Homeಮುಖಪುಟಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿಮಾನ ನಿಲ್ದಾಣದಲ್ಲಿನ ಅಧಿಕಾರಿಯೊಬ್ಬರು ನಾನು ಹಿಂದಿಯಲ್ಲಿ ಮಾತನಾಡದ ಕಾರಣಕ್ಕೆ ‘ನೀವು ಭಾರತೀಯರೆ’ ಎಂದು ಪ್ರಶ್ನಿಸಿದ್ದಾರೆ. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ? ಇದು ಯಾವಾಗಿನಿಂದ ಆಗಿದೆ ಎಂದು ತಮಿಳುನಾಡಿ ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನಿಸಿದ ಬೆನ್ನಲ್ಲೇ ಹಿಂದಿ ಹೇರಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಕುರಿತು ಕರ್ನಾಟಕದಲ್ಲಿಯೂ ಚರ್ಚೆಗಳು ಆರಂಭವಾಗಿದ್ದು, ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ “ಭಾಷೆ ಕಾರಣಕ್ಕೆ ಡಿಎಂಕೆ ಸಂಸದೆ ಕನಿಮೊಳಿಯವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೊಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ” ಎಂದಿದ್ದಾರೆ.

ಇಂಥದ್ದೇ ಅನುಭವ ನನಗೂ ಆಗಿವೆ. ನಾನೂ 2 ಬಾರಿ ಸಂಸದನಾಗಿದ್ದವನು. ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ, ಸಮಾನ ಭಾಷಾ ನೀತಿಗಾಗಿ, ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶದ ಪ್ರತಿಯೊಬ್ಬ ಪ್ರಜೆಯು ತನ್ನ ಭಾಷೆಯಲ್ಲಿ ಮಾಹಿತಿಯನ್ನು ಪಡೆಯುವುದು ಅವನ/ಳ ಮೂಲಭೂತ ಹಕ್ಕು. ಜನರ ಭಾಷೆಯಲ್ಲಿ ಮಾಹಿತಿ ಪಡೆಯುವುದಕ್ಕೆ ಕಾನೂನು ಬೇಕು, ಹೋರಾಟ ಬೇಕು ಎಂದರೆ ಅದು ಪ್ರಜಾಪ್ರಭುತ್ವ ದೇಶವೇ? ಹೈಕೋರ್ಟ್ ಮೂರು ಬಾರಿ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ನೀಡಿದೆ ಎಂದು ಆದೇಶ ನೀಡಿದರೂ ಕೇಂದ್ರ ಸರ್ಕಾರ ವಿಧಿ 343ರ ಅಡಿಯಲ್ಲಿ ನಾವು ಮಾಹಿತಿ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ವಿಧಿ 343 ರಿಂದ 351 ರವರೆಗೆ ಹಿಂದಿ ಭಾಷೆಗೆ ಹೆಚ್ಚುಗಾರಿಕೆ ನೀಡಲಾಗಿದೆ. ಅಲ್ಲಿಂದಲೇ ಇತರ ಭಾಷೆಗಳ ಕಡೆಗಣಿಸುವಿಕೆ ಆರಂಭವಾಗಿದೆ. ಇದು ಹಿಂದಿಯೇತರರನ್ನು ತಮ್ಮ ಅಡಿಯಾಳನ್ನಾಗಿ ಮಾಡಿಕೊಳ್ಳುವ ಉತ್ತರ ಭಾರತ ರಾಜಕೀಯದ ಸ್ಪಷ್ಟ ಹುನ್ನಾರ. ಹಾಗಾಗಿ ಹಿಂದಿಯೇತರ ಸಂಸದರು ಈ ವಿಧಿಗಳ ತಿದ್ದುಪಡಿಗೆ ಹೋರಾಡುವುದೊಂದೆ ಶಾಶ್ವತ ಪರಿಹಾರ” ಎಂದಿದ್ದಾರೆ.

ಏಕತೆ ಎಂಬುದು ಭಾಷಾ ಸಮಾನತೆಯಲ್ಲಿದೆ. ಹಿಂದಿ ಹೇರಿಕೆಯಲ್ಲಿಲ್ಲ ಎಂಬ ಪೋಸ್ಟರ್

ಇನ್ನು ಈ ಕುರಿತು ಇಂದು ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪಿ ಚಿದಂಬರಂ ಸರಣಿ ಟ್ವೀಟ್‌ಗಳನ್ನು ಮಾಡಿ ‘ಚನ್ನೈ ವಿಮಾನ ನಿಲ್ದಾಣದಲ್ಲಿ ಕನಿಮೊಳಿಯವರಿಗಾಗಿರುವ ಈ ಅಹಿತಕರ ಅನುಭವವು ಸಾಮಾನ್ಯವಾದುದ್ದಲ್ಲ’ ಎಂದಿದ್ದಾರೆ.

ಕೆಲವು ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ, ಕೆಲವು ಸಾಮಾನ್ಯ ಜನರೊಂದಿಗೆ ಫೋನಿನಲ್ಲಿ ಮಾತನಾಡುವಾಗ, ಕೆಲವೊಮ್ಮೆ ನೇರವಾಗಿಯೂ ಹಿಂದಿಯಲ್ಲಿಯೇ ಮಾತನಾಡುವಂತೆ ಒತ್ತಡ ಹಾಕುವ ಇದೇ ರೀತಿಯ ಹಲವು ಅಹಿತಕರ ಅನುಭವಗಳು ನನಗೂ ಆಗಿವೆ ಎಂದು ಚಿದಂಬರಂ ತಿಳಿಸಿದ್ದಾರೆ.

