Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

- Advertisement -
- Advertisement -

ಕಲಬುರ್ಗಿ ಜಿಲ್ಲೆಯ ಅಫಜಲಪುರ ಅಷ್ಟೇನೂ ಅಭಿವೃದ್ಧಿ ಕಾಣದೆ, ಇಂದಿಗೂ ಮೂಲಭೂತ ಸೌಕರ‍್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಶುದ್ಧ ಕುಡಿಯುವ ನೀರನ್ನೇ ಕಾಣದ ಹತ್ತಾರು ಹಳ್ಳಿಗಳು ಇಂದಿಗೂ ಕ್ಷೇತ್ರದಲ್ಲಿವೆ. ಬಸ್ಸುಗಳೇ ಹೋಗದ, ರಸ್ತೆಗಳೇ ಇಲ್ಲದ ಹಳ್ಳಿಗಳೂ ಇವೆ. “ಉತ್ತಮ” ಶಿಕ್ಷಣ ಪಡೆಯಲು ಒಳ್ಳೆಯ ಸರ್ಕಾರಿ ಅಥವಾ ಖಾಸಗೀ ಸಂಸ್ಥೆಗಳೂ ಇಲ್ಲ. ಸೂರಿಲ್ಲ, ಉದ್ಯೋಗವಿಲ್ಲ ಹೀಗೆ ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಕಳೆದ 45 ವರ್ಷಗಳಿಂದ ಮಾಲೀಕಯ್ಯ ಗುತ್ತೇದಾರ್ ಮತ್ತು ಎಂ ವೈ ಪಾಟೀಲ್‌ರವರೇ ಕ್ಷೇತ್ರದ ಶಾಸಕರಾಗಿದ್ದು, ಜನರ ಕಷ್ಟಗಳಿಗೆ ಬೆನ್ನು ತಿರುಗಿಸಿರುವುದರಿಂದ ಈ ಸಮಸ್ಯೆಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಪರಿಹಾರ ಕಂಡುಕೊಳ್ಳಲು ಜನತೆ ಮುಂದಾಗಿದ್ದಾರೆ. ಇವರಿಬ್ಬರ ಆಡಳಿತದಿಂದ ಬೇಸೆತ್ತಿರುವ ಜನತೆ ಪಕ್ಷೇತರ ಅಭ್ಯರ್ಥಿ, ಹೊಸ ಮುಖ ನಿತಿನ್ ಗುತ್ತೇದಾರ್‌ ಕಡೆ ಮುಖ ಮಾಡಿದ್ದಾರೆ. ಇದರಿಂದ ಜನರ ಕಷ್ಟಗಳಿಗೆ ಪರಿಹಾರ ಸಿಗುತ್ತದೆಯೋ, ಬಿಡುತ್ತದೆಯೋ ಗೊತ್ತಿಲ್ಲ, ಆದರೆ ಜನರ ಸಿಟ್ಟಿಗೆ ಕ್ಷಣಿಕ ಪರಿಹಾರ ಸಿಗುವ ಸೂಚನೆಗಳು ಕಂಡುಬರುತ್ತಿವೆ.

