Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

- Advertisement -
- Advertisement -

ಕಲಬುರ್ಗಿ ಜಿಲ್ಲೆಯ ಅಫಜಲಪುರ ಅಷ್ಟೇನೂ ಅಭಿವೃದ್ಧಿ ಕಾಣದೆ, ಇಂದಿಗೂ ಮೂಲಭೂತ ಸೌಕರ‍್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಶುದ್ಧ ಕುಡಿಯುವ ನೀರನ್ನೇ ಕಾಣದ ಹತ್ತಾರು ಹಳ್ಳಿಗಳು ಇಂದಿಗೂ ಕ್ಷೇತ್ರದಲ್ಲಿವೆ. ಬಸ್ಸುಗಳೇ ಹೋಗದ, ರಸ್ತೆಗಳೇ ಇಲ್ಲದ ಹಳ್ಳಿಗಳೂ ಇವೆ. “ಉತ್ತಮ” ಶಿಕ್ಷಣ ಪಡೆಯಲು ಒಳ್ಳೆಯ ಸರ್ಕಾರಿ ಅಥವಾ ಖಾಸಗೀ ಸಂಸ್ಥೆಗಳೂ ಇಲ್ಲ. ಸೂರಿಲ್ಲ, ಉದ್ಯೋಗವಿಲ್ಲ ಹೀಗೆ ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಕಳೆದ 45 ವರ್ಷಗಳಿಂದ ಮಾಲೀಕಯ್ಯ ಗುತ್ತೇದಾರ್ ಮತ್ತು ಎಂ ವೈ ಪಾಟೀಲ್‌ರವರೇ ಕ್ಷೇತ್ರದ ಶಾಸಕರಾಗಿದ್ದು, ಜನರ ಕಷ್ಟಗಳಿಗೆ ಬೆನ್ನು ತಿರುಗಿಸಿರುವುದರಿಂದ ಈ ಸಮಸ್ಯೆಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಪರಿಹಾರ ಕಂಡುಕೊಳ್ಳಲು ಜನತೆ ಮುಂದಾಗಿದ್ದಾರೆ. ಇವರಿಬ್ಬರ ಆಡಳಿತದಿಂದ ಬೇಸೆತ್ತಿರುವ ಜನತೆ ಪಕ್ಷೇತರ ಅಭ್ಯರ್ಥಿ, ಹೊಸ ಮುಖ ನಿತಿನ್ ಗುತ್ತೇದಾರ್‌ ಕಡೆ ಮುಖ ಮಾಡಿದ್ದಾರೆ. ಇದರಿಂದ ಜನರ ಕಷ್ಟಗಳಿಗೆ ಪರಿಹಾರ ಸಿಗುತ್ತದೆಯೋ, ಬಿಡುತ್ತದೆಯೋ ಗೊತ್ತಿಲ್ಲ, ಆದರೆ ಜನರ ಸಿಟ್ಟಿಗೆ ಕ್ಷಣಿಕ ಪರಿಹಾರ ಸಿಗುವ ಸೂಚನೆಗಳು ಕಂಡುಬರುತ್ತಿವೆ.

