Homeಕರ್ನಾಟಕಜಾತಿ ಗಣತಿ ವರದಿ ಒಪ್ಪದಂತೆ ಲಿಂಗಾಯತರ ಮನವಿ: ಹೊಸ ಸಮೀಕ್ಷೆಗೆ ಪಟ್ಟು

ಜಾತಿ ಗಣತಿ ವರದಿ ಒಪ್ಪದಂತೆ ಲಿಂಗಾಯತರ ಮನವಿ: ಹೊಸ ಸಮೀಕ್ಷೆಗೆ ಪಟ್ಟು

- Advertisement -
- Advertisement -

ಒಕ್ಕಲಿಗರ ಬಳಿಕ ಲಿಂಗಾಯತ ಸಮುದಾಯದ ನಾಯಕರೂ 2015ರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ) ಗಣತಿ ವರದಿಯನ್ನು ವಿರೋಧಿಸಿದ್ದಾರೆ. ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸದಂತೆ ಆಗ್ರಹಿಸಿದ್ದಾರೆ.

ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ನಾಯಕರು ಜಾತಿ ಗಣತಿ ವರದಿ ಅಂಗೀಕರಿಸದಂತೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಪತ್ರಕ್ಕೆ ಸಿದ್ದರಾಮಯ್ಯ ಸರ್ಕಾರದ ಸಚಿವರಾದ ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ್ ಸೇರಿದಂತೆ, ವಿವಿಧ ಪಕ್ಷಗಳ ಸುಮಾರು 30ಕ್ಕೂ ಹೆಚ್ಚು ಶಾಸಕರು ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಶಕರಾದ ಬಿವೈ ವಿಜಯೇಂದ್ರ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಲಕ್ಷಣ ಸವದಿ , ವಿಜಯಾನಂದ ಕಾಶಪ್ಪನವರ್, ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಕೂಡ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಹಿರಿಯ ಕಾಂಗ್ರೆಸ್ ಶಾಸಕ ಮತ್ತು ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. 2015 ಜಾತಿ ಗಣತಿ ವರದಿ ಅವೈಜ್ಞಾನಿಕ, ಅವಧಿ ಮೀರಿದ್ದು ಮತ್ತು ಕ್ಷೇತ್ರ ಕಾರ್ಯದ ಕೊರತೆಯಿಂದ ಕೂಡಿದೆ ಎಂದು ಶಾಮನೂರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಒಕ್ಕಲಿಗ ಸಮುದಾಯದಿಂದ ವಿರೋಧ

ತಿಂಗಳ ಹಿಂದೆ ಇದೇ ರೀತಿಯ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ಸಹಿ ಹಾಕಿದ್ದರು. 2016 ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ ಮತ್ತು ವಿಶ್ವಸಾರ್ಹತೆಯ ಕೊರೆತೆಯಿದೆ ಎಂದು ಆರೋಪಿಸಿದ್ದರು.

ವರದಿಗಳ ಪ್ರಕಾರ, ಲಿಂಗಾಯತ ಸಮುದಾಯ ಸಿಎಂಗೆ ಕೊಟ್ಟಿರುವ ಮನವಿಯು ಜಾತಿ ಗಣತಿಯನ್ನು ವಿರೋಧಿಸಿಲ್ಲ. ಆದರೆ, 2015ರ ಜಾತಿ ಗಣತಿ ಅವೈಜ್ಞಾನಿಕವಾಗಿದೆ. ಅದು ಜನರ ಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ. ವರದಿಯು ರಾಜ್ಯದಲ್ಲಿ ಇರುವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಸರಿಯಾಗಿ ತೋರಿಸಿಲ್ಲ. ಜಾತಿ ಗಣತಿ ಲಿಂಗಾಯತ ಸಮುದಾಯದ ಉಪ ಜಾತಿಗಳ ನಡುವೆ ಬಿರುಕು ಮೂಡಿಸಿದೆ ಎಂದು ಹೇಳಿದೆ.