ಭಾನುವಾರ ಚನ್ನೈ ವಿಮಾನ ನಿಲ್ದಾಣದಲ್ಲಿ ತನಗೆ ಹಿಂದಿ ಬಾರದ ಕಾರಣ ಇಂಗ್ಲಿಷ್ ಇಲ್ಲವೇ ತಮಿಳಿನಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ನೀವು ಭಾರತೀಯರೆ ಎಂದು ಸಿಐಎಸ್ಎ‌ಫ್ ಭದ್ರತಾ ಅಧಿಕಾರಿ ಪ್ರಶ್ನಿಸಿದ್ದಾರೆ ಎಂದು ಡಿಎಂಕೆ ಸಂಸದೆ ಕನಿಮೊಳಿ ಆರೋಪಿಸಿದ್ದರು. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ ಎಂದು ಅವರು ಕಿಡಿಕಾರಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಪಿ.ಚಿದಂಬರಂ ಸರ್ಕಾರವು ತನ್ನ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಸಲಹೆ ನೀಡಿದ್ದಾರೆ.

ಉತ್ತರ ಭಾರತದಲ್ಲಿ ಹಿಂದಿ ಹೇರಿಕೆಯ ವಿರುದ್ಧ ದನಿ.

ಕೇಂದ್ರ ಸರ್ಕಾರಕ್ಕೆ ಹಿಂದಿ ಮತ್ತು ಇಂಗ್ಲಿಷ್ ಎರಡೂ ಅಧಿಕೃತ ಭಾಷೆಗಳೆಂಬ ನಿಜವಾದ ಕಾಳಜಿಯಿದ್ದರೆ ಅದು ಕೇಂದ್ರದ ಅಡಿಯಲ್ಲಿ ಬರುವ ಎಲ್ಲಾ ಉದ್ಯೋಗಿಗಳಿಗೂ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಹಿಂದಿಯೇತರರು ಕೇಂದ್ರೀಯ ಹುದ್ದೆಗಳಿಗೆ ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಸ್ಪೋಕನ್ ಹಿಂದಿಯನ್ನು ಕೂಡಲೇ ಕಲಿತುಕೊಳ್ಳುತ್ತಾರೆ. ಆದರೆ ಹಿಂದಿ ಭಾಷಿಕರು ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಇತರ ಭಾಷೆಗಳನ್ನು, ಸ್ಪೋಕನ್ ಇಂಗ್ಲಿಷ್‌ ಅನ್ನು ಕಲಿಯಬಾರದೇಕೆ?” ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಈ ಸಮಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದನಿಯೆದ್ದಿದೆ. “ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ, ಬಂಗಾಳಿ ಭಾಷೆಯನ್ನು ಗೌರವಿಸಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ” ಎನ್ನುವ ಪೋಸ್ಟರ್‌ ಇರುವ ಫೋಟೊವೊಂದು ವೈರಲ್ ಆಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಪೋಸ್ಟರ್‌ಗಳನ್ನು ಅಂಟಿಸಬೇಕು, ಕನ್ನಡವನ್ನು ಗೌರವಿಸಿ, ಇಲ್ಲ ಜಾಗ ಖಾಲಿ ಮಾಡಿ ಎಂದು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.

ಇನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೊಷ್ ಹಿಂದಿ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಕನಿಮೊಳಿಯವರಿಗೆ ತೀಕ್ಷ್ಣ ಪ್ರತಿಕ್ರಿಯೆ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಮೀಕರಿಸಿರುವ ಅವರು, ಇನ್ನು 8 ತಿಂಗಳಿನಲ್ಲಿ ರಾಜ್ಯ ಚುನಾವಣೆಯಿದೆ… ಆಗಲೇ ಪ್ರಚಾರ ಆರಂಭವಾಗಿದೆ.. ಎಂದು ಟೀಕಿಸಿದ್ದಾರೆ.

ಕಳೆದ ವರ್ಷ ಕರ್ನಾಟಕದಲ್ಲಿ ಸೆಪ್ಟಂಬರ್ 14 ರಂದು ಹಿಂದಿ ದಿವಸ್ ವಿರೋದಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟಿಸಿರುವುದು.

ಒಟ್ಟಿನಲ್ಲಿ ಹಿಂದಿ ಹೇರಿಕೆ ಸರಿಯೇ ತಪ್ಪೇ ಎಂಬುದರ ಕುರಿತು ಚರ್ಚೆಗಳು ದೊಡ್ಡ ಮಟ್ಟದಲ್ಲಿ ಆರಂಭವಾಗಿವೆ. ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿಯ ಮೂಲಕ ತ್ರಿಭಾಷಾ ಸೂತ್ರ ಜಾರಿಗೊಳಿಸಲು ಮುಂದಾದಾಗ ಬಿಜೆಪಿ ಮಿತ್ರಪಕ್ಷ ಎಐಡಿಎಂಕೆ ಅದನ್ನು ತೀವ್ರವಾಗಿ ವಿರೋಧಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅದನ್ನು ನೋವಿನ ಮತ್ತು ದುಃಖಕರ ಸಂಗತಿ ಎಂದು ಕರೆದಿದ್ದು, ತಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಸಾರಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...