Homeಕರ್ನಾಟಕಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ, ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ: ಸಿದ್ದು

ಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ, ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ: ಸಿದ್ದು

ಮೊದಲು ನೆರೆ ಪರಿಹಾರ‌ ಮಾಡಿ ಲೆಕ್ಕಕೊಡಿ, ಆ ಮೇಲೆ ಟಿಪ್ಪು, ಸಾವರ್ಕರ್ ಬಗ್ಗೆ ಮಾತನಾಡೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ

- Advertisement -
- Advertisement -

ನೆರೆಪೀಡಿತ ಪ್ರದೇಶಗಳ ಜನರ ಸಂಕಷ್ಟಗಳನ್ನು ಕಣ್ಣಾರೆ ಕಂಡು ಮಾತನಾಡಿದರೆ ಅದು ನಿಮಗೆ ಸುಳ್ಳಿನಂತೆ ಕಾಣಿಸುತ್ತಿದೆಯೇ? ಜಿಲ್ಲಾಧಿಕಾರಿಗಳು ಕೊಟ್ಟ ಹೇಳಿಕೆ ಓದಲು ನಾನು ಯಡಿಯೂರಪ್ಪ ಅಲ್ಲ, ನಾನು ಸಿದ್ದರಾಮಯ್ಯ. ಪ್ರತ್ಯಕ್ಷವಾಗಿ ಪರಿಶೀಲನೆ ಮಾಡಿ ಮಾತನಾಡ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೆ ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದಾರೆ.

ನೀವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಕುಸಿದುಬಿದ್ದ ಮನೆಗಳ ಸಂಖ್ಯೆ 2,47,628 ಎಂದು ಹೇಳಿದ್ದೀರಿ. ಅಷ್ಟು ಮನೆ ಮಾಲೀಕರಿಗೆ ತಲಾ ರೂ.10 ,000 ಪರಿಹಾರ ಕೊಟ್ಟಿದ್ದೀರಾ? ಅಷ್ಟು ಮನೆಗಳನ್ನು ಕಟ್ಟಿಸಿಕೊಡುತ್ತಿದ್ದೀರಾ? ಲೆಕ್ಕ‌ಕೊಡಿ. ಪತ್ರಿಕೆಗಳ ವರದಿಗಳನ್ನು ಕಣ್ಣುಬಿಟ್ಟು ಓದಿ. ವಿಧಾನಸೌಧದಲ್ಲಿ ಕೂತು ಸಭೆ ನಡೆಸುತ್ತಿರುವ ನೀವು ಮತ್ತು ನಿಮ್ಮ ಸಹದ್ಯೋಗಿಗಳು ಒಮ್ಮೆ ನೆರೆಬಾಧಿತ ಪ್ರದೇಶಗಳ ಕಡೆ ಹೆಜ್ಜೆ ಹಾಕಿ. ನಿಮ್ಮ ಉಪಚುನಾವಣಾ ತಯಾರಿ ಕಸರತ್ತು ನಿಲ್ಲಿಸಿ ಜನರ ಕಷ್ಟದ ಕಡೆ ಗಮನ ಕೊಡಿ ಎಂದು ಸಿದ್ದು ಕಿಡಿಕಾರಿದ್ದಾರೆ.

ನೆರೆಬಾಧಿತ ಜನ ತಾತ್ಕಾಲಿಕ ಶೆಡ್‌ನಲ್ಲಿ ನರಳಾಡುತ್ತಿದ್ದಾರೆ, ಬಯಲಲ್ಲಿ ದೀಪಾವಳಿ ಆಚರಿಸಿದ್ದಾರೆ. ಅಧಿಕಾರಿಗಳು ಅಲ್ಲಿಂದಲೂ ಓಡಿಸಲು ಪ್ರಯತ್ನಿಸುತ್ತಿದ್ದಾರೆ, ಪರಿಹಾರದ ಹಣವೂ ಹೆಚ್ಚಿನವರನ್ನು ತಲುಪಿಲ್ಲ. ಸಂತ್ರಸ್ತರ ಪುನರ್ ವಸತಿ ಕಾರ್ಯ ಪ್ರಾರಂಭವೇ ಆಗಿಲ್ಲ. ಇದಕ್ಕೆ ಏನ್ ಹೇಳ್ತಿರಾ ಯಡಿಯೂರಪ್ಪನವರೇ? ಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ. ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ ನಿಮ್ಮ ಜೀವಂತಿಕೆ ತೋರಿಸಿ.‌ ಜನರ ಗಮನ ಬೇರೆ ಕಡೆ ಸೆಳೆಯುವ ಕುತಂತ್ರ ಬೇಡ. ಮೊದಲು ನೆರೆ ಪರಿಹಾರ‌ ಮಾಡಿ ಲೆಕ್ಕಕೊಡಿ,
ಆ ಮೇಲೆ ಟಿಪ್ಪು, ಸಾವರ್ಕರ್ ಬಗ್ಗೆ ಮಾತನಾಡೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನನ್ನ ಮಾತು ನಿಮಗೆ ಸಹಿಸಲಾಗುವುದಿಲ್ಲ, ಇದಕ್ಕಾಗಿಯೇ ಕಾಟಾಚಾರಕ್ಕೆ ವಿಧಾನಮಂಡಲ ಅಧಿವೇಶನ ನಡೆಸಿ ಮುಗಿಸಿಬಿಟ್ಟಿರಿ. ಈಗ ಯಾವುದೋ ವಿಡಿಯೋ, ಇನ್ನಾವುದೋ ಸುಳ್ಳು ಆರೋಪಗಳನ್ನು ಮಾಡಿ ಬಾಯಿ ಮುಚ್ಚಿಸಲು ನೋಡುತ್ತಿದ್ದೀರಿ. ಕರ್ನಾಟಕದ ಬಿಜೆಪಿ ನಾಯಕರೇ, ಈ ರೀತಿ ನಿಮ್ಮಿಂದ ನನ್ನ ಬಾಯಿ ಕಟ್ಟಲಾಗದು ಎಂದು ಸವಾಲು ಹಾಕಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...