Homeಮುಖಪುಟಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿಮಾನ ನಿಲ್ದಾಣದಲ್ಲಿನ ಅಧಿಕಾರಿಯೊಬ್ಬರು ನಾನು ಹಿಂದಿಯಲ್ಲಿ ಮಾತನಾಡದ ಕಾರಣಕ್ಕೆ ‘ನೀವು ಭಾರತೀಯರೆ’ ಎಂದು ಪ್ರಶ್ನಿಸಿದ್ದಾರೆ. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ? ಇದು ಯಾವಾಗಿನಿಂದ ಆಗಿದೆ ಎಂದು ತಮಿಳುನಾಡಿ ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನಿಸಿದ ಬೆನ್ನಲ್ಲೇ ಹಿಂದಿ ಹೇರಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಕುರಿತು ಕರ್ನಾಟಕದಲ್ಲಿಯೂ ಚರ್ಚೆಗಳು ಆರಂಭವಾಗಿದ್ದು, ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ “ಭಾಷೆ ಕಾರಣಕ್ಕೆ ಡಿಎಂಕೆ ಸಂಸದೆ ಕನಿಮೊಳಿಯವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೊಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ” ಎಂದಿದ್ದಾರೆ.

ಇಂಥದ್ದೇ ಅನುಭವ ನನಗೂ ಆಗಿವೆ. ನಾನೂ 2 ಬಾರಿ ಸಂಸದನಾಗಿದ್ದವನು. ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ, ಸಮಾನ ಭಾಷಾ ನೀತಿಗಾಗಿ, ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶದ ಪ್ರತಿಯೊಬ್ಬ ಪ್ರಜೆಯು ತನ್ನ ಭಾಷೆಯಲ್ಲಿ ಮಾಹಿತಿಯನ್ನು ಪಡೆಯುವುದು ಅವನ/ಳ ಮೂಲಭೂತ ಹಕ್ಕು. ಜನರ ಭಾಷೆಯಲ್ಲಿ ಮಾಹಿತಿ ಪಡೆಯುವುದಕ್ಕೆ ಕಾನೂನು ಬೇಕು, ಹೋರಾಟ ಬೇಕು ಎಂದರೆ ಅದು ಪ್ರಜಾಪ್ರಭುತ್ವ ದೇಶವೇ? ಹೈಕೋರ್ಟ್ ಮೂರು ಬಾರಿ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ನೀಡಿದೆ ಎಂದು ಆದೇಶ ನೀಡಿದರೂ ಕೇಂದ್ರ ಸರ್ಕಾರ ವಿಧಿ 343ರ ಅಡಿಯಲ್ಲಿ ನಾವು ಮಾಹಿತಿ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ವಿಧಿ 343 ರಿಂದ 351 ರವರೆಗೆ ಹಿಂದಿ ಭಾಷೆಗೆ ಹೆಚ್ಚುಗಾರಿಕೆ ನೀಡಲಾಗಿದೆ. ಅಲ್ಲಿಂದಲೇ ಇತರ ಭಾಷೆಗಳ ಕಡೆಗಣಿಸುವಿಕೆ ಆರಂಭವಾಗಿದೆ. ಇದು ಹಿಂದಿಯೇತರರನ್ನು ತಮ್ಮ ಅಡಿಯಾಳನ್ನಾಗಿ ಮಾಡಿಕೊಳ್ಳುವ ಉತ್ತರ ಭಾರತ ರಾಜಕೀಯದ ಸ್ಪಷ್ಟ ಹುನ್ನಾರ. ಹಾಗಾಗಿ ಹಿಂದಿಯೇತರ ಸಂಸದರು ಈ ವಿಧಿಗಳ ತಿದ್ದುಪಡಿಗೆ ಹೋರಾಡುವುದೊಂದೆ ಶಾಶ್ವತ ಪರಿಹಾರ” ಎಂದಿದ್ದಾರೆ.

ಏಕತೆ ಎಂಬುದು ಭಾಷಾ ಸಮಾನತೆಯಲ್ಲಿದೆ. ಹಿಂದಿ ಹೇರಿಕೆಯಲ್ಲಿಲ್ಲ ಎಂಬ ಪೋಸ್ಟರ್

ಇನ್ನು ಈ ಕುರಿತು ಇಂದು ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪಿ ಚಿದಂಬರಂ ಸರಣಿ ಟ್ವೀಟ್‌ಗಳನ್ನು ಮಾಡಿ ‘ಚನ್ನೈ ವಿಮಾನ ನಿಲ್ದಾಣದಲ್ಲಿ ಕನಿಮೊಳಿಯವರಿಗಾಗಿರುವ ಈ ಅಹಿತಕರ ಅನುಭವವು ಸಾಮಾನ್ಯವಾದುದ್ದಲ್ಲ’ ಎಂದಿದ್ದಾರೆ.

ಕೆಲವು ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ, ಕೆಲವು ಸಾಮಾನ್ಯ ಜನರೊಂದಿಗೆ ಫೋನಿನಲ್ಲಿ ಮಾತನಾಡುವಾಗ, ಕೆಲವೊಮ್ಮೆ ನೇರವಾಗಿಯೂ ಹಿಂದಿಯಲ್ಲಿಯೇ ಮಾತನಾಡುವಂತೆ ಒತ್ತಡ ಹಾಕುವ ಇದೇ ರೀತಿಯ ಹಲವು ಅಹಿತಕರ ಅನುಭವಗಳು ನನಗೂ ಆಗಿವೆ ಎಂದು ಚಿದಂಬರಂ ತಿಳಿಸಿದ್ದಾರೆ.

