Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

- Advertisement -
- Advertisement -

ಕಲಬುರ್ಗಿ ಜಿಲ್ಲೆಯ ಅಫಜಲಪುರ ಅಷ್ಟೇನೂ ಅಭಿವೃದ್ಧಿ ಕಾಣದೆ, ಇಂದಿಗೂ ಮೂಲಭೂತ ಸೌಕರ‍್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಶುದ್ಧ ಕುಡಿಯುವ ನೀರನ್ನೇ ಕಾಣದ ಹತ್ತಾರು ಹಳ್ಳಿಗಳು ಇಂದಿಗೂ ಕ್ಷೇತ್ರದಲ್ಲಿವೆ. ಬಸ್ಸುಗಳೇ ಹೋಗದ, ರಸ್ತೆಗಳೇ ಇಲ್ಲದ ಹಳ್ಳಿಗಳೂ ಇವೆ. “ಉತ್ತಮ” ಶಿಕ್ಷಣ ಪಡೆಯಲು ಒಳ್ಳೆಯ ಸರ್ಕಾರಿ ಅಥವಾ ಖಾಸಗೀ ಸಂಸ್ಥೆಗಳೂ ಇಲ್ಲ. ಸೂರಿಲ್ಲ, ಉದ್ಯೋಗವಿಲ್ಲ ಹೀಗೆ ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಕಳೆದ 45 ವರ್ಷಗಳಿಂದ ಮಾಲೀಕಯ್ಯ ಗುತ್ತೇದಾರ್ ಮತ್ತು ಎಂ ವೈ ಪಾಟೀಲ್‌ರವರೇ ಕ್ಷೇತ್ರದ ಶಾಸಕರಾಗಿದ್ದು, ಜನರ ಕಷ್ಟಗಳಿಗೆ ಬೆನ್ನು ತಿರುಗಿಸಿರುವುದರಿಂದ ಈ ಸಮಸ್ಯೆಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಪರಿಹಾರ ಕಂಡುಕೊಳ್ಳಲು ಜನತೆ ಮುಂದಾಗಿದ್ದಾರೆ. ಇವರಿಬ್ಬರ ಆಡಳಿತದಿಂದ ಬೇಸೆತ್ತಿರುವ ಜನತೆ ಪಕ್ಷೇತರ ಅಭ್ಯರ್ಥಿ, ಹೊಸ ಮುಖ ನಿತಿನ್ ಗುತ್ತೇದಾರ್‌ ಕಡೆ ಮುಖ ಮಾಡಿದ್ದಾರೆ. ಇದರಿಂದ ಜನರ ಕಷ್ಟಗಳಿಗೆ ಪರಿಹಾರ ಸಿಗುತ್ತದೆಯೋ, ಬಿಡುತ್ತದೆಯೋ ಗೊತ್ತಿಲ್ಲ, ಆದರೆ ಜನರ ಸಿಟ್ಟಿಗೆ ಕ್ಷಣಿಕ ಪರಿಹಾರ ಸಿಗುವ ಸೂಚನೆಗಳು ಕಂಡುಬರುತ್ತಿವೆ.

