Homeಮುಖಪುಟಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾವನ್ನು ಕೆಡವಿದ ಎರಡು ದಿನಗಳ ನಂತರ ಆ ಪ್ರದೇಶದ ಮುಸ್ಲಿಂ ನಿವಾಸಿಗಳು ಪೊಲೀಸ್ ದೌರ್ಜನ್ಯವು ತಮ್ಮನ್ನು ಭಯಭೀತಗೊಳಿಸಿದೆ ಎಂದು ಹೇಳುತ್ತಿದ್ದು, ಕೆಲವರು ಭಯದಿಂದ ಆ ಪ್ರದೇಶವನ್ನು ತೊರೆದಿದ್ದಾರೆ.

ಫೆಬ್ರವರಿ 8ರಂದು ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದ ನಂತರ ಸ್ಥಳೀಯ ಜನರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿದರು, ಮಹಿಳೆಯರು ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ, ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಮನೆಯಲ್ಲಿದ್ದ ಪುರುಷರನ್ನು ಬಂಧಿಸಿದ್ದಾರೆ ಎಂದು ಬಂಬೂಲ್ಪುರದ ನಿವಾಸಿಗಳು ಆರೋಪಿಸಿದ್ದಾರೆ.

ಸ್ಥಳೀಯ ಶಾಲೆಯೊಂದರಲ್ಲಿ ಅಡುಗೆ ಕೆಲಸ ಮಾಡುವ 38 ವರ್ಷದ ಶಮಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸ್ ಅಧಿಕಾರಿಗಳು ಶನಿವಾರ ಸಂಜೆ 4 ಗಂಟೆ ಸುಮಾರಿಗೆ ನಮ್ಮ ಮನೆಗೆ ನುಗ್ಗಿದರು. ಅವರು ನಮ್ಮ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ, ನಮ್ಮನ್ನು ತಳ್ಳಿದ್ದಾರೆ. ಬಳಿಕ ಪತಿಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದು, ಅವರು ಈಗ ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ. ಶಮಾ ಅವರ ಪತಿ, ನಯೀಮ್(45) ಹಲ್ದ್ವಾನಿಯಲ್ಲಿ  ಮರಳನ್ನು ಸಾಗಿಸುವ ದೈನಂದಿನ ಕೂಲಿ ಕಾರ್ಮಿಕರಾಗಿದ್ದರು. ನಮಗೆ ಸಣ್ಣ ಸಣ್ಣ ಮಕ್ಕಳಿದ್ದಾರೆ, ನಮ್ಮನ್ನು ಬಿಟ್ಟುಬಿಡಿ ಎಂದು ನಾವು ಮನವಿ ಮಾಡಿದೆವು, ಈ ವೇಳೆ ಪೊಲೀಸರು ನಮಗೂ ಮಕ್ಕಳಿದ್ದಾರೆ ನಮ್ಮ ಮೇಲೆ ಏಕೆ ಕಲ್ಲು ಎಸೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ 22 ವರ್ಷದ ಮೆಹ್ರೀನ್ ಮಾತನಾಡಿದ್ದು, ನನ್ನ ಪತಿ ಆರಿಫ್(25) ಅವರನ್ನು ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ನಾಲ್ಕು ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಏಳು ತಿಂಗಳ ಹಿಂದೆಯಷ್ಠೇ ನಮ್ಮ ವಿವಾಹವಾಗಿತ್ತು. ಅವರಿಲ್ಲದೆ ನನಗೆ ಬದುಕಲು ಸಾಧ್ಯವಿಲ್ಲ, ನಾನು ನನ್ನ ಪತಿಯನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಾಕ್ಷ್ಯಾಧಾರಗಳಿಲ್ಲದೆ ಯಾರ ವಿರುದ್ಧವೂ ಕ್ರಮ ಕೈಗೊಳ್ಳುವ ಉದ್ದೇಶ ನಮಗಿಲ್ಲ. ಫೆಬ್ರವರಿ 7ರ ಘಟನೆಗಳು ಮತ್ತು ಅವುಗಳ ನಂತರದ ಬೆಳವಣಿಗೆ ಬಗ್ಗೆ ಈಗ ಸುಳ್ಳು ಹೇಳಲಾಗುತ್ತಿದೆ. ನಾವು ಕಾನೂನಿಗೆ ಅನುಸಾರವಾಗಿ ಯಾವುದೇ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ಫೆಬ್ರವರಿ 8ರಂದು ಪಟ್ಟಣದ ಮುನ್ಸಿಪಲ್ ಕಾರ್ಪೊರೇಶನ್ ಬಂಭೂಲ್ಪುರದಲ್ಲಿರುವ ಮಸೀದಿ ಮತ್ತು ಮದರಸಾವನ್ನು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಪುರಸಭೆಯು ನೆಲಸಮಗೊಳಿಸಿತ್ತು. ಮಸೀದಿ ಕುರಿತ ಪ್ರಕರಣ ಉತ್ತರಾಖಂಡ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗಲೇ ದಿಢೀರ್‌ ಎಂಬಂತೆ ಈ ಬೆಳವಣಿಗೆ ನಡೆದಿತ್ತು.