ರಾಜಕೀಯ ಇತಿಹಾಸ

ಸಾಮಾನ್ಯ ಕ್ಷೇತ್ರವಾಗಿರುವ ಅಫಜಲಪುರ ಕಾಂಗ್ರೆಸ್‌ನ ಭದ್ರಕೋಟೆ ಅಂತಲೇ ಹೇಳಬಹುದು. ಇದುವರೆಗೆ ನಡೆದಿರುವ 15 ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ 10 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಜನತಾಪಕ್ಷದ ಇಬ್ಬರು, ಜೆಡಿಎಸ್ ಪಕ್ಷದಿಂದ ಇಬ್ಬರು ಮತ್ತು ಕೆಸಿಪಿಯಿಂದ ಒಬ್ಬ ಅಭ್ಯರ್ಥಿ ಜಯಗಳಿಸಿದ್ದಾರೆ. ವಿಶೇಷವೆಂದರೆ ಬಿಜೆಪಿ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಮೊದಲ ಚುನಾವಣೆಯಿಂದ 1978ರ ಚುನಾವಣೆವರೆಗೂ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಸತತವಾಗಿ ಜಯಗಳಿಸಿದ್ದರು. ಆದರೆ 1978ರಲ್ಲಿ ಮೊದಲ ಬಾರಿಗೆ ಲಿಂಗಾಯಿತ ಸಮುದಾಯದ ಎಂ ವೈ ಪಾಲೀಲ್ ಜನತಾ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಹನುಮಂತರಾವ್ ದೇಸಾಯಿಯವರನ್ನು ಮಣಿಸಿ ಗೆಲುವು ಸಾಧಿಸಿದ್ದರು. ಆದರೆ ಮುಂದಿನ 1983ರ ಚುನಾವಣೆಯಲ್ಲಿ ಜನತಾ ಪಕ್ಷ ಸೇರಿದ್ದ ಹನುಮಂತರಾವ್ ದೇಸಾಯಿ ಕಾಂಗ್ರೆಸ್‌ನಿಂದ ಕಣಕ್ಕಿಳಿದ ಎಂ.ವೈ ಪಾಟೀಲ್‌ರನ್ನು ಮಣಿಸಿದರು.

ಮಾಲಿಕಯ್ಯ ಗುತ್ತೇದಾರ್ ಆಳ್ವಿಕೆ

1985 ರಿಂದ ಮಾಲಿಕಯ್ಯ ಗುತ್ತೇದಾರ್‌ರವರ ಪಾರುಪತ್ಯ ಆರಂಭವಾಯಿತು. ಕ್ಷೇತ್ರದಲ್ಲಿ ಹೆಚ್ಚಿನ ಮತದಾರರಿಲ್ಲದ ಈಡಿಗ ಸಮುದಾಯದ ಅವರು 85 ಮತ್ತು 89ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಶಾಸಕರಾದರು. ನಂತರ 1994ರಲ್ಲಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು 1999ರಲ್ಲಿ ಜೆಡಿಎಸ್‌ನಿಂದ ಗೆದ್ದು ಸತತ ನಾಲ್ಕು ಬಾರಿಗೆ ಶಾಸಕರಾದರು.

2004ರಲ್ಲಿ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರಿದರು. ಅದರಿಂದಾಗಿ ಎಂ.ವೈ ಪಾಟೀಲ್ ಜೆಡಿಎಸ್ ಸೇರಿದರು. ಆ ಚುನಾವಣೆಯಲ್ಲಿ ಎಂ.ವೈ ಪಾಟೀಲ್ ಗೆಲುವು ಸಾಧಿಸುವ ಮೂಲಕ ಮಾಲಿಕಯ್ಯ ಗುತ್ತೇದಾರ್‌ರವರಿಗೆ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದರು.

ಆದರೆ 2008ರ ಚುನಾವಣೆ ವೇಳೆಗೆ ಮಾಲಿಕಯ್ಯ ಗುತ್ತೇದಾರ್ ಮತ್ತೆ ಕಾಂಗ್ರೆಸ್ ಸೇರಿದರೆ ಎಂ.ವೈ ಪಾಟೀಲ್ ಬಿಜೆಪಿ ಸೇರಿದರು. ಗೆಲುವಿನ ಹಳಿಗೆ ಮರಳಿದ ಮಾಲಿಕಯ್ಯ ಗುತ್ತೇದಾರ್ ಗೆಲುವು ಕಂಡರು. 2013ರಲ್ಲಿಯೂ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಕಂಡರೆ ಎಂ.ವೈ ಪಾಟೀಲ್ ಕೆಜೆಪಿ ಸೇರಿ ಸೋಲು ಕಂಡರು. ಮಲ್ಲಿಕಾರ್ಜುನ ಖರ್ಗೆ ಮತ್ತು ಧರ್ಮಸಿಂಗ್ ವಿರುದ್ಧ ಕಿಡಿಕಾರುತ್ತಿದ್ದ ಮಾಲಿಕಯ್ಯ ಗುತ್ತೇದಾರ್ 2018 ರ ಚುನಾವಣೆ ವೇಳೆಗೆ ಬಿಜೆಪಿ ಸೇರಿ ಸೋಲು ಕಂಡರು. ಅದೇ ಸಮಯಕ್ಕೆ ಎಂ.ವೈ ಪಾಟೀಲ್ ಕಾಂಗ್ರೆಸ್ ಸೇರಿ ಜಯ ಸಾಧಿಸಿದರು