ರಾಜಕೀಯ ಇತಿಹಾಸ

ಸಾಮಾನ್ಯ ಕ್ಷೇತ್ರವಾಗಿರುವ ಅಫಜಲಪುರ ಕಾಂಗ್ರೆಸ್‌ನ ಭದ್ರಕೋಟೆ ಅಂತಲೇ ಹೇಳಬಹುದು. ಇದುವರೆಗೆ ನಡೆದಿರುವ 15 ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ 10 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಜನತಾಪಕ್ಷದ ಇಬ್ಬರು, ಜೆಡಿಎಸ್ ಪಕ್ಷದಿಂದ ಇಬ್ಬರು ಮತ್ತು ಕೆಸಿಪಿಯಿಂದ ಒಬ್ಬ ಅಭ್ಯರ್ಥಿ ಜಯಗಳಿಸಿದ್ದಾರೆ. ವಿಶೇಷವೆಂದರೆ ಬಿಜೆಪಿ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಮೊದಲ ಚುನಾವಣೆಯಿಂದ 1978ರ ಚುನಾವಣೆವರೆಗೂ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಸತತವಾಗಿ ಜಯಗಳಿಸಿದ್ದರು. ಆದರೆ 1978ರಲ್ಲಿ ಮೊದಲ ಬಾರಿಗೆ ಲಿಂಗಾಯಿತ ಸಮುದಾಯದ ಎಂ ವೈ ಪಾಲೀಲ್ ಜನತಾ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಹನುಮಂತರಾವ್ ದೇಸಾಯಿಯವರನ್ನು ಮಣಿಸಿ ಗೆಲುವು ಸಾಧಿಸಿದ್ದರು. ಆದರೆ ಮುಂದಿನ 1983ರ ಚುನಾವಣೆಯಲ್ಲಿ ಜನತಾ ಪಕ್ಷ ಸೇರಿದ್ದ ಹನುಮಂತರಾವ್ ದೇಸಾಯಿ ಕಾಂಗ್ರೆಸ್‌ನಿಂದ ಕಣಕ್ಕಿಳಿದ ಎಂ.ವೈ ಪಾಟೀಲ್‌ರನ್ನು ಮಣಿಸಿದರು.

ಮಾಲಿಕಯ್ಯ ಗುತ್ತೇದಾರ್ ಆಳ್ವಿಕೆ

1985 ರಿಂದ ಮಾಲಿಕಯ್ಯ ಗುತ್ತೇದಾರ್‌ರವರ ಪಾರುಪತ್ಯ ಆರಂಭವಾಯಿತು. ಕ್ಷೇತ್ರದಲ್ಲಿ ಹೆಚ್ಚಿನ ಮತದಾರರಿಲ್ಲದ ಈಡಿಗ ಸಮುದಾಯದ ಅವರು 85 ಮತ್ತು 89ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಶಾಸಕರಾದರು. ನಂತರ 1994ರಲ್ಲಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು 1999ರಲ್ಲಿ ಜೆಡಿಎಸ್‌ನಿಂದ ಗೆದ್ದು ಸತತ ನಾಲ್ಕು ಬಾರಿಗೆ ಶಾಸಕರಾದರು.

2004ರಲ್ಲಿ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರಿದರು. ಅದರಿಂದಾಗಿ ಎಂ.ವೈ ಪಾಟೀಲ್ ಜೆಡಿಎಸ್ ಸೇರಿದರು. ಆ ಚುನಾವಣೆಯಲ್ಲಿ ಎಂ.ವೈ ಪಾಟೀಲ್ ಗೆಲುವು ಸಾಧಿಸುವ ಮೂಲಕ ಮಾಲಿಕಯ್ಯ ಗುತ್ತೇದಾರ್‌ರವರಿಗೆ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದರು.

ಆದರೆ 2008ರ ಚುನಾವಣೆ ವೇಳೆಗೆ ಮಾಲಿಕಯ್ಯ ಗುತ್ತೇದಾರ್ ಮತ್ತೆ ಕಾಂಗ್ರೆಸ್ ಸೇರಿದರೆ ಎಂ.ವೈ ಪಾಟೀಲ್ ಬಿಜೆಪಿ ಸೇರಿದರು. ಗೆಲುವಿನ ಹಳಿಗೆ ಮರಳಿದ ಮಾಲಿಕಯ್ಯ ಗುತ್ತೇದಾರ್ ಗೆಲುವು ಕಂಡರು. 2013ರಲ್ಲಿಯೂ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಕಂಡರೆ ಎಂ.ವೈ ಪಾಟೀಲ್ ಕೆಜೆಪಿ ಸೇರಿ ಸೋಲು ಕಂಡರು. ಮಲ್ಲಿಕಾರ್ಜುನ ಖರ್ಗೆ ಮತ್ತು ಧರ್ಮಸಿಂಗ್ ವಿರುದ್ಧ ಕಿಡಿಕಾರುತ್ತಿದ್ದ ಮಾಲಿಕಯ್ಯ ಗುತ್ತೇದಾರ್ 2018 ರ ಚುನಾವಣೆ ವೇಳೆಗೆ ಬಿಜೆಪಿ ಸೇರಿ ಸೋಲು ಕಂಡರು. ಅದೇ ಸಮಯಕ್ಕೆ ಎಂ.ವೈ ಪಾಟೀಲ್ ಕಾಂಗ್ರೆಸ್ ಸೇರಿ ಜಯ ಸಾಧಿಸಿದರು