ರಾಜಕೀಯ ಇತಿಹಾಸ

ಸಾಮಾನ್ಯ ಕ್ಷೇತ್ರವಾಗಿರುವ ಅಫಜಲಪುರ ಕಾಂಗ್ರೆಸ್‌ನ ಭದ್ರಕೋಟೆ ಅಂತಲೇ ಹೇಳಬಹುದು. ಇದುವರೆಗೆ ನಡೆದಿರುವ 15 ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ 10 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಜನತಾಪಕ್ಷದ ಇಬ್ಬರು, ಜೆಡಿಎಸ್ ಪಕ್ಷದಿಂದ ಇಬ್ಬರು ಮತ್ತು ಕೆಸಿಪಿಯಿಂದ ಒಬ್ಬ ಅಭ್ಯರ್ಥಿ ಜಯಗಳಿಸಿದ್ದಾರೆ. ವಿಶೇಷವೆಂದರೆ ಬಿಜೆಪಿ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಮೊದಲ ಚುನಾವಣೆಯಿಂದ 1978ರ ಚುನಾವಣೆವರೆಗೂ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಸತತವಾಗಿ ಜಯಗಳಿಸಿದ್ದರು. ಆದರೆ 1978ರಲ್ಲಿ ಮೊದಲ ಬಾರಿಗೆ ಲಿಂಗಾಯಿತ ಸಮುದಾಯದ ಎಂ ವೈ ಪಾಲೀಲ್ ಜನತಾ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಹನುಮಂತರಾವ್ ದೇಸಾಯಿಯವರನ್ನು ಮಣಿಸಿ ಗೆಲುವು ಸಾಧಿಸಿದ್ದರು. ಆದರೆ ಮುಂದಿನ 1983ರ ಚುನಾವಣೆಯಲ್ಲಿ ಜನತಾ ಪಕ್ಷ ಸೇರಿದ್ದ ಹನುಮಂತರಾವ್ ದೇಸಾಯಿ ಕಾಂಗ್ರೆಸ್‌ನಿಂದ ಕಣಕ್ಕಿಳಿದ ಎಂ.ವೈ ಪಾಟೀಲ್‌ರನ್ನು ಮಣಿಸಿದರು.

ಮಾಲಿಕಯ್ಯ ಗುತ್ತೇದಾರ್ ಆಳ್ವಿಕೆ

1985 ರಿಂದ ಮಾಲಿಕಯ್ಯ ಗುತ್ತೇದಾರ್‌ರವರ ಪಾರುಪತ್ಯ ಆರಂಭವಾಯಿತು. ಕ್ಷೇತ್ರದಲ್ಲಿ ಹೆಚ್ಚಿನ ಮತದಾರರಿಲ್ಲದ ಈಡಿಗ ಸಮುದಾಯದ ಅವರು 85 ಮತ್ತು 89ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಶಾಸಕರಾದರು. ನಂತರ 1994ರಲ್ಲಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು 1999ರಲ್ಲಿ ಜೆಡಿಎಸ್‌ನಿಂದ ಗೆದ್ದು ಸತತ ನಾಲ್ಕು ಬಾರಿಗೆ ಶಾಸಕರಾದರು.

2004ರಲ್ಲಿ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರಿದರು. ಅದರಿಂದಾಗಿ ಎಂ.ವೈ ಪಾಟೀಲ್ ಜೆಡಿಎಸ್ ಸೇರಿದರು. ಆ ಚುನಾವಣೆಯಲ್ಲಿ ಎಂ.ವೈ ಪಾಟೀಲ್ ಗೆಲುವು ಸಾಧಿಸುವ ಮೂಲಕ ಮಾಲಿಕಯ್ಯ ಗುತ್ತೇದಾರ್‌ರವರಿಗೆ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದರು.

ಆದರೆ 2008ರ ಚುನಾವಣೆ ವೇಳೆಗೆ ಮಾಲಿಕಯ್ಯ ಗುತ್ತೇದಾರ್ ಮತ್ತೆ ಕಾಂಗ್ರೆಸ್ ಸೇರಿದರೆ ಎಂ.ವೈ ಪಾಟೀಲ್ ಬಿಜೆಪಿ ಸೇರಿದರು. ಗೆಲುವಿನ ಹಳಿಗೆ ಮರಳಿದ ಮಾಲಿಕಯ್ಯ ಗುತ್ತೇದಾರ್ ಗೆಲುವು ಕಂಡರು. 2013ರಲ್ಲಿಯೂ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಕಂಡರೆ ಎಂ.ವೈ ಪಾಟೀಲ್ ಕೆಜೆಪಿ ಸೇರಿ ಸೋಲು ಕಂಡರು. ಮಲ್ಲಿಕಾರ್ಜುನ ಖರ್ಗೆ ಮತ್ತು ಧರ್ಮಸಿಂಗ್ ವಿರುದ್ಧ ಕಿಡಿಕಾರುತ್ತಿದ್ದ ಮಾಲಿಕಯ್ಯ ಗುತ್ತೇದಾರ್ 2018 ರ ಚುನಾವಣೆ ವೇಳೆಗೆ ಬಿಜೆಪಿ ಸೇರಿ ಸೋಲು ಕಂಡರು. ಅದೇ ಸಮಯಕ್ಕೆ ಎಂ.ವೈ ಪಾಟೀಲ್ ಕಾಂಗ್ರೆಸ್ ಸೇರಿ ಜಯ ಸಾಧಿಸಿದರು