ಈ ವೇಳೆ ನಡೆದ ಹಿಂಸಾಚಾರದಲ್ಲಿ 6 ಮಂದಿ ನಾಗರಿಕರು ಸಾವನ್ನಪ್ಪಿದ್ದರು. ನೂರಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ, ಕಾರುಗಳಿಗೆ ಬೆಂಕಿ ಹಚ್ಚಿದೆ ಮತ್ತು ಬಂಭೂಲ್ಪುರ ಪೊಲೀಸ್ ಠಾಣೆಯನ್ನು ಗುಂಪು ಸುತ್ತುವರಿದಿದೆ. ಸ್ಥಳೀಯ ಆಡಳಿತವು ಫೆಬ್ರವರಿ 8ರ ಸಂಜೆ ಕರ್ಫ್ಯೂ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಕಂಡಲ್ಲಿ ಗುಂಡು ಆದೇಶವನ್ನು ನೀಡಿತ್ತು. ಅಂದಿನಿಂದ ಬಂಭೂಲ್‌ಪುರದ ಹಿಂದೂ ಬಹುಸಂಖ್ಯಾತ ಪ್ರದೇಶದ ಬಳಿ ಪೊಲೀಸ್ ಬ್ಯಾರಿಕೇಡ್‌ಗಳು ಹಾಕಲಾಗಿದೆ ಮತ್ತು ಪತ್ರಕರ್ತರು ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಫೆಬ್ರವರಿ 10ರಂದು ವರದಿಗಾರರು ಆ ಪ್ರದೇಶಕ್ಕೆ ಭೇಟಿ ನೀಡಿದಾಗ, ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿತ್ತು ಮತ್ತು ಅನೇಕ ಮನೆಗಳ ಬಾಗಿಲುಗಳಿಗೆ ಬೀಗಗಳನ್ನು ನೇತು ಹಾಕಲಾಗಿತ್ತು. ಹತ್ತಾರು ಕಾರುಗಳು ಮತ್ತು ಬೈಕ್‌ಗಳು ಧ್ವಂಸಗೊಂಡಿದ್ದವು. ವಾಹನಗಳ ಕಿಟಕಿಗಳು ಮತ್ತು ಹೆಡ್‌ಲೈಟ್‌ಗಳನ್ನು ಪೊಲೀಸ್ ಅಧಿಕಾರಿಗಳು ಒಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಪರ್ವೀನ್(30) ಈ ಬಗ್ಗೆ ಮಾತನಾಡಿದ್ದು, ತನ್ನ ಪತಿ ಮುಕೀಮ್ ದಿನಗೂಲಿ ನೌಕರನಾಗಿದ್ದು, ಫೆ.10ರಂದು ಸಂಜೆ ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಶಾಹಿದ್ (35) ತರಕಾರಿ ಮಾರಾಟಗಾರನಾಗಿದ್ದು, ಆತನನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಅವರ ತಾಯಿ ಅನಿಸಾ ಹೇಳಿದ್ದಾರೆ. ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುವ ತನ್ನ ಪತಿ ಆರಿಫ್‌ನನ್ನು ಬಂಧಿಸಿದ ನಾಲ್ವರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೆಹ್ರೀನ್ ಎಂಬವರು ಆರೋಪಿಸಿದರು. ಅವಳ ಒಂದು ಕೈ ಮತ್ತು ತೊಡೆಯ ಮೇಲೆ ಹಲ್ಲೆ ನಡೆಸಲಾಗಿದೆ. ಎರಡೂ ಈಗ ಊದಿಕೊಂಡಿವೆ ಎಂದು ಅವರು ಹೇಳಿದ್ದಾರೆ.