ಅಂದಾಜು ಜಾತಿವಾರು ಮತಗಳು

ಅಫಜಲಪುರದಲ್ಲಿ ಒಟ್ಟು 2,25,000 ಮತಗಳಿವೆ. ಲಿಂಗಾಯಿತ ಸಮುದಾಯದ 48,000 ಮತಗಳಿದ್ದರೆ, 45,000 ದಷ್ಟು ಪ.ಜಾತಿಯ ಮತಗಳು ಕ್ಷೇತ್ರದಲ್ಲಿವೆ. ಕೋಲಿ/ಕಬ್ಬಲಿಗ ಸಮುದಾಯದ 44,000 ಮತಗಳು ಮತ್ತು ಮುಸ್ಲಿಂ ಸಮುದಾಯದ 40,000 ಮತಗಳಿದ್ದರೆ, ಕುರುಬ ಸಮುದಾಯದ 28,000 ಮತಗಳಿವೆ. ಇತರ ಸಮುದಾಯಗಳು ಸುಮಾರು 20,000 ದಷ್ಟು ಮತಗಳಿವೆ.

ಹಾಲಿ ಪರಿಸ್ಥಿತಿ

ಮೂರು ಬಾರಿ ಜಯ ಕಂಡಿರುವ ಲಿಂಗಾಯತ ಸಮುದಾಯದ ಎಂ.ವೈ ಪಾಟೀಲ್ ಜನತಾ ಪಕ್ಷ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಕೆಜೆಪಿ ಎಲ್ಲಾ ಪಕ್ಷಗಳನ್ನು ಸುತ್ತು ಹಾಕಿ ಸದ್ಯ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದಾರೆ. ಮತ್ತೆ ಕಾಂಗ್ರೆಸ್‌ನಿಂದಲೇ ಅಭ್ಯರ್ಥಿಯಾಗಿದ್ದಾರೆ. ಇನ್ನು ಆರು ಬಾರಿ ವಿಜಯ ಪತಾಕೆ ಹಾರಿಸಿರುವ ಈಡಿಗ ಸಮುದಾಯದ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್, ಕೆಸಿಪಿ, ಜೆಡಿಎಸ್‌ನಿಂದ ಗೆದ್ದು ಬಿಜೆಪಿ ಸೇರಿ ಸೋತಿದ್ದಾರೆ. ಸದ್ಯ ಅವರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಳೆದ 40 ವರ್ಷ ಇವರಿಬ್ಬರ ನಡುವೆಯೇ ಶಾಸಕ ಸ್ಥಾನ ಅದಲು ಬದಲಾಗುತ್ತಾ ಬಂದಿದೆ.

