬ್ರವರಿ 10ರಂದು ವರದಿಗಾರರು ಆ ಪ್ರದೇಶಕ್ಕೆ ಭೇಟಿ ನೀಡಿದಾಗ, ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿತ್ತು ಮತ್ತು ಅನೇಕ ಮನೆಗಳ ಬಾಗಿಲುಗಳಿಗೆ ಬೀಗಗಳನ್ನು ನೇತು ಹಾಕಲಾಗಿತ್ತು. ಹತ್ತಾರು ಕಾರುಗಳು ಮತ್ತು ಬೈಕ್‌ಗಳು ಧ್ವಂಸಗೊಂಡಿದ್ದವು. ವಾಹನಗಳ ಕಿಟಕಿಗಳು ಮತ್ತು ಹೆಡ್‌ಲೈಟ್‌ಗಳನ್ನು ಪೊಲೀಸ್ ಅಧಿಕಾರಿಗಳು ಒಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಪರ್ವೀನ್(30) ಈ ಬಗ್ಗೆ ಮಾತನಾಡಿದ್ದು, ತನ್ನ ಪತಿ ಮುಕೀಮ್ ದಿನಗೂಲಿ ನೌಕರನಾಗಿದ್ದು, ಫೆ.10ರಂದು ಸಂಜೆ ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಶಾಹಿದ್ (35) ತರಕಾರಿ ಮಾರಾಟಗಾರನಾಗಿದ್ದು, ಆತನನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಅವರ ತಾಯಿ ಅನಿಸಾ ಹೇಳಿದ್ದಾರೆ. ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುವ ತನ್ನ ಪತಿ ಆರಿಫ್‌ನನ್ನು ಬಂಧಿಸಿದ ನಾಲ್ವರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೆಹ್ರೀನ್ ಎಂಬವರು ಆರೋಪಿಸಿದರು. ಅವಳ ಒಂದು ಕೈ ಮತ್ತು ತೊಡೆಯ ಮೇಲೆ ಹಲ್ಲೆ ನಡೆಸಲಾಗಿದೆ. ಎರಡೂ ಈಗ ಊದಿಕೊಂಡಿವೆ ಎಂದು ಅವರು ಹೇಳಿದ್ದಾರೆ.

55 ವರ್ಷದ ಶಾಹೀನ್ ತನ್ನ ಮನೆಯ ಪ್ರವೇಶದ್ವಾರದಲ್ಲಿ ಅಳುತ್ತಾ, ಜೀವನೋಪಾಯಕ್ಕಾಗಿ ಮಂಚಗಳನ್ನು ತಯಾರಿಸುವ ಕೆಲಸ ಮಾಡುತ್ತಿದ್ದ ಮಗ ಶಾರುಖ್(32)ನನ್ನು ಫೆಬ್ರವರಿ 10ರಂದು ಮಧ್ಯಾಹ್ನ 3ಗಂಟೆಗೆ ಬಂಧಿಸಲಾಗಿದೆ. ಮನೆಯೊಳಗಿದ್ದ ಟಿವಿಯನ್ನು ಧ್ವಂಸಗೊಳಿಸಿ ನಮ್ಮ ಮೇಲೆ ಹಲ್ಲೆ ನಡೆಸಿ ಮಗನನ್ನು ಎಳೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಪೋಲೀಸರ ದೌರ್ಜನ್ಯದಿಂದ  ಹಲ್ದ್ವಾನಿಯಿಂದ ಮುಸ್ಲಿಮರು ವಲಸೆ ಹೋಗುವಂತಾಗಿದೆ. ನೂರಾರು ಜನರು, ಕೈಯಲ್ಲಿ ಸಾಮಾನುಗಳನ್ನು ಹಿಡಿದುಕೊಂಡು ಉತ್ತರಾಖಂಡದ ಇತರ ನಗರಗಳಿಗೆ ಮತ್ತು ಉತ್ತರಪ್ರದೇಶದ ನೆರೆಯ ಪಟ್ಟಣಗಳು ಮತ್ತು ನಗರಗಳಿಗೆ ಬಸ್ಸುಗಳನ್ನು ಹತ್ತಿದ್ದಾರೆ.

