Homeಮುಖಪುಟದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

- Advertisement -
- Advertisement -

ಭಿನ್ನ ಧರ್ಮದ ಯುವಕ-ಯುವತಿ ಜೊತೆಯಾಗಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿ, ಅವರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಗುಂಡ್ಯ ಬಳಿ ನಡೆದಿದೆ.

ಪುತ್ತೂರು ಮೂಲದ ಮುಸ್ಲಿಂ ಯುವಕ ಮತ್ತು ವೇಣೂರಿನ ಹಿಂದೂ ಯುವತಿ ಆಟೋವೊಂದರಲ್ಲಿ ಗುಂಡ್ಯಗೆ ತೆರಳಿದ್ದರು. ಅವರಿಬ್ಬರು ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಬಲಪಂಥೀಯ ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿ, ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಬಲವಂತವಾಗಿ ಆ ಜೋಡಿಯನ್ನು ಪುತ್ತೂರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಕುರಿತು 14 ಸೆಕೆಂಡ್‌ಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಯುವತಿಯು “ನನ್ನ ಇಷ್ಟದವರ ಜೊತೆ ಸುತ್ತಾಡುತ್ತೇನೆ, ನೀವ್ಯಾರು ಕೇಳಲು” ಎಂದು ಬಲಪಂಥೀಯ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಳ್ಳುವುದನ್ನು ಕಾಣಬಹುದಾಗಿದೆ. ಬಲಪಂಥೀಯ ಕಾರ್ಯಕರ್ತನೊಬ್ಬ ಕೂಗಾಡುವುದು ಸಹ ದಾಖಲಾಗಿದೆ.

ಪುತ್ತೂರಿನ ಯುವಕ ತನ್ನ ಸ್ನೇಹಿತನ ಆಟೋದಲ್ಲಿ ಗೆಳತಿಯೊಡನೆ ಗುಂಡ್ಯ-ಸುಬ್ರಮಣ್ಯ ರಸ್ತೆಯಲ್ಲಿ ಬಂದಿದ್ದಾನೆ. ಗುಂಡ್ಯ ಸಮೀಪದ ದೇರಣೆ ಕ್ರಾಸ್‌ನಲ್ಲಿ ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಕೆಲವರು ಬಲಪಂಥೀಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬಂದ ಕಾರ್ಯಕರ್ತರು ಆ ಜೋಡಿಗೆ ಕಿರುಕುಳ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ಹಿಂದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ರೀತಿಯ ಹತ್ತಾರು ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗಿವೆ. ಅದರಲ್ಲಿಯೂ ಬಸವರಾಜ ಬೊಮ್ಮಾಯಿಯವರು ಸಿಎಂ ಆದ ನಂತರ ಪ್ರಕರಣಗಳು ವೇಗ ಪಡೆದುಕೊಂಡಿವೆ. ಅವರು ಉಡುಪಿಯಲ್ಲಿಯೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಂಡು ಮಾತನಾಡಿದ್ದರು.‌ “ನೈತಿಕತೆ ಇರಬೇಕು.‌ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ” ಎಂದು ಹೇಳುವ ಮೂಲಕ ಮತೀಯ ಗೂಂಡಾಗಿರಿಗೆ ಒಪ್ಪಿಗೆಯ ಮುದ್ರೆಯೊತ್ತಿದ್ದರು. ಅದಾದ ನಂತರ ಮಂಗಳೂರಿನಲ್ಲಿ ಹೋಟೆಲ್‌ಗೆ ನುಗ್ಗಿ ಜೋಡಿಗೆ ಹಲ್ಲೆ ನಡೆಸಲಾಯಿತು. ಅದೇ ಮಂಗಳೂರಿನಲ್ಲಿ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಯುವನಕ ಮೇಲೆ ಹಲ್ಲೆ ನಡೆಸಿ ಮತೀಯ ಗೂಂಡಾಗಿರಿ ಮೆರಯಲಾಯಿತು. ಪುತ್ತೂರಿನಲ್ಲಿ ಬಸ್‌ನಲ್ಲಿ ವಿಭಿನ್ನ ಧರ್ಮದ ಹುಡುಗ ಹುಡುಗಿ ತೆರಳುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಕಿರುಕುಳ ನೀಡಲಾಯಿತು.  ಒಂದೇ ಕಾರಿನಲ್ಲಿ ಹಿಂದೂ ಮುಸ್ಲಿಮರು ತೆರಳುತ್ತಿದ್ದಾಗ ಅದನ್ನು ತಡೆದು ಹಿಂಸೆ ನೀಡಲಾಗಿತ್ತು. ಮುಸ್ಲಿಂ ಸಹೋದ್ಯೋಗಿಯೊಂದಿಗೆ ಹೋಟೆಲ್‌ನಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಬೆದರಿಕೆ ಹಾಕಲಾಯ್ತು. ಈ ರೀತಿಯ ಹತ್ತಾರು ಮಾರೆಲ್ ಪೊಲೀಸಿಂಗ್ ಘಟನೆಗಳು ಎರಡು ತಿಂಗಳಲ್ಲಿ ವರದಿಯಾಗಿದ್ದವು. ಈಗ ಅಂತದ್ದೆ ಘಟನೆಗಳು ಮರುಕಳಿಸಿ ಆತಂಕ ಹುಟ್ಟಿಸಿವೆ.

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....