ಬಂಡಾಯಗಾರನ ಉದಯ

ಆದರೂ ಈ ಇಬ್ಬರಿಗೆ ಈ ಬಾರಿಯ ಚುನಾವಣೆ ಅಷ್ಟು ಸುಲಭವಲ್ಲ ಎನ್ನುವುದು ವಾಸ್ತವ. ಬಿಜೆಪಿಯೊಳಗಿನ ಬಂಡಾಯದ ಬಿಸಿ ಅಫಜಲಪುರಕ್ಕೂ ತಟ್ಟಿದೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರ ಸಹೋದರ ಮಾಜಿ ಜಿ.ಪಂ ಸದಸ್ಯ ನಿತಿನ್ ವಿ ಗುತ್ತೇದಾರ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ತೊಡೆ ತಟ್ಟಿದ್ದಾರೆ. ಮಾಲೀಕಯ್ಯ ಗುತ್ತೇದಾರ್‌ಗಿಂತಲೂ ಹೆಚ್ಚಿನ ಜನಪ್ರಿಯತೆ ಹೊಂದಿರುವ ನಿತಿನ್ ಗುತ್ತೇದಾರ್ ಪಕ್ಷೇತರರಾಗಿ ಕಣದಲ್ಲಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈಗಾಗಲೇ ಅಫಜಲಪುರ ಹಳ್ಳಿ-ಹಳ್ಳಿಗಳಲ್ಲಿ ನಿತಿನ್ ಗುತ್ತೇದಾರ್ ಪರವಾಗಿ ಜನರು ನೇರವಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಮತ್ತೊಂದು ಕಡೆ ಜೆಡಿಎಸ್ ಕೂಡ ತನ್ನ ಹಳೆಯ ಕ್ಷೇತ್ರವನ್ನು ಮರಳಿ ಗಳಿಸಿಕೊಳ್ಳುವ ಯತ್ನದಲ್ಲಿ ಗಟ್ಟಿಯಾಗಿ ನಿಂತಿದೆ. ಕೋಲಿ ಸಮುದಾಯದ ಶಿವಕುಮಾರ ನಾಟೀಕಾರ ಜೆಡಿಎಸ್ ಅಭ್ಯರ್ಥಿಯಾಗಿದ್ದು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಪಿಎಸ್‌ಐ ಹಗರಣದ ಆರೋಪಿಗಳಲ್ಲಿ ಒಬ್ಬರಾದ ಕೋಲಿ ಸಮುದಾಯದ ಆರ್ ಡಿ ಪಾಟೀಲ ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದಾರೆ. ಇವರಿಬ್ಬರಲ್ಲಿ ಯಾರು ಸಮುದಾಯದ ಮತಗಳನ್ನು ಸೆಳೆದುಕೊಳ್ಳಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದೆ.

2023ರ ಸಾಧ್ಯತೆಗಳು

82 ವರ್ಷದ ಶಾಸಕ ಎಂ.ವೈ ಪಾಟೀಲ್‌ರವರಿಗೆ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಆದರೆ ಜಾತಿ ಬಲ ಮತ್ತು ಬಿಜೆಪಿಯಲ್ಲಿನ ಒಳಜಗಳ ಬಂಡಾಯದ ಬಿಸಿ ಅವರಿಗೆ ವರವಾಗುವ ಸಾಧ್ಯತೆಯಿದೆ. ಇನ್ನೊಂದೆಡೆ ಬಿಜೆಪಿ ಪಕ್ಷವು ಇಲ್ಲಿ ಮಾಲೀಕಯ್ಯ ಗುತ್ತೇದಾರ್ ಬದಲಾಗಿ ಅವರ ಸಹೋದರ ನಿತಿನ್ ಗುತ್ತೇದಾರ್‌ರವರಿಗೆ ಟಿಕೆಟ್ ನೀಡಿದ್ದಲ್ಲಿ ಗೆದ್ದು ಖಾತೆ ತೆರೆಯುವ ಸುವರ್ಣ ಅವಕಾಶವಿತ್ತು. ಆದರೆ ಮತ್ತೆ ಮಾಲೀಕಯ್ಯ ಗುತ್ತೇದಾರ್‌ರವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಬಂಡಾಯಕ್ಕೆ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಅಣ್ಣ ತಮ್ಮಂದಿರ ಮತ ವಿಭಜನೆಯ ಲಾಭ ಕಾಂಗ್ರೆಸ್‌ಗೆ ಗೆಲುವಿನ ಅವಕಾಶ ತೆರೆಯಬಲ್ಲದು ಎಂಬುದು ಜನರ ಅಭಿಮತವಾಗಿದೆ.

ಇದನ್ನೂ ಓದಿ: ವಿರಾಜಪೇಟೆ: ಕೊಡವ v/s ಅರೆಭಾಷೆಗೌಡ ದಾಳದಲ್ಲಿ ಕಾಂಗ್ರೆಸ್ ಅರಳುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...