ಘಟನೆ ಬಗ್ಗೆ ಸ್ಥಳೀಯ ನಿವಾಸಿ ಪರ್ವೀನ್ ಹೇಳಿಕೆ…..

ಫೆಬ್ರವರಿ 8ರಂದು ಮಧ್ಯಾಹ್ನ 3.30ರ ಸುಮಾರಿಗೆ ನಾನು (ಪರ್ವೀನ್) ತನ್ನ ಟೆರೇಸ್‌ನಲ್ಲಿ ಬಟ್ಟೆಗಳನ್ನು ನೇತು ಹಾಕುತ್ತಿದ್ದಾಗ ಬುಲ್ಡೋಜರ್‌ಗಳು ಬಂದವು, ಡಜನ್‌ಗಟ್ಟಲೆ ಪೊಲೀಸ್ ಅಧಿಕಾರಿಗಳು ಇದ್ದರು. ಇದು ಅನಿರೀಕ್ಷಿತವಾಗಿತ್ತು ಎಂದು ಅವರು ಹೇಳಿದ್ದಾರೆ. ಸ್ಥಳೀಯ ಅಧಿಕಾರಿಗಳು ಕೆಡವಿದ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಜಕಾರಿಯಾ ಮದರಸಾದಿಂದ ಪರ್ವೀನ್ ಅವರ ಮನೆ ಕೇವಲ 50 ಮೀಟರ್ ದೂರದಲ್ಲಿತ್ತು.

ತೆರವು ಕಾರ್ಯಾಚರಣೆ ತಡೆಯಲು ಜನರು ತಮ್ಮ ಮನೆಗಳಿಂದ ಹೊರಬಂದರು. ಸ್ಥಳೀಯ ಕೌನ್ಸಿಲರ್ ನೇತೃತ್ವದಲ್ಲಿ ಹಿರಿಯರು ಮುಂಭಾಗದಲ್ಲಿದ್ದರು. ಕಟ್ಟಡಗಳನ್ನು ಕೆಡವದಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು. ಧ್ವಂಸ ಮಾಡುವುದನ್ನು ತಡೆಯಲು ಮಹಿಳೆಯರು ಮದರಸಾದ ಪಕ್ಕದ ತೆರೆದ ಪ್ರದೇಶದಲ್ಲಿ ಕುಳಿತುಕೊಂಡರು. ಈ ವೇಳೆ ಪೊಲೀಸರು ಮಹಿಳೆಯರನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು. ಇದು ಹಿಂಸೆಗೆ ಪ್ರೇರೇಪಿಸಿದ್ದು, ಆ ಮೇಲೆ ಕಲ್ಲು ತೂರಲು ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನೈನಿತಾಲ್‌ನ ಹಿರಿಯ ಪೊಲೀಸ್ ಅಧೀಕ್ಷಕ ಪ್ರಹ್ಲಾದ್ ನಾರಾಯಣ ಮೀನಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ, ಇವರಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ, ಪೊಲೀಸ್ ಠಾಣೆಯ ಹೊರಗೆ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಡಿಜಿಪಿ ಅಭಿನವ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸರು ತಮ್ಮ ಅಧಿಕೃತ ಕರ್ತವ್ಯಗಳ ನಿರ್ವಹಣೆಯಲ್ಲಿ ತಮ್ಮ ಆತ್ಮರಕ್ಷಣೆ ಹಕ್ಕನ್ನು ಕಾನೂನುಬದ್ಧವಾಗಿ ಚಲಾಯಿಸಿದ್ದಾರೆ. ಇದಕ್ಕೆ ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಇದನ್ನು ಮ್ಯಾಜಿಸ್ಟ್ರೇಟ್ ವಿಚಾರಣೆ ಮತ್ತು ಕ್ರಿಮಿನಲ್ ತನಿಖೆಯಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...