Homeಕರ್ನಾಟಕಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ, ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ: ಸಿದ್ದು

ಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ, ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ: ಸಿದ್ದು

ಮೊದಲು ನೆರೆ ಪರಿಹಾರ‌ ಮಾಡಿ ಲೆಕ್ಕಕೊಡಿ, ಆ ಮೇಲೆ ಟಿಪ್ಪು, ಸಾವರ್ಕರ್ ಬಗ್ಗೆ ಮಾತನಾಡೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ

- Advertisement -
- Advertisement -

ನೆರೆಪೀಡಿತ ಪ್ರದೇಶಗಳ ಜನರ ಸಂಕಷ್ಟಗಳನ್ನು ಕಣ್ಣಾರೆ ಕಂಡು ಮಾತನಾಡಿದರೆ ಅದು ನಿಮಗೆ ಸುಳ್ಳಿನಂತೆ ಕಾಣಿಸುತ್ತಿದೆಯೇ? ಜಿಲ್ಲಾಧಿಕಾರಿಗಳು ಕೊಟ್ಟ ಹೇಳಿಕೆ ಓದಲು ನಾನು ಯಡಿಯೂರಪ್ಪ ಅಲ್ಲ, ನಾನು ಸಿದ್ದರಾಮಯ್ಯ. ಪ್ರತ್ಯಕ್ಷವಾಗಿ ಪರಿಶೀಲನೆ ಮಾಡಿ ಮಾತನಾಡ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೆ ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದಾರೆ.

ನೀವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಕುಸಿದುಬಿದ್ದ ಮನೆಗಳ ಸಂಖ್ಯೆ 2,47,628 ಎಂದು ಹೇಳಿದ್ದೀರಿ. ಅಷ್ಟು ಮನೆ ಮಾಲೀಕರಿಗೆ ತಲಾ ರೂ.10 ,000 ಪರಿಹಾರ ಕೊಟ್ಟಿದ್ದೀರಾ? ಅಷ್ಟು ಮನೆಗಳನ್ನು ಕಟ್ಟಿಸಿಕೊಡುತ್ತಿದ್ದೀರಾ? ಲೆಕ್ಕ‌ಕೊಡಿ. ಪತ್ರಿಕೆಗಳ ವರದಿಗಳನ್ನು ಕಣ್ಣುಬಿಟ್ಟು ಓದಿ. ವಿಧಾನಸೌಧದಲ್ಲಿ ಕೂತು ಸಭೆ ನಡೆಸುತ್ತಿರುವ ನೀವು ಮತ್ತು ನಿಮ್ಮ ಸಹದ್ಯೋಗಿಗಳು ಒಮ್ಮೆ ನೆರೆಬಾಧಿತ ಪ್ರದೇಶಗಳ ಕಡೆ ಹೆಜ್ಜೆ ಹಾಕಿ. ನಿಮ್ಮ ಉಪಚುನಾವಣಾ ತಯಾರಿ ಕಸರತ್ತು ನಿಲ್ಲಿಸಿ ಜನರ ಕಷ್ಟದ ಕಡೆ ಗಮನ ಕೊಡಿ ಎಂದು ಸಿದ್ದು ಕಿಡಿಕಾರಿದ್ದಾರೆ.

ನೆರೆಬಾಧಿತ ಜನ ತಾತ್ಕಾಲಿಕ ಶೆಡ್‌ನಲ್ಲಿ ನರಳಾಡುತ್ತಿದ್ದಾರೆ, ಬಯಲಲ್ಲಿ ದೀಪಾವಳಿ ಆಚರಿಸಿದ್ದಾರೆ. ಅಧಿಕಾರಿಗಳು ಅಲ್ಲಿಂದಲೂ ಓಡಿಸಲು ಪ್ರಯತ್ನಿಸುತ್ತಿದ್ದಾರೆ, ಪರಿಹಾರದ ಹಣವೂ ಹೆಚ್ಚಿನವರನ್ನು ತಲುಪಿಲ್ಲ. ಸಂತ್ರಸ್ತರ ಪುನರ್ ವಸತಿ ಕಾರ್ಯ ಪ್ರಾರಂಭವೇ ಆಗಿಲ್ಲ. ಇದಕ್ಕೆ ಏನ್ ಹೇಳ್ತಿರಾ ಯಡಿಯೂರಪ್ಪನವರೇ? ಸತ್ತು ಹೋಗಿರುವ ಸರ್ಕಾರ ಮಾತ್ರ ಹೀಗಿರಲು ಸಾಧ್ಯ. ಜೀವಂತವಿದ್ದರೆ ಜನರ ಕಷ್ಟಗಳಿಗೆ ಸ್ಪಂದಿಸಿ ನಿಮ್ಮ ಜೀವಂತಿಕೆ ತೋರಿಸಿ.‌ ಜನರ ಗಮನ ಬೇರೆ ಕಡೆ ಸೆಳೆಯುವ ಕುತಂತ್ರ ಬೇಡ. ಮೊದಲು ನೆರೆ ಪರಿಹಾರ‌ ಮಾಡಿ ಲೆಕ್ಕಕೊಡಿ,
ಆ ಮೇಲೆ ಟಿಪ್ಪು, ಸಾವರ್ಕರ್ ಬಗ್ಗೆ ಮಾತನಾಡೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನನ್ನ ಮಾತು ನಿಮಗೆ ಸಹಿಸಲಾಗುವುದಿಲ್ಲ, ಇದಕ್ಕಾಗಿಯೇ ಕಾಟಾಚಾರಕ್ಕೆ ವಿಧಾನಮಂಡಲ ಅಧಿವೇಶನ ನಡೆಸಿ ಮುಗಿಸಿಬಿಟ್ಟಿರಿ. ಈಗ ಯಾವುದೋ ವಿಡಿಯೋ, ಇನ್ನಾವುದೋ ಸುಳ್ಳು ಆರೋಪಗಳನ್ನು ಮಾಡಿ ಬಾಯಿ ಮುಚ್ಚಿಸಲು ನೋಡುತ್ತಿದ್ದೀರಿ. ಕರ್ನಾಟಕದ ಬಿಜೆಪಿ ನಾಯಕರೇ, ಈ ರೀತಿ ನಿಮ್ಮಿಂದ ನನ್ನ ಬಾಯಿ ಕಟ್ಟಲಾಗದು ಎಂದು ಸವಾಲು ಹಾಕಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...