ಅಂದಾಜು ಜಾತಿವಾರು ಮತಗಳು

ಅಫಜಲಪುರದಲ್ಲಿ ಒಟ್ಟು 2,25,000 ಮತಗಳಿವೆ. ಲಿಂಗಾಯಿತ ಸಮುದಾಯದ 48,000 ಮತಗಳಿದ್ದರೆ, 45,000 ದಷ್ಟು ಪ.ಜಾತಿಯ ಮತಗಳು ಕ್ಷೇತ್ರದಲ್ಲಿವೆ. ಕೋಲಿ/ಕಬ್ಬಲಿಗ ಸಮುದಾಯದ 44,000 ಮತಗಳು ಮತ್ತು ಮುಸ್ಲಿಂ ಸಮುದಾಯದ 40,000 ಮತಗಳಿದ್ದರೆ, ಕುರುಬ ಸಮುದಾಯದ 28,000 ಮತಗಳಿವೆ. ಇತರ ಸಮುದಾಯಗಳು ಸುಮಾರು 20,000 ದಷ್ಟು ಮತಗಳಿವೆ.

ಹಾಲಿ ಪರಿಸ್ಥಿತಿ

ಮೂರು ಬಾರಿ ಜಯ ಕಂಡಿರುವ ಲಿಂಗಾಯತ ಸಮುದಾಯದ ಎಂ.ವೈ ಪಾಟೀಲ್ ಜನತಾ ಪಕ್ಷ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಕೆಜೆಪಿ ಎಲ್ಲಾ ಪಕ್ಷಗಳನ್ನು ಸುತ್ತು ಹಾಕಿ ಸದ್ಯ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದಾರೆ. ಮತ್ತೆ ಕಾಂಗ್ರೆಸ್‌ನಿಂದಲೇ ಅಭ್ಯರ್ಥಿಯಾಗಿದ್ದಾರೆ. ಇನ್ನು ಆರು ಬಾರಿ ವಿಜಯ ಪತಾಕೆ ಹಾರಿಸಿರುವ ಈಡಿಗ ಸಮುದಾಯದ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್, ಕೆಸಿಪಿ, ಜೆಡಿಎಸ್‌ನಿಂದ ಗೆದ್ದು ಬಿಜೆಪಿ ಸೇರಿ ಸೋತಿದ್ದಾರೆ. ಸದ್ಯ ಅವರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಳೆದ 40 ವರ್ಷ ಇವರಿಬ್ಬರ ನಡುವೆಯೇ ಶಾಸಕ ಸ್ಥಾನ ಅದಲು ಬದಲಾಗುತ್ತಾ ಬಂದಿದೆ.

