Homeಮುಖಪುಟಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೆಲವೇ ದಿನದ ಹಿಂದೆ ಜೊಮ್ಯಾಟೋ ಕೂಡಾ ತನ್ನ ಉದ್ಯೋಗಿಗಳ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ನಷ್ಟಕ್ಕೆ ತುತ್ತಾಗಿರುವುದರಿಂದ ಮುಂದಿನ ದಿನಗಳಲ್ಲಿ 1,100 ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು ಎಂದು ಆಹಾರ ವಿತರಣಾ ಕಂಪನಿ ಸ್ವಿಗ್ಗಿ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವುದನ್ನು ತಡೆಯಲು ಲಾಕ್‌ಡೌನ್‌ನ ನಾಲ್ಕನೇ ಹಂತಕ್ಕೆ ದೇಶ ಪ್ರವೇಶಿಸುತ್ತಿದ್ದಂತೆ ಸ್ವಿಗ್ಗಿಯಲ್ಲಿ ಉದ್ಯೋಗಿಗಳ ವಜಾಗೊಳಿಸುವ ಸುದ್ದಿ ಬರುತ್ತಿವೆ. “ದುರದೃಷ್ಟಕರವಾಗಿ ಉದ್ಯೋಗಿಗಳನ್ನು ಕಡಿಮೆಗೊಳಿಸುವ ಒತ್ತಡ ಎದುರಿಸಬೇಕಾಗಿರುವುದರಿಂದ ಇಂದು ಸ್ವಿಗ್ಗಿಗೆ ಅತ್ಯಂತ ದುಃಖದ ದಿನವಾಗಿದೆ” ಎಂದು ಸ್ವಿಗ್ಗಿ ಸಹ-ಸಂಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮಜೆಟಿ ಅವರು ಮೇ 18 ರಂದು ಕಂಪನಿಯ ಉದ್ಯೋಗಿಗಳಿಗೆ ಇಮೇಲ್‌ನಲ್ಲಿ ಬರೆದಿದ್ದಾರೆ ಎಂದು ಕಂಪನಿಯ ಬ್ಲಾಗ್ ವರದಿ ಮಾಡಿದೆ.

ಕೊರೊನಾ ಪ್ರಾರಂಭವಾದಾಗಿನಿಂದ ಕಂಪನಿಯು ತನ್ನ ಅಡುಗೆ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ವಜಾಗೊಳ್ಳುತ್ತಿರುವ ಸಂಖ್ಯೆಯೂ ಸ್ವಿಗ್ಗಿ ಕಂಪೆನಿಯ 14% ಸಿಬ್ಬಂದಿಗಳಷ್ಟಿದೆ.

ಕೆಲವೇ ದಿನದ ಹಿಂದೆ ಮತ್ತೊಂದು ರೆಸ್ಟೋರೆಂಟ್ ಅಗ್ರಿಗೇಟ್ ಕಂಪೆನಿ ಜೊಮ್ಯಾಟೋ ತನ್ನ ಉದ್ಯೋಗಿಗಳಲ್ಲಿ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

ಮುಂದಿನ ಕೆಲವು ದಿನಗಳಲ್ಲಿ ಕಂಪನಿಯ ಎಚ್‌ಆರ್‌ ತಂಡವು ಉದ್ಯೋಗ ಕಳೆದುಕೊಳ್ಳುವ ನೌಕರರನ್ನು ಸಂಪರ್ಕಿಸುತ್ತದೆ ಎಂದಿರುವ ಅವರು, ಉದ್ಯೋಗ ಕಳೆದುಕೊಳ್ಳುತ್ತಿರುವ ಸಿಬ್ಬಂದಿಗೆ ಸ್ವಿಗ್ಗಿ “ಉತ್ತಮ ಆರ್ಥಿಕ, ಭಾವನಾತ್ಮಕ ಮತ್ತು ವೃತ್ತಿ-ಸಂಬಂಧಿತ ಬೆಂಬಲವನ್ನು ಒದಗಿಸಲು ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಉದ್ಯೋಗಿಗಳಿಗೆ ಸ್ವಿಗ್ಗಿ ಕನಿಷ್ಠ ಮೂರು ತಿಂಗಳ ಸಂಬಳವನ್ನು ನೀಡುತ್ತದೆ. ಇದರ ಜೊತೆಗೆ, ಇಷ್ಟು ವರ್ಷ ಕೆಲಸ ಮಾಡಿದವರಿಗೆ ವರ್ಷಕ್ಕೆ ಒಂದು ತಿಂಗಳಿನಂತೆ ಸಂಬಳ ನೀಡಲಾಗುವುದು. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದು ಕಂಪನಿ ತಿಳಿಸಿದೆ.

ಈ ಉದ್ಯೋಗಿಗಳ ಕುಟುಂಬಗಳಿಗೆ ಅಸ್ತಿತ್ವದಲ್ಲಿರುವ ವೈದ್ಯಕೀಯ ವಿಮಾ ರಕ್ಷಣೆಯನ್ನು ಡಿಸೆಂಬರ್ 31, 2020 ರವರೆಗೆ ವಿಸ್ತರಿಸಿದೆ ಎಂದು ಕಂಪನಿ ತಿಳಿಸಿದೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...