ಅಂದಾಜು ಜಾತಿವಾರು ಮತಗಳು

ಅಫಜಲಪುರದಲ್ಲಿ ಒಟ್ಟು 2,25,000 ಮತಗಳಿವೆ. ಲಿಂಗಾಯಿತ ಸಮುದಾಯದ 48,000 ಮತಗಳಿದ್ದರೆ, 45,000 ದಷ್ಟು ಪ.ಜಾತಿಯ ಮತಗಳು ಕ್ಷೇತ್ರದಲ್ಲಿವೆ. ಕೋಲಿ/ಕಬ್ಬಲಿಗ ಸಮುದಾಯದ 44,000 ಮತಗಳು ಮತ್ತು ಮುಸ್ಲಿಂ ಸಮುದಾಯದ 40,000 ಮತಗಳಿದ್ದರೆ, ಕುರುಬ ಸಮುದಾಯದ 28,000 ಮತಗಳಿವೆ. ಇತರ ಸಮುದಾಯಗಳು ಸುಮಾರು 20,000 ದಷ್ಟು ಮತಗಳಿವೆ.

ಹಾಲಿ ಪರಿಸ್ಥಿತಿ

ಮೂರು ಬಾರಿ ಜಯ ಕಂಡಿರುವ ಲಿಂಗಾಯತ ಸಮುದಾಯದ ಎಂ.ವೈ ಪಾಟೀಲ್ ಜನತಾ ಪಕ್ಷ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಕೆಜೆಪಿ ಎಲ್ಲಾ ಪಕ್ಷಗಳನ್ನು ಸುತ್ತು ಹಾಕಿ ಸದ್ಯ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದಾರೆ. ಮತ್ತೆ ಕಾಂಗ್ರೆಸ್‌ನಿಂದಲೇ ಅಭ್ಯರ್ಥಿಯಾಗಿದ್ದಾರೆ. ಇನ್ನು ಆರು ಬಾರಿ ವಿಜಯ ಪತಾಕೆ ಹಾರಿಸಿರುವ ಈಡಿಗ ಸಮುದಾಯದ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್, ಕೆಸಿಪಿ, ಜೆಡಿಎಸ್‌ನಿಂದ ಗೆದ್ದು ಬಿಜೆಪಿ ಸೇರಿ ಸೋತಿದ್ದಾರೆ. ಸದ್ಯ ಅವರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಳೆದ 40 ವರ್ಷ ಇವರಿಬ್ಬರ ನಡುವೆಯೇ ಶಾಸಕ ಸ್ಥಾನ ಅದಲು ಬದಲಾಗುತ್ತಾ ಬಂದಿದೆ.