ಲಿಂಗಾಯತ ಸಮುದಾಯದ ಉಪ ಜಾತಿಗಳ ಬಗ್ಗೆ ಕ್ರಾಸ್ ವೆರಿಕಫಿಕೇಶನ್ ಮಾಡಿಲ್ಲ. ಜನರು ಹೇಳಿದ ಜಾತಿಯನ್ನು ಒಪ್ಪಿಕೊಂಡಿದೆ. ಈ ವರದಿ ಒಪ್ಪಿಕೊಳ್ಳುವುದರಿಂದ ಅರ್ಹ ಬಡವರು, ಹಿಂದುಳಿದವರು ಮತ್ತು ಮಧ್ಯಮ ವರ್ಗದ ವೀರಶೈವ ಲಿಂಗಾಯತರು ಅವರ ಮೀಸಲಾತಿ ಮತ್ತು ಇತರ ಪ್ರಯೋಜನಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

2015ರಲ್ಲಿ ಹೆಚ್.ಕಾಂತರಾಜು ಅವರು ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಗೆ ಚಾಲನೆ ನೀಡಿತ್ತು. ಈ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವೇ ಇರುವುದರಿಂದ ವರದಿಯನ್ನು ಸ್ವೀಕರಿಸಲು ಸರ್ಕಾರ ಮುಂದಾಗಿದೆ.

ಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ: ಹೆಚ್. ಕಾಂತರಾಜು ಸ್ಪಷ್ಟನೆ

ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವೈಜ್ಞಾನಿಕವಾಗಿದೆ. ಅದನ್ನುಅವೈಜ್ಞಾನಿಕ ಎನ್ನುವುದು ಸರಿಯಲ್ಲ ಎಂದು 25 ನವೆಂಬರ್ 2023ರಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜು ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು.

ವರದಿಯನ್ನು ನೋಡದೆ ಹೇಳಿಕೆ ನೀಡುವುದು ಸರಿಯಲ್ಲ. ವರದಿ ಬಿಡುಗಡೆಗೂ ಮೊದಲೇ ನಿರ್ಣಯ ಮಾಡುವುದು ಆಗಬಾರದು ಎಂದಿದ್ದರು.

ಓದಿ: ಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ: ಹೆಚ್. ಕಾಂತರಾಜು ಸ್ಪಷ್ಟನೆ

ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆ!

ಹೆಚ್.ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ದತ್ತಾಂಶ ಆಧರಿಸಿ ಸಿದ್ದಪಡಿಸಿದ್ದ ವರದಿಯ ಮೂಲ ಪ್ರತಿ (ಹಸ್ತಪ್ರತಿ) ಆಯೋಗದ ಕಚೇರಿಯಿಂದ ನಾಪತ್ತೆಯಾಗಿದೆ ಎಂಬ ವಿಚಾರ 23 ನವೆಂಬರ್ 2023 ರಂದು ಮುನ್ನಲೆಗೆ ಬಂದಿತ್ತು.

ಈ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಪತ್ರ ಬರೆದು, “2015 ರಲ್ಲಿ ಕರ್ನಾಟಕ ಸರ್ಕಾರ 180 ಕೋಟಿ ಖರ್ಚು ಮಾಡಿ ಮಾಡಿದ ಸಮೀಕ್ಷೆಯ ಮೂಲ ಪ್ರತಿಯೇ ಕಳೆದುಹೋಗಿರುವುದು ಹಾಗು ಲಭ್ಯವಿರುವ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯ ಸಹಿ ಇಲ್ಲದೆ ಇರುವುದು ಆಯೋಗದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದಿದದ್ದರು.

ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿ ನಂತರ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯನ್ನೇ ಅರ್ಧಕ್ಕೆ ಕೈಬಿಟ್ಟಿರುವುದು ಆಶ್ಚರ್ಯದ ಸಂಗತಿ. ಈ ಕೂಡಲೇ ವರದಿ ನೈಜತೆಯ ಬಗ್ಗೆ ತನಿಖೆ ಮಾಡಬೇಕು ಹಾಗು ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು.

ಓದಿ:ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆ!

ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧಿಸುತ್ತಿದ್ದಾರೆ; ನೀವು (ಬಿಜೆಪಿ) ವಿರೋಧಿಸುತ್ತಿದ್ದೀರಿ. ಬಲಿಷ್ಠ ಜಾತಿ ಜನರೆಲ್ಲಾ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 12ರಂದು ರಾಜ್ಯಸಭೆಯಲ್ಲಿ ಹೇಳಿದ್ದರು.

ಓದಿ: ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಡಿ.ಕೆ ಶಿವಕುಮಾರ್, ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಜಾತಿ ಗಣತಿ ಸಮೀಕ್ಷೆಯು ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಹೇಳಿದ್ದರು.

ಓದಿ: ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...