ಭಾನುವಾರ ಚನ್ನೈ ವಿಮಾನ ನಿಲ್ದಾಣದಲ್ಲಿ ತನಗೆ ಹಿಂದಿ ಬಾರದ ಕಾರಣ ಇಂಗ್ಲಿಷ್ ಇಲ್ಲವೇ ತಮಿಳಿನಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ನೀವು ಭಾರತೀಯರೆ ಎಂದು ಸಿಐಎಸ್ಎ‌ಫ್ ಭದ್ರತಾ ಅಧಿಕಾರಿ ಪ್ರಶ್ನಿಸಿದ್ದಾರೆ ಎಂದು ಡಿಎಂಕೆ ಸಂಸದೆ ಕನಿಮೊಳಿ ಆರೋಪಿಸಿದ್ದರು. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ ಎಂದು ಅವರು ಕಿಡಿಕಾರಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಪಿ.ಚಿದಂಬರಂ ಸರ್ಕಾರವು ತನ್ನ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಸಲಹೆ ನೀಡಿದ್ದಾರೆ.

ಉತ್ತರ ಭಾರತದಲ್ಲಿ ಹಿಂದಿ ಹೇರಿಕೆಯ ವಿರುದ್ಧ ದನಿ.

ಕೇಂದ್ರ ಸರ್ಕಾರಕ್ಕೆ ಹಿಂದಿ ಮತ್ತು ಇಂಗ್ಲಿಷ್ ಎರಡೂ ಅಧಿಕೃತ ಭಾಷೆಗಳೆಂಬ ನಿಜವಾದ ಕಾಳಜಿಯಿದ್ದರೆ ಅದು ಕೇಂದ್ರದ ಅಡಿಯಲ್ಲಿ ಬರುವ ಎಲ್ಲಾ ಉದ್ಯೋಗಿಗಳಿಗೂ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಹಿಂದಿಯೇತರರು ಕೇಂದ್ರೀಯ ಹುದ್ದೆಗಳಿಗೆ ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಸ್ಪೋಕನ್ ಹಿಂದಿಯನ್ನು ಕೂಡಲೇ ಕಲಿತುಕೊಳ್ಳುತ್ತಾರೆ. ಆದರೆ ಹಿಂದಿ ಭಾಷಿಕರು ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಇತರ ಭಾಷೆಗಳನ್ನು, ಸ್ಪೋಕನ್ ಇಂಗ್ಲಿಷ್‌ ಅನ್ನು ಕಲಿಯಬಾರದೇಕೆ?” ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಈ ಸಮಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದನಿಯೆದ್ದಿದೆ. “ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ, ಬಂಗಾಳಿ ಭಾಷೆಯನ್ನು ಗೌರವಿಸಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ” ಎನ್ನುವ ಪೋಸ್ಟರ್‌ ಇರುವ ಫೋಟೊವೊಂದು ವೈರಲ್ ಆಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಪೋಸ್ಟರ್‌ಗಳನ್ನು ಅಂಟಿಸಬೇಕು, ಕನ್ನಡವನ್ನು ಗೌರವಿಸಿ, ಇಲ್ಲ ಜಾಗ ಖಾಲಿ ಮಾಡಿ ಎಂದು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.

ಇನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೊಷ್ ಹಿಂದಿ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಕನಿಮೊಳಿಯವರಿಗೆ ತೀಕ್ಷ್ಣ ಪ್ರತಿಕ್ರಿಯೆ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಮೀಕರಿಸಿರುವ ಅವರು, ಇನ್ನು 8 ತಿಂಗಳಿನಲ್ಲಿ ರಾಜ್ಯ ಚುನಾವಣೆಯಿದೆ… ಆಗಲೇ ಪ್ರಚಾರ ಆರಂಭವಾಗಿದೆ.. ಎಂದು ಟೀಕಿಸಿದ್ದಾರೆ.

ಕಳೆದ ವರ್ಷ ಕರ್ನಾಟಕದಲ್ಲಿ ಸೆಪ್ಟಂಬರ್ 14 ರಂದು ಹಿಂದಿ ದಿವಸ್ ವಿರೋದಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟಿಸಿರುವುದು.

ಒಟ್ಟಿನಲ್ಲಿ ಹಿಂದಿ ಹೇರಿಕೆ ಸರಿಯೇ ತಪ್ಪೇ ಎಂಬುದರ ಕುರಿತು ಚರ್ಚೆಗಳು ದೊಡ್ಡ ಮಟ್ಟದಲ್ಲಿ ಆರಂಭವಾಗಿವೆ. ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿಯ ಮೂಲಕ ತ್ರಿಭಾಷಾ ಸೂತ್ರ ಜಾರಿಗೊಳಿಸಲು ಮುಂದಾದಾಗ ಬಿಜೆಪಿ ಮಿತ್ರಪಕ್ಷ ಎಐಡಿಎಂಕೆ ಅದನ್ನು ತೀವ್ರವಾಗಿ ವಿರೋಧಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅದನ್ನು ನೋವಿನ ಮತ್ತು ದುಃಖಕರ ಸಂಗತಿ ಎಂದು ಕರೆದಿದ್ದು, ತಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಸಾರಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...