Homeಕರ್ನಾಟಕಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರು

ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರು

ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಇಂತಹ ಆಧಾರರಹಿತ ವರದಿಗಳನ್ನು ಓದುವ ಮೂಲಕ ಭಯಪಡಬಾರದು. -ಟಿಎಸಿ

- Advertisement -
- Advertisement -

ಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಮುಖ ನಗರಗಳು ಲಾಕ್‌ಡೌನ್‌ ಘೋಷಿಸಿವೆ.

ಇದೇ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್‌-19 ವೈರಸ್‌ನಿಂದ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್‌ನಿಂದ ಸೋಂಕಿಗೆ ಒಳಗಾಗಿರುವ ಎರಡು ಪ್ರಕರಣಗಳು ಪತ್ತೆಯಾದ ಕಾರಣ ಕರ್ನಾಟಕದಲ್ಲಿ ಅನೇಕರು ಭಯಭೀತರಾಗಿದ್ದು, ಮತ್ತೊಮ್ಮೆ ಲಾಕ್‌ಡೌನ್‌ ಆಗಬಹುದು ಎಂಬ ವದಂತಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲೆ, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಮತ್ತೊಂದು ಲಾಕ್‌ಡೌನ್‌ ಆಗಬಹುದು ಎಂಬ ವದಂತಿಗಳನ್ನು ತಳ್ಳಿ ಹಾಕಿದೆ.

ಟಿಎಸಿಯ ಅಧ್ಯಕ್ಷರಾದ ಡಾ.ಎಂ.ಕೆ. ಸುದರ್ಶನ್‌ ಈ ವದಂತಿಯನ್ನು ತಳ್ಳಿಹಾಕಿದ್ದು, ’ಡೆಲ್ಟಾ ಪ್ಲಸ್‌ (ಎವೈ 4.2) ರೂಪಾಂತರ ಸೋಂಕಿತರ ಪ್ರಕರಣಗಳ ಆವಿಷ್ಕಾರದಿಂದಾಗಿ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್‌ ಮಾಡಬೇಕು ಎಂಬುವ ಟಿಎಸಿ ವರದಿಗಳು ಆಧಾರರಹಿತ ಮತ್ತು ಅವಾಸ್ತವಿಕವಾಗಿವೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಕೋವಿಡ್‌ ಪ್ರಕರಣಗಳ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಶಿಫಾರಸ್ಸು ಮಾಡಲಾಗಿತ್ತು ಎಂಬುದನ್ನು ಜ್ಞಾಪಿಸಿಕೊಳ್ಳಬಹುದು. ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯು 350ಕ್ಕಿಂತಲೂ ಕಡಿಮೆಯಾಗಿದೆ’ ಎಂದು ಹೇಳಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಡೆಲ್ಟಾ ಪ್ಲಸ್‌ ರೂಪಾಂತರದ ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ದೃಢಪಟ್ಟಿವೆ ಎಂದು ತಿಳಿಸಿದ ಅವರು, ’ಭಾರತದಾದ್ಯಂತ ಜೀನೋಮಿಕ್‌ ಅನುಕ್ರಮದ ಮೂಲಕ 17 ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ದೃಢಪಟ್ಟಿವೆ. ಸೋಂಕಿತರು ಚಿಕಿತ್ಸೆ ಪಡೆದಿದ್ದು, ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ದಾಖಲೆಯಲ್ಲಿ ಜುಲೈನಲ್ಲಿ 23 ಮತ್ತು 43 ವರ್ಷ ವಯೋಮಾನದ ಇಬ್ಬರಲ್ಲಿ ಈ ಸೋಂಕನ್ನು ಗುರುತಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

‘ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಇಂತಹ ಆಧಾರರಹಿತ ವರದಿಗಳನ್ನು ಓದುವ ಮೂಲಕ ಭಯಪಡಬಾರದು. ನಾವು (ಟಿಎಸಿ) ರಾಜ್ಯದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ’ ಎಂದು ಸುದರ್ಶನ್‌ ತಿಳಿಸಿದರು.

ರಾಜ್ಯ ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ ಈವರೆಗೆ, ಕರ್ನಾಟಕದಲ್ಲಿ 29.86 ಲಕ್ಷ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 29.40 ಲಕ್ಷ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬುಧವಾರ (ಅಕ್ಟೋಬರ್ 27) 8,430 ಸಕ್ರಿಯ ಪ್ರಕರಣಗಳಿದ್ದು, ಕಳೆದ ವರ್ಷ ಮಾರ್ಚ್ 10 ರಿಂದ 38,037 ಜನರು ಸೋಂಕಿಗೆ ಬಲಿಯಾಗಿದ್ದಾರೆ.


ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....