Homeಮುಖಪುಟದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

- Advertisement -
- Advertisement -

ಭಿನ್ನ ಧರ್ಮದ ಯುವಕ-ಯುವತಿ ಜೊತೆಯಾಗಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿ, ಅವರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಗುಂಡ್ಯ ಬಳಿ ನಡೆದಿದೆ.

ಪುತ್ತೂರು ಮೂಲದ ಮುಸ್ಲಿಂ ಯುವಕ ಮತ್ತು ವೇಣೂರಿನ ಹಿಂದೂ ಯುವತಿ ಆಟೋವೊಂದರಲ್ಲಿ ಗುಂಡ್ಯಗೆ ತೆರಳಿದ್ದರು. ಅವರಿಬ್ಬರು ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಬಲಪಂಥೀಯ ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿ, ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಬಲವಂತವಾಗಿ ಆ ಜೋಡಿಯನ್ನು ಪುತ್ತೂರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಕುರಿತು 14 ಸೆಕೆಂಡ್‌ಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಯುವತಿಯು “ನನ್ನ ಇಷ್ಟದವರ ಜೊತೆ ಸುತ್ತಾಡುತ್ತೇನೆ, ನೀವ್ಯಾರು ಕೇಳಲು” ಎಂದು ಬಲಪಂಥೀಯ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಳ್ಳುವುದನ್ನು ಕಾಣಬಹುದಾಗಿದೆ. ಬಲಪಂಥೀಯ ಕಾರ್ಯಕರ್ತನೊಬ್ಬ ಕೂಗಾಡುವುದು ಸಹ ದಾಖಲಾಗಿದೆ.

ಪುತ್ತೂರಿನ ಯುವಕ ತನ್ನ ಸ್ನೇಹಿತನ ಆಟೋದಲ್ಲಿ ಗೆಳತಿಯೊಡನೆ ಗುಂಡ್ಯ-ಸುಬ್ರಮಣ್ಯ ರಸ್ತೆಯಲ್ಲಿ ಬಂದಿದ್ದಾನೆ. ಗುಂಡ್ಯ ಸಮೀಪದ ದೇರಣೆ ಕ್ರಾಸ್‌ನಲ್ಲಿ ಆಟೋ ನಿಲ್ಲಿಸಿ ಸುತ್ತಾಡುತ್ತಿದ್ದಾಗ ಕೆಲವರು ಬಲಪಂಥೀಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬಂದ ಕಾರ್ಯಕರ್ತರು ಆ ಜೋಡಿಗೆ ಕಿರುಕುಳ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ಹಿಂದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ರೀತಿಯ ಹತ್ತಾರು ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗಿವೆ. ಅದರಲ್ಲಿಯೂ ಬಸವರಾಜ ಬೊಮ್ಮಾಯಿಯವರು ಸಿಎಂ ಆದ ನಂತರ ಪ್ರಕರಣಗಳು ವೇಗ ಪಡೆದುಕೊಂಡಿವೆ. ಅವರು ಉಡುಪಿಯಲ್ಲಿಯೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಂಡು ಮಾತನಾಡಿದ್ದರು.‌ “ನೈತಿಕತೆ ಇರಬೇಕು.‌ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ” ಎಂದು ಹೇಳುವ ಮೂಲಕ ಮತೀಯ ಗೂಂಡಾಗಿರಿಗೆ ಒಪ್ಪಿಗೆಯ ಮುದ್ರೆಯೊತ್ತಿದ್ದರು. ಅದಾದ ನಂತರ ಮಂಗಳೂರಿನಲ್ಲಿ ಹೋಟೆಲ್‌ಗೆ ನುಗ್ಗಿ ಜೋಡಿಗೆ ಹಲ್ಲೆ ನಡೆಸಲಾಯಿತು. ಅದೇ ಮಂಗಳೂರಿನಲ್ಲಿ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಯುವನಕ ಮೇಲೆ ಹಲ್ಲೆ ನಡೆಸಿ ಮತೀಯ ಗೂಂಡಾಗಿರಿ ಮೆರಯಲಾಯಿತು. ಪುತ್ತೂರಿನಲ್ಲಿ ಬಸ್‌ನಲ್ಲಿ ವಿಭಿನ್ನ ಧರ್ಮದ ಹುಡುಗ ಹುಡುಗಿ ತೆರಳುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಕಿರುಕುಳ ನೀಡಲಾಯಿತು.  ಒಂದೇ ಕಾರಿನಲ್ಲಿ ಹಿಂದೂ ಮುಸ್ಲಿಮರು ತೆರಳುತ್ತಿದ್ದಾಗ ಅದನ್ನು ತಡೆದು ಹಿಂಸೆ ನೀಡಲಾಗಿತ್ತು. ಮುಸ್ಲಿಂ ಸಹೋದ್ಯೋಗಿಯೊಂದಿಗೆ ಹೋಟೆಲ್‌ನಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಬೆದರಿಕೆ ಹಾಕಲಾಯ್ತು. ಈ ರೀತಿಯ ಹತ್ತಾರು ಮಾರೆಲ್ ಪೊಲೀಸಿಂಗ್ ಘಟನೆಗಳು ಎರಡು ತಿಂಗಳಲ್ಲಿ ವರದಿಯಾಗಿದ್ದವು. ಈಗ ಅಂತದ್ದೆ ಘಟನೆಗಳು ಮರುಕಳಿಸಿ ಆತಂಕ ಹುಟ್ಟಿಸಿವೆ.

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....