55 ವರ್ಷದ ಶಾಹೀನ್ ತನ್ನ ಮನೆಯ ಪ್ರವೇಶದ್ವಾರದಲ್ಲಿ ಅಳುತ್ತಾ, ಜೀವನೋಪಾಯಕ್ಕಾಗಿ ಮಂಚಗಳನ್ನು ತಯಾರಿಸುವ ಕೆಲಸ ಮಾಡುತ್ತಿದ್ದ ಮಗ ಶಾರುಖ್(32)ನನ್ನು ಫೆಬ್ರವರಿ 10ರಂದು ಮಧ್ಯಾಹ್ನ 3ಗಂಟೆಗೆ ಬಂಧಿಸಲಾಗಿದೆ. ಮನೆಯೊಳಗಿದ್ದ ಟಿವಿಯನ್ನು ಧ್ವಂಸಗೊಳಿಸಿ ನಮ್ಮ ಮೇಲೆ ಹಲ್ಲೆ ನಡೆಸಿ ಮಗನನ್ನು ಎಳೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಪೋಲೀಸರ ದೌರ್ಜನ್ಯದಿಂದ  ಹಲ್ದ್ವಾನಿಯಿಂದ ಮುಸ್ಲಿಮರು ವಲಸೆ ಹೋಗುವಂತಾಗಿದೆ. ನೂರಾರು ಜನರು, ಕೈಯಲ್ಲಿ ಸಾಮಾನುಗಳನ್ನು ಹಿಡಿದುಕೊಂಡು ಉತ್ತರಾಖಂಡದ ಇತರ ನಗರಗಳಿಗೆ ಮತ್ತು ಉತ್ತರಪ್ರದೇಶದ ನೆರೆಯ ಪಟ್ಟಣಗಳು ಮತ್ತು ನಗರಗಳಿಗೆ ಬಸ್ಸುಗಳನ್ನು ಹತ್ತಿದ್ದಾರೆ.

ಘಟನೆ ಬಗ್ಗೆ ಸ್ಥಳೀಯ ನಿವಾಸಿ ಪರ್ವೀನ್ ಹೇಳಿಕೆ…..

ಫೆಬ್ರವರಿ 8ರಂದು ಮಧ್ಯಾಹ್ನ 3.30ರ ಸುಮಾರಿಗೆ ನಾನು (ಪರ್ವೀನ್) ತನ್ನ ಟೆರೇಸ್‌ನಲ್ಲಿ ಬಟ್ಟೆಗಳನ್ನು ನೇತು ಹಾಕುತ್ತಿದ್ದಾಗ ಬುಲ್ಡೋಜರ್‌ಗಳು ಬಂದವು, ಡಜನ್‌ಗಟ್ಟಲೆ ಪೊಲೀಸ್ ಅಧಿಕಾರಿಗಳು ಇದ್ದರು. ಇದು ಅನಿರೀಕ್ಷಿತವಾಗಿತ್ತು ಎಂದು ಅವರು ಹೇಳಿದ್ದಾರೆ. ಸ್ಥಳೀಯ ಅಧಿಕಾರಿಗಳು ಕೆಡವಿದ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಜಕಾರಿಯಾ ಮದರಸಾದಿಂದ ಪರ್ವೀನ್ ಅವರ ಮನೆ ಕೇವಲ 50 ಮೀಟರ್ ದೂರದಲ್ಲಿತ್ತು.

ತೆರವು ಕಾರ್ಯಾಚರಣೆ ತಡೆಯಲು ಜನರು ತಮ್ಮ ಮನೆಗಳಿಂದ ಹೊರಬಂದರು. ಸ್ಥಳೀಯ ಕೌನ್ಸಿಲರ್ ನೇತೃತ್ವದಲ್ಲಿ ಹಿರಿಯರು ಮುಂಭಾಗದಲ್ಲಿದ್ದರು. ಕಟ್ಟಡಗಳನ್ನು ಕೆಡವದಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು. ಧ್ವಂಸ ಮಾಡುವುದನ್ನು ತಡೆಯಲು ಮಹಿಳೆಯರು ಮದರಸಾದ ಪಕ್ಕದ ತೆರೆದ ಪ್ರದೇಶದಲ್ಲಿ ಕುಳಿತುಕೊಂಡರು. ಈ ವೇಳೆ ಪೊಲೀಸರು ಮಹಿಳೆಯರನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು. ಇದು ಹಿಂಸೆಗೆ ಪ್ರೇರೇಪಿಸಿದ್ದು, ಆ ಮೇಲೆ ಕಲ್ಲು ತೂರಲು ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನೈನಿತಾಲ್‌ನ ಹಿರಿಯ ಪೊಲೀಸ್ ಅಧೀಕ್ಷಕ ಪ್ರಹ್ಲಾದ್ ನಾರಾಯಣ ಮೀನಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ, ಇವರಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ, ಪೊಲೀಸ್ ಠಾಣೆಯ ಹೊರಗೆ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಡಿಜಿಪಿ ಅಭಿನವ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸರು ತಮ್ಮ ಅಧಿಕೃತ ಕರ್ತವ್ಯಗಳ ನಿರ್ವಹಣೆಯಲ್ಲಿ ತಮ್ಮ ಆತ್ಮರಕ್ಷಣೆ ಹಕ್ಕನ್ನು ಕಾನೂನುಬದ್ಧವಾಗಿ ಚಲಾಯಿಸಿದ್ದಾರೆ. ಇದಕ್ಕೆ ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಇದನ್ನು ಮ್ಯಾಜಿಸ್ಟ್ರೇಟ್ ವಿಚಾರಣೆ ಮತ್ತು ಕ್ರಿಮಿನಲ್ ತನಿಖೆಯಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...