Homeಮುಖಪುಟಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೆಲವೇ ದಿನದ ಹಿಂದೆ ಜೊಮ್ಯಾಟೋ ಕೂಡಾ ತನ್ನ ಉದ್ಯೋಗಿಗಳ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ನಷ್ಟಕ್ಕೆ ತುತ್ತಾಗಿರುವುದರಿಂದ ಮುಂದಿನ ದಿನಗಳಲ್ಲಿ 1,100 ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು ಎಂದು ಆಹಾರ ವಿತರಣಾ ಕಂಪನಿ ಸ್ವಿಗ್ಗಿ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವುದನ್ನು ತಡೆಯಲು ಲಾಕ್‌ಡೌನ್‌ನ ನಾಲ್ಕನೇ ಹಂತಕ್ಕೆ ದೇಶ ಪ್ರವೇಶಿಸುತ್ತಿದ್ದಂತೆ ಸ್ವಿಗ್ಗಿಯಲ್ಲಿ ಉದ್ಯೋಗಿಗಳ ವಜಾಗೊಳಿಸುವ ಸುದ್ದಿ ಬರುತ್ತಿವೆ. “ದುರದೃಷ್ಟಕರವಾಗಿ ಉದ್ಯೋಗಿಗಳನ್ನು ಕಡಿಮೆಗೊಳಿಸುವ ಒತ್ತಡ ಎದುರಿಸಬೇಕಾಗಿರುವುದರಿಂದ ಇಂದು ಸ್ವಿಗ್ಗಿಗೆ ಅತ್ಯಂತ ದುಃಖದ ದಿನವಾಗಿದೆ” ಎಂದು ಸ್ವಿಗ್ಗಿ ಸಹ-ಸಂಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮಜೆಟಿ ಅವರು ಮೇ 18 ರಂದು ಕಂಪನಿಯ ಉದ್ಯೋಗಿಗಳಿಗೆ ಇಮೇಲ್‌ನಲ್ಲಿ ಬರೆದಿದ್ದಾರೆ ಎಂದು ಕಂಪನಿಯ ಬ್ಲಾಗ್ ವರದಿ ಮಾಡಿದೆ.

ಕೊರೊನಾ ಪ್ರಾರಂಭವಾದಾಗಿನಿಂದ ಕಂಪನಿಯು ತನ್ನ ಅಡುಗೆ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ವಜಾಗೊಳ್ಳುತ್ತಿರುವ ಸಂಖ್ಯೆಯೂ ಸ್ವಿಗ್ಗಿ ಕಂಪೆನಿಯ 14% ಸಿಬ್ಬಂದಿಗಳಷ್ಟಿದೆ.

ಕೆಲವೇ ದಿನದ ಹಿಂದೆ ಮತ್ತೊಂದು ರೆಸ್ಟೋರೆಂಟ್ ಅಗ್ರಿಗೇಟ್ ಕಂಪೆನಿ ಜೊಮ್ಯಾಟೋ ತನ್ನ ಉದ್ಯೋಗಿಗಳಲ್ಲಿ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

ಮುಂದಿನ ಕೆಲವು ದಿನಗಳಲ್ಲಿ ಕಂಪನಿಯ ಎಚ್‌ಆರ್‌ ತಂಡವು ಉದ್ಯೋಗ ಕಳೆದುಕೊಳ್ಳುವ ನೌಕರರನ್ನು ಸಂಪರ್ಕಿಸುತ್ತದೆ ಎಂದಿರುವ ಅವರು, ಉದ್ಯೋಗ ಕಳೆದುಕೊಳ್ಳುತ್ತಿರುವ ಸಿಬ್ಬಂದಿಗೆ ಸ್ವಿಗ್ಗಿ “ಉತ್ತಮ ಆರ್ಥಿಕ, ಭಾವನಾತ್ಮಕ ಮತ್ತು ವೃತ್ತಿ-ಸಂಬಂಧಿತ ಬೆಂಬಲವನ್ನು ಒದಗಿಸಲು ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಉದ್ಯೋಗಿಗಳಿಗೆ ಸ್ವಿಗ್ಗಿ ಕನಿಷ್ಠ ಮೂರು ತಿಂಗಳ ಸಂಬಳವನ್ನು ನೀಡುತ್ತದೆ. ಇದರ ಜೊತೆಗೆ, ಇಷ್ಟು ವರ್ಷ ಕೆಲಸ ಮಾಡಿದವರಿಗೆ ವರ್ಷಕ್ಕೆ ಒಂದು ತಿಂಗಳಿನಂತೆ ಸಂಬಳ ನೀಡಲಾಗುವುದು. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದು ಕಂಪನಿ ತಿಳಿಸಿದೆ.

ಈ ಉದ್ಯೋಗಿಗಳ ಕುಟುಂಬಗಳಿಗೆ ಅಸ್ತಿತ್ವದಲ್ಲಿರುವ ವೈದ್ಯಕೀಯ ವಿಮಾ ರಕ್ಷಣೆಯನ್ನು ಡಿಸೆಂಬರ್ 31, 2020 ರವರೆಗೆ ವಿಸ್ತರಿಸಿದೆ ಎಂದು ಕಂಪನಿ ತಿಳಿಸಿದೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...