ಬಂಡಾಯಗಾರನ ಉದಯ

ಆದರೂ ಈ ಇಬ್ಬರಿಗೆ ಈ ಬಾರಿಯ ಚುನಾವಣೆ ಅಷ್ಟು ಸುಲಭವಲ್ಲ ಎನ್ನುವುದು ವಾಸ್ತವ. ಬಿಜೆಪಿಯೊಳಗಿನ ಬಂಡಾಯದ ಬಿಸಿ ಅಫಜಲಪುರಕ್ಕೂ ತಟ್ಟಿದೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರ ಸಹೋದರ ಮಾಜಿ ಜಿ.ಪಂ ಸದಸ್ಯ ನಿತಿನ್ ವಿ ಗುತ್ತೇದಾರ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ತೊಡೆ ತಟ್ಟಿದ್ದಾರೆ. ಮಾಲೀಕಯ್ಯ ಗುತ್ತೇದಾರ್‌ಗಿಂತಲೂ ಹೆಚ್ಚಿನ ಜನಪ್ರಿಯತೆ ಹೊಂದಿರುವ ನಿತಿನ್ ಗುತ್ತೇದಾರ್ ಪಕ್ಷೇತರರಾಗಿ ಕಣದಲ್ಲಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈಗಾಗಲೇ ಅಫಜಲಪುರ ಹಳ್ಳಿ-ಹಳ್ಳಿಗಳಲ್ಲಿ ನಿತಿನ್ ಗುತ್ತೇದಾರ್ ಪರವಾಗಿ ಜನರು ನೇರವಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಮತ್ತೊಂದು ಕಡೆ ಜೆಡಿಎಸ್ ಕೂಡ ತನ್ನ ಹಳೆಯ ಕ್ಷೇತ್ರವನ್ನು ಮರಳಿ ಗಳಿಸಿಕೊಳ್ಳುವ ಯತ್ನದಲ್ಲಿ ಗಟ್ಟಿಯಾಗಿ ನಿಂತಿದೆ. ಕೋಲಿ ಸಮುದಾಯದ ಶಿವಕುಮಾರ ನಾಟೀಕಾರ ಜೆಡಿಎಸ್ ಅಭ್ಯರ್ಥಿಯಾಗಿದ್ದು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಪಿಎಸ್‌ಐ ಹಗರಣದ ಆರೋಪಿಗಳಲ್ಲಿ ಒಬ್ಬರಾದ ಕೋಲಿ ಸಮುದಾಯದ ಆರ್ ಡಿ ಪಾಟೀಲ ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದಾರೆ. ಇವರಿಬ್ಬರಲ್ಲಿ ಯಾರು ಸಮುದಾಯದ ಮತಗಳನ್ನು ಸೆಳೆದುಕೊಳ್ಳಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದೆ.

2023ರ ಸಾಧ್ಯತೆಗಳು

82 ವರ್ಷದ ಶಾಸಕ ಎಂ.ವೈ ಪಾಟೀಲ್‌ರವರಿಗೆ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಆದರೆ ಜಾತಿ ಬಲ ಮತ್ತು ಬಿಜೆಪಿಯಲ್ಲಿನ ಒಳಜಗಳ ಬಂಡಾಯದ ಬಿಸಿ ಅವರಿಗೆ ವರವಾಗುವ ಸಾಧ್ಯತೆಯಿದೆ. ಇನ್ನೊಂದೆಡೆ ಬಿಜೆಪಿ ಪಕ್ಷವು ಇಲ್ಲಿ ಮಾಲೀಕಯ್ಯ ಗುತ್ತೇದಾರ್ ಬದಲಾಗಿ ಅವರ ಸಹೋದರ ನಿತಿನ್ ಗುತ್ತೇದಾರ್‌ರವರಿಗೆ ಟಿಕೆಟ್ ನೀಡಿದ್ದಲ್ಲಿ ಗೆದ್ದು ಖಾತೆ ತೆರೆಯುವ ಸುವರ್ಣ ಅವಕಾಶವಿತ್ತು. ಆದರೆ ಮತ್ತೆ ಮಾಲೀಕಯ್ಯ ಗುತ್ತೇದಾರ್‌ರವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಬಂಡಾಯಕ್ಕೆ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಅಣ್ಣ ತಮ್ಮಂದಿರ ಮತ ವಿಭಜನೆಯ ಲಾಭ ಕಾಂಗ್ರೆಸ್‌ಗೆ ಗೆಲುವಿನ ಅವಕಾಶ ತೆರೆಯಬಲ್ಲದು ಎಂಬುದು ಜನರ ಅಭಿಮತವಾಗಿದೆ.

ಇದನ್ನೂ ಓದಿ: ವಿರಾಜಪೇಟೆ: ಕೊಡವ v/s ಅರೆಭಾಷೆಗೌಡ ದಾಳದಲ್ಲಿ ಕಾಂಗ್ರೆಸ್ ಅರಳುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...