Homeಕರ್ನಾಟಕಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ, ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ: ಸಿದ್ದು

ಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ, ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ: ಸಿದ್ದು

ಮೊದಲು ನೆರೆ ಪರಿಹಾರ‌ ಮಾಡಿ ಲೆಕ್ಕಕೊಡಿ, ಆ ಮೇಲೆ ಟಿಪ್ಪು, ಸಾವರ್ಕರ್ ಬಗ್ಗೆ ಮಾತನಾಡೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ

- Advertisement -
- Advertisement -

ನೆರೆಪೀಡಿತ ಪ್ರದೇಶಗಳ ಜನರ ಸಂಕಷ್ಟಗಳನ್ನು ಕಣ್ಣಾರೆ ಕಂಡು ಮಾತನಾಡಿದರೆ ಅದು ನಿಮಗೆ ಸುಳ್ಳಿನಂತೆ ಕಾಣಿಸುತ್ತಿದೆಯೇ? ಜಿಲ್ಲಾಧಿಕಾರಿಗಳು ಕೊಟ್ಟ ಹೇಳಿಕೆ ಓದಲು ನಾನು ಯಡಿಯೂರಪ್ಪ ಅಲ್ಲ, ನಾನು ಸಿದ್ದರಾಮಯ್ಯ. ಪ್ರತ್ಯಕ್ಷವಾಗಿ ಪರಿಶೀಲನೆ ಮಾಡಿ ಮಾತನಾಡ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೆ ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದಾರೆ.

ನೀವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಕುಸಿದುಬಿದ್ದ ಮನೆಗಳ ಸಂಖ್ಯೆ 2,47,628 ಎಂದು ಹೇಳಿದ್ದೀರಿ. ಅಷ್ಟು ಮನೆ ಮಾಲೀಕರಿಗೆ ತಲಾ ರೂ.10 ,000 ಪರಿಹಾರ ಕೊಟ್ಟಿದ್ದೀರಾ? ಅಷ್ಟು ಮನೆಗಳನ್ನು ಕಟ್ಟಿಸಿಕೊಡುತ್ತಿದ್ದೀರಾ? ಲೆಕ್ಕ‌ಕೊಡಿ. ಪತ್ರಿಕೆಗಳ ವರದಿಗಳನ್ನು ಕಣ್ಣುಬಿಟ್ಟು ಓದಿ. ವಿಧಾನಸೌಧದಲ್ಲಿ ಕೂತು ಸಭೆ ನಡೆಸುತ್ತಿರುವ ನೀವು ಮತ್ತು ನಿಮ್ಮ ಸಹದ್ಯೋಗಿಗಳು ಒಮ್ಮೆ ನೆರೆಬಾಧಿತ ಪ್ರದೇಶಗಳ ಕಡೆ ಹೆಜ್ಜೆ ಹಾಕಿ. ನಿಮ್ಮ ಉಪಚುನಾವಣಾ ತಯಾರಿ ಕಸರತ್ತು ನಿಲ್ಲಿಸಿ ಜನರ ಕಷ್ಟದ ಕಡೆ ಗಮನ ಕೊಡಿ ಎಂದು ಸಿದ್ದು ಕಿಡಿಕಾರಿದ್ದಾರೆ.

ನೆರೆಬಾಧಿತ ಜನ ತಾತ್ಕಾಲಿಕ ಶೆಡ್‌ನಲ್ಲಿ ನರಳಾಡುತ್ತಿದ್ದಾರೆ, ಬಯಲಲ್ಲಿ ದೀಪಾವಳಿ ಆಚರಿಸಿದ್ದಾರೆ. ಅಧಿಕಾರಿಗಳು ಅಲ್ಲಿಂದಲೂ ಓಡಿಸಲು ಪ್ರಯತ್ನಿಸುತ್ತಿದ್ದಾರೆ, ಪರಿಹಾರದ ಹಣವೂ ಹೆಚ್ಚಿನವರನ್ನು ತಲುಪಿಲ್ಲ. ಸಂತ್ರಸ್ತರ ಪುನರ್ ವಸತಿ ಕಾರ್ಯ ಪ್ರಾರಂಭವೇ ಆಗಿಲ್ಲ. ಇದಕ್ಕೆ ಏನ್ ಹೇಳ್ತಿರಾ ಯಡಿಯೂರಪ್ಪನವರೇ? ಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ. ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ ನಿಮ್ಮ ಜೀವಂತಿಕೆ ತೋರಿಸಿ.‌ ಜನರ ಗಮನ ಬೇರೆ ಕಡೆ ಸೆಳೆಯುವ ಕುತಂತ್ರ ಬೇಡ. ಮೊದಲು ನೆರೆ ಪರಿಹಾರ‌ ಮಾಡಿ ಲೆಕ್ಕಕೊಡಿ,
ಆ ಮೇಲೆ ಟಿಪ್ಪು, ಸಾವರ್ಕರ್ ಬಗ್ಗೆ ಮಾತನಾಡೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನನ್ನ ಮಾತು ನಿಮಗೆ ಸಹಿಸಲಾಗುವುದಿಲ್ಲ, ಇದಕ್ಕಾಗಿಯೇ ಕಾಟಾಚಾರಕ್ಕೆ ವಿಧಾನಮಂಡಲ ಅಧಿವೇಶನ ನಡೆಸಿ ಮುಗಿಸಿಬಿಟ್ಟಿರಿ. ಈಗ ಯಾವುದೋ ವಿಡಿಯೋ, ಇನ್ನಾವುದೋ ಸುಳ್ಳು ಆರೋಪಗಳನ್ನು ಮಾಡಿ ಬಾಯಿ ಮುಚ್ಚಿಸಲು ನೋಡುತ್ತಿದ್ದೀರಿ. ಕರ್ನಾಟಕದ ಬಿಜೆಪಿ ನಾಯಕರೇ, ಈ ರೀತಿ ನಿಮ್ಮಿಂದ ನನ್ನ ಬಾಯಿ ಕಟ್ಟಲಾಗದು ಎಂದು ಸವಾಲು ಹಾಕಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...