ಬಂಡಾಯಗಾರನ ಉದಯ

ಆದರೂ ಈ ಇಬ್ಬರಿಗೆ ಈ ಬಾರಿಯ ಚುನಾವಣೆ ಅಷ್ಟು ಸುಲಭವಲ್ಲ ಎನ್ನುವುದು ವಾಸ್ತವ. ಬಿಜೆಪಿಯೊಳಗಿನ ಬಂಡಾಯದ ಬಿಸಿ ಅಫಜಲಪುರಕ್ಕೂ ತಟ್ಟಿದೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರ ಸಹೋದರ ಮಾಜಿ ಜಿ.ಪಂ ಸದಸ್ಯ ನಿತಿನ್ ವಿ ಗುತ್ತೇದಾರ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ತೊಡೆ ತಟ್ಟಿದ್ದಾರೆ. ಮಾಲೀಕಯ್ಯ ಗುತ್ತೇದಾರ್‌ಗಿಂತಲೂ ಹೆಚ್ಚಿನ ಜನಪ್ರಿಯತೆ ಹೊಂದಿರುವ ನಿತಿನ್ ಗುತ್ತೇದಾರ್ ಪಕ್ಷೇತರರಾಗಿ ಕಣದಲ್ಲಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈಗಾಗಲೇ ಅಫಜಲಪುರ ಹಳ್ಳಿ-ಹಳ್ಳಿಗಳಲ್ಲಿ ನಿತಿನ್ ಗುತ್ತೇದಾರ್ ಪರವಾಗಿ ಜನರು ನೇರವಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಮತ್ತೊಂದು ಕಡೆ ಜೆಡಿಎಸ್ ಕೂಡ ತನ್ನ ಹಳೆಯ ಕ್ಷೇತ್ರವನ್ನು ಮರಳಿ ಗಳಿಸಿಕೊಳ್ಳುವ ಯತ್ನದಲ್ಲಿ ಗಟ್ಟಿಯಾಗಿ ನಿಂತಿದೆ. ಕೋಲಿ ಸಮುದಾಯದ ಶಿವಕುಮಾರ ನಾಟೀಕಾರ ಜೆಡಿಎಸ್ ಅಭ್ಯರ್ಥಿಯಾಗಿದ್ದು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಪಿಎಸ್‌ಐ ಹಗರಣದ ಆರೋಪಿಗಳಲ್ಲಿ ಒಬ್ಬರಾದ ಕೋಲಿ ಸಮುದಾಯದ ಆರ್ ಡಿ ಪಾಟೀಲ ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದಾರೆ. ಇವರಿಬ್ಬರಲ್ಲಿ ಯಾರು ಸಮುದಾಯದ ಮತಗಳನ್ನು ಸೆಳೆದುಕೊಳ್ಳಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದೆ.

2023ರ ಸಾಧ್ಯತೆಗಳು

82 ವರ್ಷದ ಶಾಸಕ ಎಂ.ವೈ ಪಾಟೀಲ್‌ರವರಿಗೆ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಆದರೆ ಜಾತಿ ಬಲ ಮತ್ತು ಬಿಜೆಪಿಯಲ್ಲಿನ ಒಳಜಗಳ ಬಂಡಾಯದ ಬಿಸಿ ಅವರಿಗೆ ವರವಾಗುವ ಸಾಧ್ಯತೆಯಿದೆ. ಇನ್ನೊಂದೆಡೆ ಬಿಜೆಪಿ ಪಕ್ಷವು ಇಲ್ಲಿ ಮಾಲೀಕಯ್ಯ ಗುತ್ತೇದಾರ್ ಬದಲಾಗಿ ಅವರ ಸಹೋದರ ನಿತಿನ್ ಗುತ್ತೇದಾರ್‌ರವರಿಗೆ ಟಿಕೆಟ್ ನೀಡಿದ್ದಲ್ಲಿ ಗೆದ್ದು ಖಾತೆ ತೆರೆಯುವ ಸುವರ್ಣ ಅವಕಾಶವಿತ್ತು. ಆದರೆ ಮತ್ತೆ ಮಾಲೀಕಯ್ಯ ಗುತ್ತೇದಾರ್‌ರವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಬಂಡಾಯಕ್ಕೆ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಅಣ್ಣ ತಮ್ಮಂದಿರ ಮತ ವಿಭಜನೆಯ ಲಾಭ ಕಾಂಗ್ರೆಸ್‌ಗೆ ಗೆಲುವಿನ ಅವಕಾಶ ತೆರೆಯಬಲ್ಲದು ಎಂಬುದು ಜನರ ಅಭಿಮತವಾಗಿದೆ.

ಇದನ್ನೂ ಓದಿ: ವಿರಾಜಪೇಟೆ: ಕೊಡವ v/s ಅರೆಭಾಷೆಗೌಡ ದಾಳದಲ್ಲಿ ಕಾಂಗ್ರೆಸ್ ಅರಳುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...